ಮಧ್ಯಾಹ್ನದ ಬಳಿಕ ಜನದಟ್ಟಣೆ ಕಡಿಮೆ
Team Udayavani, May 7, 2020, 6:31 AM IST
ಕುಂದಾಪುರ: ಲಾಕ್ಡೌನ್ನಲ್ಲಿ ಸಡಿಲಿಕೆ ಮಾಡಲಾಗಿದ್ದು, ಬೆಳಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ಖರೀದಿ, ಕೆಲಸಗಳ ಸಲುವಾಗಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದ್ದರೂ, ಕುಂದಾಪುರದ ಗ್ರಾಮೀಣ ಭಾಗದಲ್ಲಿ ಮಧ್ಯಾಹ್ನದ ಬಳಿಕ ವಾಹನ ದಟ್ಟಣೆ ಕಡಿಮೆಯಿದ್ದು, ಜನ ಸಂಚಾರವೂ ವಿರಳವಾಗಿದೆ.
ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 7 ರಿಂದ 1 ಗಂಟೆಯವರೆಗೆ ಇದ್ದ ಸಮಯ ಮಿತಿಯನ್ನು ಈಗ ಸಂಜೆ 7 ಗಂಟೆಯವರೆಗೆ ವಿಸ್ತರಣೆ ಮಾಡಲಾಗಿದ್ದರೂ, ಹೆಚ್ಚಿನ ಜನ ಮೊದಲು ನಿಗದಿಯಾಗಿದ್ದ 11 ಗಂಟೆಯವರೆಗಿನ ಸಮಯ ಮಿತಿಗೆ ಒಗ್ಗಿಕೊಂಡಿದ್ದಾರೆ. ಹಾಗಾಗಿ ಗ್ರಾಮೀಣ ಭಾಗಗಳಾದ ಗಂಗೊಳ್ಳಿ, ಹೆಮ್ಮಾಡಿ, ತಲ್ಲೂರು, ಶಂಕರನಾರಾಯಣ, ಆಜ್ರಿ, ಹಾಲಾಡಿ, ಗೋಳಿ ಯಂಗಡಿ, ಬೆಳ್ವೆ, ಮರವಂತೆ, ತ್ರಾಸಿ, ನೇರಳ ಕಟ್ಟೆ, ಹಟ್ಟಿಯಂಗಡಿ, ಕೆರಾಡಿ, ಸೇರಿದಂತೆ ಎಲ್ಲ ಕಡೆ 11 ಗಂಟೆ ಬಳಿಕ ಜನಸಂಚಾರ ಇಳಿಮುಖಗೊಂಡಿದೆ.
ಬೆಳಗ್ಗೆ ಬಹುತೇಕ ಎಲ್ಲ ಅಂಗಡಿ, ಎಲೆಕ್ಟ್ರಾನಿಕ್ಸ್, ಚಿನ್ನಾಭರಣ ಮಳಿಗೆಗಳು, ಬಟ್ಟೆ ಅಂಗಡಿಗಳು, ಹೊಟೇಲ್ಗಳು ತೆರೆದುಕೊಂಡಿದ್ದು, ಜನ ಸಂಚಾರ ಕಡಿಮೆ ಇರುವುದರಿಂದ ವ್ಯಾಪಾರ – ವಹಿವಾಟು ಕೂಡ ಕಡಿಮೆ ಇರುತ್ತದೆಯೆಂದು ಕೆಲವರು ಅಂಗಡಿಗಳನ್ನು ಮಧ್ಯಾಹ್ನವೇ ಮುಚ್ಚುತ್ತಿರುವುದು ಕಂಡು ಬರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ