ಮಾಧ್ಯಮಗಳಿಂದ ನಿಜ ವಿಚಾರ ಹೊರ ಬರಲಿ

ಎಂಐಸಿ "ಆರ್ಟಿಕಲ್‌ 19' ಉದ್ಘಾಟಿಸಿ ಶ್ವೇತಾ ಕೊಠಾರಿ

Team Udayavani, Feb 21, 2020, 5:41 AM IST

chitra-43

"ಆರ್ಟಿಕಲ್‌ 19' ಕಾರ್ಯಕ್ರಮದಲ್ಲಿ ಶ್ವೇತಾ ಕೊಠಾರಿ ಸಂವಾದ ನಡೆಸಿದರು.

ಉಡುಪಿ: ಜನರಿಗೆ ಅನ್ಯಾಯವಾದಾಗ ಅದನ್ನು ಮಾಧ್ಯಮಗಳು ಧೈರ್ಯದಿಂದ ತಿಳಿಸಬೇಕು. ನೈಜ ವಿಷಯಗಳು ಮಾಧ್ಯಮಗಳಿಂದ ಜನರಿಗೆ ತಿಳಿಯುವಂತಾಗಬೇಕು. ಜನರು ಈಗ ಸ್ವತಂತ್ರವಾಗಿ ವಿಷಯಗಳನ್ನು ಹಂಚಿಕೊಳ್ಳಲು ಸಾಮಾಜಿಕ ಜಾಲ ತಾಣಗಳ ಮೊರೆ ಹೋಗುತ್ತಿದ್ದಾರೆ ಎಂದು ಪತ್ರಕರ್ತೆ ಶ್ವೇತಾ ಕೊಠಾರಿ ಹೇಳಿದರು.

ಮಣಿಪಾಲದ ಮಣಿಪಾಲ್‌ ಇನ್‌ಸ್ಟಿಟ್ಯೂಟ್‌ ಆಫ್ ಕಮ್ಯುನಿಕೇಶನ್‌ (ಎಂಐಸಿ) ಸಭಾಂಗಣದಲ್ಲಿ ವಾರ್ಷಿಕ ಉತ್ಸವವಾದ “ಆರ್ಟಿಕಲ್‌ 19’ನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅನ್ಯಾಯವನ್ನು ಬಹಿರಂಗ ಪಡಿಸುವ ಸಂದರ್ಭ ವಿಶೇಷ ಸುದ್ದಿ ಗಳನ್ನು ಬಿತ್ತರಿಸಲು ಮೇಲಧಿಕಾರಿಗಳು ಒಪ್ಪದೆ ಇದ್ದ ಕಹಿ ಅನುಭವದಿಂದ ನಾನು ಟಿವಿ ಕ್ಷೇತ್ರದಿಂದ ಹೊರಬಂದೆ. ಯಾವ ಅಧಿಕಾರಸ್ಥರು ತಪ್ಪೆಸಗಿದ್ದಾರೋ ಅವರನ್ನು ಎಚ್ಚರಿಸುವ ಕೆಲಸ ಮಾಧ್ಯಮದಿಂದ ಆಗಬೇಕಾಗಿದೆ. ರಾಜಕೀಯ ಭ್ರಷ್ಟಾಚಾರವನ್ನು ಹೊರಹಾಕಲು ಕೆಲವೊಮ್ಮೆ ನಮ್ಮದೇ ಮೇಲಧಿಕಾರಸ್ಥರು ಒಪ್ಪದೆ ಇರುವ ಸ್ಥಿತಿ ಇದೆ ಎಂದು ಕೊಠಾರಿ ಹೇಳಿದರು.

ನಾಲ್ಕನೇ ಆಧಾರ ಸ್ತಂಭ ಮೌನವೇಕೆ?
ಇಂದು ಕೆಲವು ವರ್ಗದ ಮಾಧ್ಯಮಗಳು ಕೆಲವು ವಿಷಯಗಳ ಮಾಹಿತಿಯನ್ನು ಸಮರ್ಪಕವಾಗಿ ನೀಡುತ್ತಿಲ್ಲ. ಈ ಮೂಲಕ ಜನರಿಗೆ ತಪ್ಪು ಸಂದೇಶಗಳನ್ನು ನೀಡುತ್ತಿವೆ. ನಾವು ದೌರ್ಜನ್ಯಗಳ ವಿರುದ್ಧ ಹೋರಾಟ ಮಾಡಬೇಕಾಗಿದೆ. ಆಡಳಿತ ವರ್ಗಕ್ಕೆ ಉತ್ತರದಾಯಿತ್ವವನ್ನು ತಿಳಿ ಹೇಳಬೇಕಾಗಿದೆ. ಪ್ರಜಾಪ್ರಭುತ್ವದ ನಾಲ್ಕನೇ ಆಧಾರ ಸ್ತಂಭ ಎಂಬ ಮಾನ್ಯತೆ ಹೊಂದಿದ ಮಾಧ್ಯಮಗಳು ಏಕೆ ಸುಮ್ಮನಿವೆ? ಪ್ರಧಾನ ಮಾಧ್ಯಮಗಳು ಇದರಲ್ಲಿ ಹಿಂದೆ ಇವೆ. ಹೀಗಾಗಿ ಡಿಜಿಟಲ್‌ ಮಾಧ್ಯಮ ಹುಟ್ಟಿಕೊಂಡಿದೆ ಎಂದು ಕೊಠಾರಿ ಹೇಳಿದರು. ಡಿಜಿಟಲ್‌ ಮಾಧ್ಯಮದಲ್ಲಿ ಮುಂದೆ ಸಾಕಷ್ಟು ಅವಕಾಶಗಳಿವೆ. ಭವಿಷ್ಯದ ವೃತ್ತಿಪರರನ್ನು ಈ ಕ್ಷೇತ್ರ ತರಬೇತಿಗೊಳಿಸುತ್ತದೆ. ಆದರೆ ಸ್ವತಂತ್ರ ಸತ್ಯಶೋಧಕರು, ದಕ್ಷರು, ವಿಶ್ವಾಸಾರ್ಹರು ಬೇಕು ಎಂದು ಕೊಠಾರಿ ಹೇಳಿದರು.

ಎಂಐಸಿ ವಿದ್ಯಾರ್ಥಿಗಳಿಗೆ ಮಾಧ್ಯಮ ಮತ್ತು ಮನೋರಂಜನೆ ಕ್ಷೇತ್ರದಲ್ಲಿ ನೈಪುಣ್ಯ, ತಾಂತ್ರಿಕ ಕೌಶಲವನ್ನು ಗಳಿಸಲು ಆರ್ಟಿಕಲ್‌ 19 ಉತ್ಸವ ವೇದಿಕೆಯಾಗಿದೆ. ಮಾಧ್ಯಮ ರಂಗದ ಶ್ರೇಷ್ಠ ಸಾಧಕರೊಂದಿಗೆ ಸಂವಹನ ನಡೆಸುವ ಅವಕಾಶವನ್ನು ಕಲ್ಪಿಸಿಕೊಡಲಾಗುತ್ತಿದೆ ಎಂದು ಸ್ವಾಗತ ಭಾಷಣದಲ್ಲಿ ಎಂಐಸಿ ನಿರ್ದೇಶಕಿ ಡಾ| ಪದ್ಮಾರಾಣಿ ಹೇಳಿದರು.

ವಿದ್ಯಾರ್ಥಿ ಆಯುಷ್‌ ಪ್ರಸ್ತಾವನೆಗೈದರು. ಉಪನ್ಯಾಸಕ ವರ್ಗದ ಸಂಚಾಲಕಿ ಶ್ರುತಿ ವಿ. ಶೆಟ್ಟಿ ಉಪಸ್ಥಿತರಿದ್ದರು. ತಾನಿಯಾ ಮುಖೋಪಾಧ್ಯಾಯ ಕಾರ್ಯಕ್ರಮ ನಿರ್ವಹಿಸಿದರು. ಭಾರತದ ಸಂವಿಧಾನ ನೀಡಿದ ವಾಕ್‌ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಕುರಿತು ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳು ನಡೆಯುತ್ತಿವೆ.

ಎಂಐಸಿ ಮುಂಚೂಣಿ ಹೆಸರು
ಮಾಧ್ಯಮ ಕ್ಷೇತ್ರದಲ್ಲಿ ಮಣಿಪಾಲ್‌ ಇನ್‌ಸ್ಟಿಟ್ಯೂಟ್‌ ಆಫ್ ಕಮ್ಯುನಿಕೇಶನ್‌ (ಎಂಐಸಿ) ಸಂಸ್ಥೆಗೆ ಪ್ರಮುಖವಾದ ಸ್ಥಾನವಿದೆ. ಹಾಗಾಗಿ ನಾನು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೇನೆ.
– ಶ್ವೇತಾ ಕೊಠಾರಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.