ಪರ್ಕಳ: ಚಿರತೆ ದಾಳಿ ಪ್ರಕರಣ : ಸತ್ತಂತೆ ನಟಿಸಿ ಬದುಕುಳಿದ ಶ್ವಾನ!
Team Udayavani, Aug 13, 2022, 8:43 AM IST
ಉಡುಪಿ : ಹೆರ್ಗ ಗ್ರಾಮದ ಗೋಳಿಕಟ್ಟೆಯ ಬಾಲಚಂದ್ರ ಕೆದ್ಲಾಯ ಅವರ ಮನೆಯ ಅಂಗಳದಲ್ಲಿದ್ದ ಶ್ವಾನಕ್ಕೆ ಚಿರತೆ ಹೊಂಚು ಹಾಕಿಕೊಂಡು ಬಂದಿದ್ದು, ಅದೃಷ್ಟವಶಾತ್ ಶ್ವಾನ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.
ಕುತ್ತಿಗೆಯ ಬೆಲ್ಟ್ ಸಹಿತ ಸಾಕು ನಾಯಿಯನ್ನು ಮನೆ ಎದುರು ಕಟ್ಟಲಾಗಿತ್ತು. ರಾತ್ರಿ ಸುಮಾರು 1 ಗಂಟೆ ವೇಳೆ ಚಿರತೆ ಆಗಮಿಸಿ ನಾಯಿಯನ್ನು ಕೊಲ್ಲಲು ಯತ್ನಿಸಿದೆ. ಈ ವೇಳೆ ನಾಯಿ ಜೋರಾಗಿ ಬೊಗಳಿ ಸತ್ತಂತೆ ನಟಿಸಿದ ಬಳಿಕ ಮನೆಯ ಮಾಲಕರು ಹೊರಭಾಗದ ಲೈಟ್ಹಾಕಿದ್ದು, ಈ ವೇಳೆ ಚಿರತೆ ಓಡಿ ಹೋಗಿದೆ.
ಘಟನೆಯ ದೃಶ್ಯಾವಳಿ ಮನೆಯ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ. ಈ ಭಾಗದಲ್ಲಿ ಈ ಹಿಂದೆಯೂ ಚಿರತೆ ಪ್ರತ್ಯಕ್ಷವಾಗಿದ್ದ ಚಿರತೆ ಮತ್ತೆ ಕಾಣಸಿಕ್ಕಿರುವುದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಅರಣ್ಯ ಇಲಾಖೆಯವರು ಆಯಕಟ್ಟಿನ ಸ್ಥಳದಲ್ಲಿ ಬೋನ್ ಇರಿಸಿದ್ದಾರೆ. ನಾಯಿಯ ಕುತ್ತಿಗೆ ಭಾಗದಲ್ಲಿ ಹಲವಾರು ತರಚಿದ ಗಾಯಗಳು ಉಂಟಾಗಿವೆ. ಸದ್ಯಕ್ಕೆ ನಾಯಿಗೆ ಮನೆಯ ಒಳಭಾಗದಲ್ಲಿ ಆರೈಕೆ ಮಾಡಲಾಗುತ್ತಿದೆ.
ಇದನ್ನೂ ಓದಿ : ಪಡುಬಿದ್ರಿ : ಮದುವೆಯಾಗುವುದಾಗಿ ನಂಬಿಸಿ ಚಿನ್ನಾಭರಣ ಪಡೆದು ಮೋಸ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…