ಉಡುಪಿ : 10 ಸೆಂಟ್ಸ್ ವರೆಗಿನ ಭೂ ಪರಿವರ್ತನೆ ಅಧಿಕಾರ ಡಿಸಿಗೆ
Team Udayavani, Nov 6, 2022, 4:01 PM IST
ಉಡುಪಿ : ಪಿಟಿಸಿಎಲ್ ಕಾಯ್ದೆ ವ್ಯಾಪ್ತಿಗೆ ಒಳಪಡುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮಂಜೂರಾದ ಜಮೀನಿನ ಕನ್ವರ್ಷನ್ ಸರಕಾರದ ಮಟ್ಟದಲ್ಲಿ ಆಗಬೇಕಿತ್ತು. ಇದೀಗ ಸರಕಾರ ರಾಜ್ಯಾದ್ಯಂತ ಎಸ್ಸಿ, ಎಸ್ಟಿ ಅವರಿಗೆ 10 ಸೆಂಟ್ಸ್/4 ಗುಂಟೆ ವರೆಗೆ ಸ್ವಂತ ವಾಸದ ಉದ್ದೇಶಕ್ಕೆ ಮನೆ ನಿರ್ಮಿಸಲು ಜಿಲ್ಲಾಧಿಕಾರಿ ಹಂತದಲ್ಲಿಯೇ ಭೂ ಪರಿವರ್ತನೆಗೆ ಅವಕಾಶ ನೀಡಿ ಸರಕಾರ ಆದೇಶ ಹೊರಡಿಸಿದೆ ಎಂದು ಶಾಸಕ ಕೆ. ರಘುಪತಿ ಭಟ್ ತಿಳಿಸಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದವರು ಪಿಟಿಸಿಎಲ್ ಕಾಯ್ದೆ ವ್ಯಾಪ್ತಿಗೆ ಒಳಪಡುವ ಜಮೀನುಗಳಲ್ಲಿ ಸ್ವಂತ ವಾಸ್ತವ್ಯದ ಉದ್ದೇಶಕ್ಕಾಗಿ ಭೂ ಪರಿವರ್ತನೆ ಮಾಡಲು ಅರ್ಜಿ ಸಲ್ಲಿಸಿದ್ದಲ್ಲಿ ಈ ಪ್ರಕ್ರಿಯೆಗಳು ಸರಕಾರದ ಹಂತದಲ್ಲಿ ವಿಳಂಬವಾಗಿ ಸಂಕಷ್ಟಕ್ಕೆ ಒಳಗಾಗುತ್ತಿದ್ದರು. ಸರಕಾರದ ಈ ಆದೇಶದಿಂದಾಗಿ ಎಸ್ಸಿ, ಎಸ್ಟಿ ಸಮುದಾಯದವರಿಗೆ ವಿಳಂಬವಾಗದೆ ಮನೆ ಕಟ್ಟಿಕೊಳ್ಳಲು ಅನುಕೂಲವಾಗುತ್ತದೆ. ಆದರೆ ಮಾರಾಟ ಮಾಡುವಂತಿಲ್ಲ. ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆಗೆ ಕಂದಾಯ ಸಚಿವ ಆರ್. ಅಶೋಕ್ ಕೊಕ್ಕರ್ಣೆಗೆ ಆಗಮಿಸಿದ್ದಾಗ ಈ ಬಗ್ಗೆ ಅವರ ಗಮನಕ್ಕೆ ತರಲಾಗಿದ್ದು, ವಿಧಾನಸಭೆಯಲ್ಲಿಯೂ ಇದನ್ನು ಪ್ರಸ್ತಾವ ಮಾಡಲಾಗಿತ್ತು ಎಂದು ಶಾಸಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ