State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

ಸರಕಾರಿ ಶಾಲೆಗಳಿಗೂ ರಜೆ ಹೊಂದಾಣಿಕೆ ಅವಕಾಶ

Team Udayavani, May 5, 2024, 6:55 AM IST

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

ಉಡುಪಿ: ರಾಜ್ಯ ಸರಕಾರಿ ಶಾಲೆಗಳಿಗೆ ದಸರಾ ರಜೆಯನ್ನು ಬದಲಾವಣೆ ಮಾಡಲು ಈವರೆಗೂ ಅವಕಾಶ ಇರಲಿಲ್ಲ. ಇದೀಗ ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆ ಹೊರಡಿಸಿರುವ ರಾಜ್ಯ ಪಠ್ಯಕ್ರಮದ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 2024-25ನೇ ಸಾಲಿನ ವಾರ್ಷಿಕ ಶೈಕ್ಷಣಿಕ ಚಟುವಟಿಕೆಗಳ ಮಾರ್ಗಸೂಚಿಯಲ್ಲಿ ಕ್ರಿಸ್ಮಸ್‌ ಅವಧಿಗೆ ಮಧ್ಯಾಂತರ ರಜೆ ನೀಡಲು ಮನವಿ ಸಲ್ಲಿಸುವ ಶಾಲೆಗಳಿಗೆ ರಜೆ ಮಂಜೂರಾತಿ ಸಿಗಲಿದೆ.

ಕ್ರೈಸ್ತ ಸಮುದಾಯದ ಆಡಳಿತ ಮಂಡಳಿಯ ಸಂಸ್ಥೆಗಳಿಗೆ ದಸರಾ ರಜೆಯ ಬದಲಿಗೆ ಕ್ರಿಸ್ಮಸ್‌ ಸಂದರ್ಭ ದಲ್ಲಿ ರಜೆ ನೀಡಲು ಅವಕಾಶ ಹಿಂದಿನಿಂದಲೂ ಇದೆ ಮತ್ತು ಈ ಸಂಬಂಧ ಸರಕಾರದ ಆದೇಶವೂ ಇದೆ. ಹೀಗಾಗಿಯೇ ಅನೇಕ ಕ್ರೈಸ್ತರ ಶಿಕ್ಷಣ ಸಂಸ್ಥೆಗಳು ಶೈಕ್ಷಣಿಕ ತರಗತಿಗಳಿಗೆ ಸಮಸ್ಯೆಯಾಗದಂತೆ ದಸರಾ ಮಧ್ಯಾಂತರ ರಜೆಯನ್ನು ಕ್ರಿಸ್ಮಸ್‌ ಸಂದರ್ಭದಲ್ಲಿ ನೀಡಿ, ದಸರಾ ಅವಧಿ ಯಲ್ಲಿ ತರಗತಿಗಳನ್ನು ನಡೆಸುತ್ತಾರೆ. ಇನ್ನು ಕೆಲವು ಕ್ರೈಸ್ತ ಸಂಸ್ಥೆಗಳು ಮಧ್ಯಾಂತರ ರಜೆಯಲ್ಲಿ ಎರಡು ಭಾಗ ಮಾಡಿ ಸ್ವಲ್ಪದಿನ ದಸರಾ ಅವಧಿಯಲ್ಲಿ ಇನ್ನುಳಿದ ದಿನವನ್ನು ಕ್ರಿಸ್ಮಸ್‌ ಅವಧಿಯಲ್ಲಿ ನೀಡುತ್ತವೆ.

2024-25ನೇ ಸಾಲಿನ ದಸರಾ ರಜೆ (ಮಧ್ಯಾಂತರ ರಜೆ) ಅಕ್ಟೋಬರ್‌ 3ರಿಂದ ಆರಂಭಗೊಂಡು ಅಕ್ಟೋಬರ್‌ 20ರ ವರೆಗೆ (18) ದಿನ ಇರಲಿದೆ. ಈ ಅವಧಿಯಲ್ಲಿ ಕ್ರಿಸ್ಮಸ್‌ ರಜೆ ಬೇಡಿಕೆಯನ್ನು ಸಂಬಂಧಿಸಿದ ಶಿಕ್ಷಣ ಸಂಸ್ಥೆಗಳು ತಮ್ಮ ವ್ಯಾಪ್ತಿಯ ಜಿಲ್ಲಾ ಉಪನಿರ್ದೇಶಕರಿಗೆ ಸಲ್ಲಿಸಿದಲ್ಲಿ, ಈ ಬಗ್ಗೆ ಆಯಾ ಉಪನಿರ್ದೇಶಕರು ಪರಿಶೀಲಿಸಿ ನಿರ್ಧರಿಸಲಿದ್ದಾರೆ. ಒಂದೊಮ್ಮೆ ಕ್ರಿಸ್ಮಸ್‌ ಅವಧಿಯಲ್ಲಿ ಮಧ್ಯಾಂತರ ರಜೆ ನೀಡಲು ಅವಕಾಶ ಕಲ್ಪಿಸಿದರೆ, ಅಕ್ಟೋಬರ್‌ನ ಮಧ್ಯಾಂತರ ರಜೆಯಲ್ಲಿ ಕಡಿತಗೊಳಿಸಿ ತರಗತಿಗಳನ್ನು ಸರಿದೂಗಿಸಲು ಕ್ರಮ ತೆಗೆದುಕೊಳ್ಳಬೇಕು ಎಂಬ ನಿರ್ದೇಶನವನ್ನು ಇಲಾಖೆಯಿಂದ ಉಪನಿರ್ದೇಶಕರಿಗೆ ನೀಡಲಾಗಿದೆ.

ಈವರೆಗೂ ರಾಜ್ಯ ಪಠ್ಯಕ್ರಮದ ಸರಕಾರಿ ಶಾಲೆಗಳಿಗೆ ದಸರಾ ಅವಧಿಯಲ್ಲಿಯೇ ಮಧ್ಯಾಂತರ ರಜೆ ನೀಡಲಾಗುತ್ತಿತ್ತು. ಆದರೆ ಕೆಲವು ಖಾಸಗಿ/ಅನುದಾನಿತ ಶಾಲಾಡಳಿತ ಮಂಡಳಿಗಳು ಅಗತ್ಯ ಬೇಡಿಕೆ ಸಲ್ಲಿಸಿ, ಮಧ್ಯಾಂತರ ರಜೆಯನ್ನು ಕ್ರಿಸ್ಮಸ್‌ ಅವಧಿಯಲ್ಲಿ ಪಡೆಯುತ್ತಿವೆ. ಸರಕಾರಿ ಶಾಲೆಯ ಮಕ್ಕಳಿಗೆ ಕ್ರಿಸ್ಮಸ್‌ ದಿನದಂದು ಮಾತ್ರ ರಜೆ ನೀಡಲಾಗುತ್ತದೆ. ಉಳಿದಂತೆ ಮಧ್ಯಾಂತರ ರಜೆ ದಸರಾ ಅವಧಿಯಲ್ಲಿ ಇರುತ್ತದೆ. ಈ ಬಾರಿ ಏನಾಗಲಿದೆ ಎಂಬ ಮಾಹಿತಿ ಇಲ್ಲ. ಸರಕಾರಿ ಶಾಲೆಗಳಿಗೆ ಕ್ರಿಸ್ಮಸ್‌ ಅವಧಿಯಲ್ಲಿ ಮಧ್ಯಾಂತರ ರಜೆಗೆ ಮನವಿ ಸಲ್ಲಿಸುವ ಸಾಧ್ಯತೆ ತೀರ ಕಡಿಮೆಯಿರುತ್ತದೆ. ಕಾರಣ ಎಸ್‌ಡಿಎಂಸಿಯಿಂದ ನಿರ್ಧರಿಸಿ, ಪಾಲಕ, ಪೋಷಕರ ಅನುಮತಿ ಪಡೆದು ಮನವಿ ಸಲ್ಲಿಸಬೇಕಾಗುತ್ತದೆ. ಹೀಗಾಗಿ ಬಹುತೇಕ ಶಾಲೆಗೆಳು ಈ ಹಿಂದಿನ ಪದ್ಧತಿಯನ್ನು ಬದಲಿಸುವುದು ಕಷ್ಟಸಾಧ್ಯ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಕೆಲವು ಕಡೆ ಅಸಮಾಧಾನ
ಮಧ್ಯಾಂತರ ರಜೆಯನ್ನು ಪೂರ್ಣ ವಾಗಿ ಕ್ರಿಸ್ಮಸ್‌ ಸಂದರ್ಭದಲ್ಲೇ ನೀಡುವುದಕ್ಕೆ ಕೆಲವು ಕಡೆ ಪೋಷಕರ ವಿರೋ ಧವೂ ಇದೆ. ಅಗತ್ಯ ಇರುವ ಕಡೆಗಳಲ್ಲಿ ದಸರಾ ಸಂದರ್ಭದಲ್ಲಿ ಸ್ವಲ್ಪದಿನ ಹಾಗೂ ಕ್ರಿಸ್ಮಸ್‌ ಸಂದರ್ಭದಲ್ಲಿ ಸ್ವಲ್ಪ ದಿನ ನೀಡುವ ವ್ಯವಸ್ಥೆ ಮಾಡಕೊಳ್ಳಬೇಕು. ಮಧ್ಯಾಂತರ ರಜೆ ಬಹುಪಾಲು ಶಿಕ್ಷಣ ಸಂಸ್ಥೆಗಳಿಗೆ ಅಕ್ಟೋಬರ್‌ನಲ್ಲೇ ಇರುವುದರಿಂದ ಎಲ್ಲ ವಿದ್ಯಾರ್ಥಿ ಗಳಿಗೂ ಒಟ್ಟಿಗೆ ರಜೆ ಸಿಕ್ಕಂತೆ ಆಗುತ್ತದೆ. ಹೀಗಾಗಿ ಮಧ್ಯಾಂತರ ರಜೆಯನ್ನು ಪೂರ್ಣವಾಗಿ ಕ್ರಿಸ್ಮಸ್‌ ಅವಧಿಯಲ್ಲೇ ನೀಡುವುದು ಸರಿಯಲ್ಲ ಎಂದು ಕೆಲ ಪೋಷಕರು ಅಸಮಾಧಾನ ಹೊರ ಹಾಕಿದ್ದಾರೆ.

ಕ್ರೈಸ್ತ ಶಿಕ್ಷಣ ಸಂಸ್ಥೆಗಳಿಗೆ ಮಧ್ಯಾಂತರ ರಜೆಯನ್ನು ಕ್ರಿಸ್ಮಸ್‌ ಸಂದರ್ಭ ನೀಡಲು ಅವಕಾಶವಿದೆ. ಅದರಂತೆ ಇಲಾಖೆಗೆ ಮನವಿಸಲ್ಲಿಸಿ, ಅವಕಾಶ ಮಾಡಿಕೊಳ್ಳುತ್ತಾರೆ. ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಈವರೆಗೂ ಆ ರೀತಿಯ ಯಾವುದೇ ವ್ಯವಸ್ಥೆ ಇರಲಿಲ್ಲ. ದಸರಾ ಸಂದರ್ಭದಲ್ಲಿ ಮಕ್ಕಳಿಗೆ ರಜೆ ನೀಡಲಾಗುತ್ತದೆ. 2024-25ನೇ ಶೈಕ್ಷಣಿಕ ವರ್ಷದಲ್ಲೂ ಇದು ಬದಲಾಗುವ ಸಾಧ್ಯತೆ ಇಲ್ಲ.
– ಗಣಪತಿ ಕೆ., ಡಿಡಿಪಿಐ ಉಡುಪಿ

 

ಟಾಪ್ ನ್ಯೂಸ್

Kedarnath

Chardham; 15 ದಿನಗಳಲ್ಲಿ 52 ಯಾತ್ರಾರ್ಥಿಗಳ ಸಾವು

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ

Sullia: ಡ್ಯಾಂ ನೀರು ಹೊರಕ್ಕೆ ನೀರು ಸಂಗ್ರಹದ ಪ್ರದೇಶದಲ್ಲಿ ಕುಸಿತ

Sullia: ಡ್ಯಾಂ ನೀರು ಹೊರಕ್ಕೆ ನೀರು ಸಂಗ್ರಹದ ಪ್ರದೇಶದಲ್ಲಿ ಕುಸಿತ

ಕಡಲಾಳದ ಬಳಕೆಯಾಗದ ಮೀನಿಗೆ ಮಾರುಕಟ್ಟೆ ಅಧಿಕ: ಡಾ| ಮೀನ ಕುಮಾರಿ

ಕಡಲಾಳದ ಬಳಕೆಯಾಗದ ಮೀನಿಗೆ ಮಾರುಕಟ್ಟೆ ಅಧಿಕ: ಡಾ| ಮೀನ ಕುಮಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Manipal ಪ್ರತ್ಯೇಕ ಪ್ರಕರಣ; ಗಾಂಜಾ ಸೇವನೆ: ಏಳು ಮಂದಿ ವಶ

Manipal ಪ್ರತ್ಯೇಕ ಪ್ರಕರಣ; ಗಾಂಜಾ ಸೇವನೆ: ಏಳು ಮಂದಿ ವಶ

Manipal ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Manipal ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Udupi; ಯಕ್ಷರಂಗಕ್ಕೆ ಜಿವ ತುಂಬುವ ಮಟ್ಟು ಲಕ್ಷ್ಮಣ ಶೆಟ್ಟಿಗಾರರ ಕೈಮಗ್ಗದ ಸೀರೆ

Udupi; ಯಕ್ಷರಂಗಕ್ಕೆ ಜೀವ ತುಂಬುವ ಮಟ್ಟು ಲಕ್ಷ್ಮಣ ಶೆಟ್ಟಿಗಾರರ ಕೈಮಗ್ಗದ ಸೀರೆ

Shirva: ಸ್ನಾನಕ್ಕೆಂದು ಹೋದವನಿಗೆ ಸಿಡಿಲಾಘಾತ; ಕಾಲೇಜು ವಿದ್ಯಾರ್ಥಿ ಬಲಿ

Shirva: ಸ್ನಾನಕ್ಕೆಂದು ಹೋದವನಿಗೆ ಸಿಡಿಲಾಘಾತ; ಕಾಲೇಜು ವಿದ್ಯಾರ್ಥಿ ಬಲಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Kedarnath

Chardham; 15 ದಿನಗಳಲ್ಲಿ 52 ಯಾತ್ರಾರ್ಥಿಗಳ ಸಾವು

court

Equestrian: ಆಡಳಿತ ನಿರ್ವಹಣೆಗೆ ಸಮಿತಿ

pvs

Malaysia Master ಬ್ಯಾಡ್ಮಿಂಟನ್‌: ಸೆಮಿಫೈನಲ್‌ ಪ್ರವೇಶಿಸಿದ ಸಿಂಧು

Sunil Chhetri

FIFA ವಿಶ್ವಕಪ್‌ ಕ್ವಾಲಿಫೈಯರ್‌; ಭಾರತ ಫುಟ್‌ಬಾಲ್‌ ತಂಡ ಪ್ರಕಟ: ಛೇತ್ರಿಗೆ ವಿದಾಯ ಪಂದ್ಯ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.