ದಿಂಗಾಲೇಶ್ವರ ಸ್ವಾಮೀಜಿ ದಾಖಲೆ ನೀಡಲಿ: ಕೋಟ


Team Udayavani, Apr 20, 2022, 5:50 AM IST

ದಿಂಗಾಲೇಶ್ವರ ಸ್ವಾಮೀಜಿ ದಾಖಲೆ ನೀಡಲಿ: ಕೋಟ

ಉಡುಪಿ: ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಅವರು ನಿರ್ದಿಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟ ದಾಖಲೆ ನೀಡಿದರೆ ಕೂಲಂಕಷ ತನಿಖೆ ನಡೆಸುತ್ತೇವೆ ಮತ್ತು ನನ್ನನ್ನು ಸಹಿತವಾಗಿ ಇಲಾಖೆಯ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಲು ಸಿದ್ಧರಿದ್ದೇವೆ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯಿಂದ 12 ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಡಗದ ಮಠಗಳು ಸೇರಿದಂತೆ (ಉಳಿದದ್ದು ಹಿಂದುಳಿದ ವರ್ಗಗಳ ಮಠ) 65 ಮಠಗಳ ಅಭಿವೃದ್ಧಿಗೆ 119 ಕೋ.ರೂ. ಘೋಷಣೆ ಮಾಡಲಾಗಿದೆ. ಆ ಹಣ ಇನ್ನೂ ಮಠಗಳಿಗೆ ಬಿಡುಗಡೆಯಾಗಿಲ್ಲ. ಮಠಗಳಿಂದ ನಿರ್ದಿಷ್ಟ ದಾಖಲೆ ಪಡೆದು, ಯೋಜನ ವರದಿ ಸಿದ್ಧಪಡಿಸಿದ ಅನಂತರವಷ್ಟೇ ಹಣ ಬಿಡುಗಡೆ ಮಾಡಲಾಗುತ್ತದೆ. ಹೀಗಾಗಿ ದಿಂಗಾಲೇಶ್ವರ ಸ್ವಾಮೀಜಿ ಯಾವ ಕಾಮಗಾರಿಗೆ ಯಾರು ಹಣ
ಕೇಳಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕು ಮತ್ತು ದಾಖಲೆಯನ್ನು ನೀಡಬೇಕು. ಆಗ ಮಾತ್ರ ಸಮಗ್ರ ತನಿಖೆ ಸಾಧ್ಯ ಎಂದರು.

ಗೊಂದಲ ಮೂಡಿಸದಿರಿ
ಸಾಧು ಸಂತರು ಸಮಾಜಕ್ಕೆ ಸಂದೇಶ ನೀಡುವಾಗ ಗೊಂದಲ ಇರಬಾರದು. ನಮ್ಮ ಎರಡು ಇಲಾಖೆಗಳೂ ಪಾರದರ್ಶಕವಾಗಿ ಕೆಲಸ ನಿರ್ವಹಿಸುತ್ತಿವೆ. ಭ್ರಷ್ಟಾಚಾರ ಪ್ರಮಾಣವನ್ನು ಶೂನ್ಯಕ್ಕೆ ಇಳಿಸುವ ನಿಟ್ಟಿನಲ್ಲಿ ಸರಕಾರ ಕಾರ್ಯನಿರ್ವಹಿಸುತ್ತಿದೆ. ವಿಪಕ್ಷದ ನಾಯಕರಾದ ಸಿದ್ದರಾಮಯ್ಯ ಆರೋಪ ಮಾಡುವಾಗ ಸತ್ಯಕ್ಕೆ ಅಪಚಾರ ಮಾಡಬಾರದು. ಮಠಗಳಿಗೆ ಬಿಡುಗಡೆಯಾದ ಹಣ ನೇರವಾಗಿ ಮಠಕ್ಕೆ ಹೋಗುವುದಿಲ್ಲ. ಬದಲಾಗಿ ಅವರು ಸೂಚಿಸಿರುವ ಕಾಮಗಾರಿಗಳಾದ ಕಟ್ಟಡ, ಕಾರ್ಯಕ್ರಮ, ವಸತಿ ನಿಲಯ, ಶಾಲೆ ಇತ್ಯಾದಿಗಳಿಗೆ ಹೋಗುತ್ತದೆ. ಸರಿಯಾದ ದಾಖಲೆ ನೀಡದಿ ದ್ದಾಗ ಅನುದಾನ ವಾಪಸ್‌ ಪಡೆದಿರುವ ನಿದರ್ಶನವೂ ಇದೆ ಎಂದರು.

ಕಿಡಿಗೇಡಿಗಳಿಗೆ ತಕ್ಕ ಪಾಠ ಕಲಿಸುತ್ತೇವೆ
ರಾಜ್ಯ ಸರಕಾರ ಪುಂಡರು, ಪೋಕರಿಗಳು ಮತ್ತು ಕೆಟ್ಟವರನ್ನು ಕಟ್ಟುನಿಟ್ಟಾಗಿ ಮಟ್ಟ ಹಾಕುತ್ತಿದೆ. ಪ್ರಜಾಪ್ರಭುತ್ವದಲ್ಲಿ ಚರ್ಚೆ ಮಾಡುವ ಅಧಿಕಾರ ಎಲ್ಲರಿಗೂ ಇರುತ್ತದೆ. ಟೀಕೆ ಮಾಡುವವರೇ ಹೆಚ್ಚಿದ್ದರೆ ಸಮರ್ಥನೆ ಮಾಡುವವರು ಕಡಿಮೆಯಾದಾಗ ಟೀಕೆಯೇ ಸತ್ಯ ಎಂಬಂತೆ ತೋರುತ್ತದೆ. ಆದರೆ ವಾಸ್ತವ ಬೇರೆಯೇ ಇರುತ್ತದೆ ಎಂದು ಸಚಿವ ಶ್ರೀನಿವಾಸ ಪೂಜಾರಿ ಹೇಳಿದರು. ಕೋಮು ಗಲಭೆಯ ಮುನ್ಸೂಚನೆ ಸಿಕ್ಕಾಗ ಅದನ್ನು ತಡೆಯಲು ಎಲ್ಲ ರೀತಿಯ ಕ್ರಮ ಕೈಗೊಳ್ಳ ಲಾಗುತ್ತದೆ ಎಂದರು.

ಜನಬಲವೇ ಉತ್ತರ ನೀಡಲಿದೆ
ಮುಂದಿನ ಚುನಾವಣೆಯಲ್ಲಿ ಬಿಜೆಪಿ 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಜನಬಲದ ಮೂಲಕವೇ ನಾವು ಉತ್ತರ ನೀಡಲಿದ್ದೇವೆ. 150 ಸೀಟು ಗೆದ್ದೇ ಗೆಲ್ಲುತ್ತೇವೆ. ಸಚಿವ ಸಂಪುಟ ಪುನಃ ರಚನೆ, ವಿಸ್ತರಣೆ, ನಿಗಮ ಮಂಡಳಿಗಳಿಗೆ ಆಯ್ಕೆ ಇತ್ಯಾದಿ ಎಲ್ಲವೂ ಮುಖ್ಯಮಂತ್ರಿಯವರು ಹಾಗೂ ರಾಜ್ಯಾಧ್ಯಕ್ಷರು ಕೇಂದ್ರದ ವರಿಷ್ಠರ ಸೂಚನೆಯಂತೆ ಮಾಡಲಿದ್ದಾರೆ ಎಂದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.