ಆ್ಯಸಿಡ್‌ ಸಂತ್ರಸ್ತರಿಗೆ ಕಾನೂನು ಪ್ರಾಧಿಕಾರ ನೆರವು: ವೆಂಕಟೇಶ್‌


Team Udayavani, Aug 23, 2017, 8:10 AM IST

ACID.jpg

ಉಡುಪಿ: ಆ್ಯಸಿಡ್‌ ದಾಳಿಯಿಂದ ಸಂತ್ರಸ್ತರಾದವರು ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಸೂಕ್ತ ಪರಿಹಾರ ಪಡೆಯಬಹುದು ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ವೆಂಕಟೇಶ್‌ ನಾಯಕ್‌ ಟಿ. ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಉಡುಪಿ, ಜಿಲ್ಲಾ ಪೊಲೀಸ್‌ ಇಲಾಖೆ ಮತ್ತು ವೈಕುಂಠ ಬಾಳಿಗಾ ಕಾನೂನು ಮಹಾ ವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ಮಂಗಳವಾರ ನಡೆದ ಪೊಲೀಸ್‌ ದೂರು ಪ್ರಾಧಿಕಾರ, ಕರ್ನಾಟಕ ಸಂತ್ರಸ್ತರ ಪರಿಹಾರ ಯೋಜನೆ-2011 ಮತ್ತು ಆ್ಯಸಿಡ್‌ ಸಂತ್ರಸ್ತರಿಗೆ ಸಿಗುವ ಕಾನೂನು ಸೇವೆಗಳ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.

ಸಂತ್ರಸ್ತರಿಗೆ ಸೌಲಭ್ಯ
ಆಸಿಡ್‌ ದಾಳಿಗೆ ಒಳಗಾಗಿ ಶೇ.80 ಕ್ಕೂ ಹೆಚ್ಚು ಹಾನಿಗೊಳಗಾದವರಿಗೆ 3 ಲಕ್ಷ, ಶೇ.40 ರಿಂದ 80 ರೊಳಗೆ ಹಾನಿಗೊಳಗಾದವರಿಗೆ ಹಾಗೂ ಶೇ. 40ಕ್ಕಿಂತ ಕಡಿಮೆ ಹಾನಿಗೊಳಗಾದವರಿಗೆ 1 ಲಕ್ಷ ಪರಿಹಾರ ಮತ್ತು ಅತ್ಯಾಚಾರಕ್ಕೆ ಒಳಗಾದರೆ ಅಪ್ರಾಪ್ತ ವಯಸ್ಕರು 3 ಲಕ್ಷ ಹಾಗೂ ವಯಸ್ಕರು 1.50 ಲಕ್ಷ ಪರಿಹಾರವನ್ನು ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಪಡೆಯಬಹುದು, ಈ ಕುರಿತು ಪ್ರಾಧಿಕಾರದಲ್ಲಿ ದೂರು ನೀಡುವಂತೆ ಹಾಗೂ ಸಂತ್ರಸ್ತರಿಗೆ ವೈದ್ಯಕೀಯ ವೆಚ್ಚ ಮತ್ತು ಪುರ್ನವಸತಿ ಸೌಲಭ್ಯ ಒದಗಿಸಲಾಗುವುದು ಎಂದರು.

ಸಂತ್ರಸ್ತರ ನೆರವಿಗೆ ಸರಕಾರ 
ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಂಜೀವ ಎಂ. ಪಾಟೀಲ್‌ ಮಾತನಾಡಿ ಆ್ಯಸಿಡ್‌ ದಾಳಿಗೊಳಗಾದ ಸಂತ್ರಸ್ತರು ದೈಹಿಕ ಹಾಗೂ ಮಾನಸಿಕವಾಗಿ ಕುಗ್ಗಿ ಹೋಗಿರುತ್ತಾರೆ. ಅವರೊಂದಿಗೆ ಸಂವಿಧಾನ ಮತ್ತು ಕಾನೂನು ಇದೆ ಎನ್ನುವ ಆತ್ಮವಿಶ್ವಾಸ ಮೂಡಿಸಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಅರಿವು ಹೊಂದಿರಬೇಕು. ಸಂತ್ರಸ್ತರಿಗೆ ನೆರವು ನೀಡಬೇಕು. ಆ್ಯಸಿಡ್‌ ದಾಳಿಕೋರರಿಗೆ ಅತ್ಯಂತ ಕಠಿನ ಶಿಕ್ಷೆ ಮತ್ತು ಸಂತ್ರಸ್ತರ ನೆರವಿಗೆ ಸರಕಾರ ಇದೆ ಎಂದರು.

ಕಾನೂನು ಮಹಾ ವಿದ್ಯಾಲಯದ ಪ್ರಾಂಶುಪಾಲ ಪ್ರಕಾಶ ಕಣಿವೆ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸಿವಿಲ್‌ ನ್ಯಾಯಾಧೀಶೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷೆ ಲತಾ, ಉಡುಪಿ ವಕೀಲರ ಸಂಘದ ಅಧ್ಯಕ್ಷ ರತ್ನಾಕರ ಶೆಟ್ಟಿ, ಪ್ರಾಧ್ಯಾಪಕಿ ಸಿಸಿಲಿಯಾ ಡಿ’ಸೋಜಾ ಉಪಸ್ಥಿತರಿದ್ದರು. 

ಪೆಟ್ರೀಷಿಯಾ ಸ್ವಾಗತಿಸಿ, ವರ್ಷಾ ವಂದಿಸಿದರು. ನಿಖೀತಾ ಶೆಣೈ ನಿರೂಪಿಸಿದರು.  

ದೂರು ನೀಡಬಹುದು
ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರಿಂದ ದೂರು ಸ್ವೀಕರಿಸದ, ಅಕ್ರಮವಾಗಿ ಬಂಧನದಲ್ಲಿಟ್ಟ ಸಂದರ್ಭ ಹಾಗೂ ಠಾಣೆಯಲ್ಲಿ ಹಿಂಸೆ ನೀಡಿದರೆ ಈ ಕುರಿತು ಪೊಲೀಸ್‌ ದೂರು ಪ್ರಾಧಿಕಾರಕ್ಕೆ ದೂರು ನೀಡಬಹುದು. ಅಲ್ಲದೆ ಕೋರ್ಟ್‌ ಹಲವು ಸಾರ್ವಜನಿಕ ಸ್ಥಳಗಳಲ್ಲಿ ದೂರು ಪೆಟ್ಟಿಗೆ ಇಟ್ಟಿದೆ ಎಂದು ಜಿಲ್ಲಾ  ನ್ಯಾಯಾಧೀಶರು ತಿಳಿಸಿದರು.  ವಿದ್ಯಾರ್ಥಿಗಳು ಪೊಲೀಸ್‌ ಠಾಣೆಗಳಿಗೆ ಭೇಟಿ ನೀಡಿ ಅಲ್ಲಿನ ಕಾರ್ಯ ವಿಧಾನ ಮತ್ತು ಅಲ್ಲಿ ಅಪರಾಧಿಗಳನ್ನು ನಡೆಸಿಕೊಳ್ಳುವ ರೀತಿಯ ಕುರಿತು ವೀಕ್ಷಿಸಿ. ಠಾಣೆಗಳಲ್ಲಿ ಯಾವುದೇ ಕಾನೂನು ಉಲ್ಲಂಘನೆ ಕಾರ್ಯ ನಡೆಯುತ್ತಿದ್ದರೆ ಕೂಡಲೇ ತಮಗೆ ವರದಿ ನೀಡುವಂತೆ ಎಸ್‌ಪಿ ಹೇಳಿದರು.

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.