
ಭಯೋತ್ಪಾದಕನಿಗೆ ಹೋಲಿಕೆ: ಪ್ರಕರಣ ಸುಖಾಂತ್ಯ
Team Udayavani, Nov 29, 2022, 6:50 AM IST

ಉಡುಪಿ: ತರಗತಿಯಲ್ಲಿ ತನ್ನನ್ನು ಭಯೋತ್ಪಾದಕನಿಗೆ ಹೋಲಿಸಿದ ಪ್ರಾಧ್ಯಾಪಕರ ಮಾತಿಗೆ ವಿದ್ಯಾರ್ಥಿಯೋರ್ವ ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆದಿದೆ.
ಎಂಐಟಿ ಎಂಜಿನಿಯರಿಂಗ್ ವಿಭಾಗದ ತರಗತಿಯಲ್ಲಿ ಕೆಲ ದಿನಗಳ ಹಿಂದೆ ಈ ಘಟನೆ ನಡೆ ದಿದೆ. ವಿದ್ಯಾರ್ಥಿಯು ತನ್ನನ್ನು ಭಯೋ ತ್ಪಾದಕ ಎಂದು ಕರೆದ ಬೋಧಕ ಸಿಬಂದಿಯನ್ನು ಪ್ರಶ್ನಿಸುತ್ತಿರುವುದು ವೀಡಿಯೋದಲ್ಲಿ ಕಂಡು ಬಂದಿದೆ.
ಘಟನೆ ಬಗ್ಗೆ ಪ್ರಾಧ್ಯಾಪಕರು ವಿದ್ಯಾರ್ಥಿಯ ಕ್ಷಮೆ ಯಾಚಿಸಿದ್ದಾರೆ. ಘಟನೆ ಬಳಿಕ ಪ್ರಾಧ್ಯಾಪಕರ ಜತೆಗೆ ಮಾತನಾಡಿದ್ದು, ಉದ್ದೇಶಪೂರ್ವಕವಾಗಿ ಪದ ಬಳಕೆ ಮಾಡಿಲ್ಲ ಎಂಬುದು ಅರಿವಿಗೆ ಬಂದಿದೆ. ಈ ವಿವಾದವನ್ನು ಕೊನೆ ಗೊಳಿಸಿದ್ದೇವೆ ಎಂದು ವಿದ್ಯಾರ್ಥಿ ಪ್ರತಿಕ್ರಿಯಿಸಿದ್ದಾನೆ.
ಪ್ರಕರಣವನ್ನು ಆಂತರಿಕ ತನಿಖೆಗೆ ಒಳಪಡಿಸಿರುವ ಸಂಸ್ಥೆಯು, ವಿಚಾರಣೆ ಪೂರ್ಣಗೊಳ್ಳುವವರೆಗೂ ಸಂಬಂಧಪಟ್ಟ ಸಿಬಂದಿಗೆ ತರಗತಿ ಪ್ರವೇಶಿಸದಂತೆ ಸೂಚನೆ ನೀಡಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
