ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

"10 ವರ್ಷ ಸಂಸದರಾಗಿದ್ದವರು ಏನು ಮಾಡಿದ್ದಾರೆಂದು ಗೊತ್ತಿದೆ'

Team Udayavani, Apr 25, 2024, 1:39 AM IST

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಕುಂದಾಪುರ: ನಾನು ಯಾವುದೇ ವ್ಯಕ್ತಿಯ ಹೆಸರಿನಲ್ಲಿ ಮತ ಕೇಳುವುದಿಲ್ಲ. ಈ ಹಿಂದೆ ಸಂಸದನಾಗಿ ಕೆಲಸ ಮಾಡಲು ಕಡಿಮೆ ಸಮಯದ ಅವಕಾಶ ದೊರೆತಿತ್ತು. ಹೆಚ್ಚು ಸಮಯ ಅವಕಾಶ ದೊರೆತವರು ಏನು ಮಾಡಿದ್ದಾರೆ ಎಂದು ನಿಮಗೆಲ್ಲ ಗೊತ್ತಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸಲು, ಜನರ ನಡುವೆ ಇದ್ದು ಕೆಲಸ ಮಾಡಲು ಅವಕಾಶ ಕೊಡಿ. ಅಭಿವೃದ್ಧಿ ಎಂದರೆ ಏನೆಂದು ಮಾಡಿ ತೋರಿಸುತ್ತೇನೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಜಯಪ್ರಕಾಶ್‌ ಹೆಗ್ಡೆ ಹೇಳಿದರು.

ಬುಧವಾರ ಅಪರಾಹ್ನ ಇಲ್ಲಿನ ಶಾಸ್ತ್ರಿ ಸರ್ಕಲ್‌ನಿಂದ ಹೊಸ ಬಸ್‌ ನಿಲ್ದಾಣದ ವರೆಗೆ ನಡೆದ ಪಾದಯಾತ್ರೆ ಸಂದರ್ಭ ಮಾತನಾಡಿದ ಅವರು, ಕುಂದಾಪುರ ನಗರದಲ್ಲಿ ಸಭೆ ನಡೆಸಲು ಈವರೆಗೆ ಅನುವು ಆಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಪಾದಯಾತ್ರೆ ನಡೆಸಿದ್ದೇನೆ ಎಂದರು.

ನಗರ ಇಬ್ಭಾಗ ಆಗದಂತೆ ಫ್ಲೈಓವರ್ ಮಾಡಿಕೊಡಲಾಗಿದೆ. ಅಂತೆಯೇ ಸೀವಾಕ್‌ ಮೊದಲಾದ ರಚನೆಗಳಾಗಿವೆ. ಕುಂದಾಪುರ ಪ್ರವಾಸೋದ್ಯಮವಾಗಿ ಅಭಿವೃದ್ಧಿ ಆಗಲು ನನಗೆ ಮತ ನೀಡಿ. ಈ ಹಿಂದೆ ಅಧಿಕಾರವಿದ್ದಾಗ ನನ್ನ ಕ್ರಿಯಾಶೀಲತೆ, ಅಭಿವೃದ್ಧಿ ವೇಗವನ್ನು ಜನರು ನೋಡಿದ್ದಾರೆ. ಈ ಬಾರಿ ಮತ್ತೂಮ್ಮೆ ಅವಕಾಶ ನೀಡಿದರೆ ಅದೇ ಕ್ರಿಯಾಶೀಲತೆಯೊಂದಿಗೆ ನಿಮ್ಮ ಸೇವೆ ಮಾಡುವೆ ಎಂದು ಹೆಗ್ಡೆ ಹೇಳಿದರು.

ಅರೆಬರೆ ಕಾಮಗಾರಿ ಮುಗಿಸಿ ಕಲ್ಯಾಣಪುರ ರಸ್ತೆ ಮುಕ್ತ!
ಜಯಪ್ರಕಾಶ್‌ ಹೆಗ್ಡೆ ಗೆದ್ದರೆ ನಮ್ಮ ಜೆಲ್ಲೆಯಲ್ಲಿ ಕಾಂಗ್ರೆಸ್‌ ಶಾಸಕರಿಲ್ಲ ಎನ್ನುವ ನೋವು ದೂರವಾಗಲಿದೆ. ಉಡುಪಿ ಜಿಲ್ಲೆಗೊಂದು ಎಂಜಿನಿಯರಿಂಗ್‌ ಕಾಲೇಜು, ಮೆಡಿಕಲ್‌ ಕಾಲೇಜು ಸ್ಥಾಪನೆಯಾಗಲಿದೆ. ಕೈಗಾರಿಕೆ ವಲಯ, ಕಂಪೆನಿಗಳು ಸ್ಥಾಪನೆಯಾಗಿ ಯುವ ಕರಿಗೆ ಉದ್ಯೋಗ ಸೃಷ್ಟಿಯಾಗಲಿದೆ. ಈ ಮೂಲಕ ಪ್ರತೀ ವಿಧಾನಸಭಾ ಕ್ಷೇತ್ರಕ್ಕೆ ಅಭಿವೃದ್ಧಿ ಯೋಜನೆ ಹರಿದುಬರಲಿದೆ. ಆದ್ದರಿಂದ ಹೆಗ್ಡೆ ಗೆಲುವು ಕ್ಷೇತ್ರದ ಜನರಿಗೆ, ನಮ್ಮ ನಿಮ್ಮಲ್ಲರಿಗೆ ಅಗತ್ಯವಿದೆ ಹಾಗೂ ಚುನಾವಣೆ ಸಂದರ್ಭ ಜನರ ಆಕ್ರೋಶ ಎದುರಿಸಲಾಗದೆ ಅರೆಬರೆ ಕಾಮಗಾರಿ ಮುಗಿಸಿ ಕಲ್ಯಾಣಪುರ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಿದ್ದಾರೆ. ಚುನಾವಣೆ ಮುಗಿಯುತ್ತಿದ್ದಂತೆ ರಸ್ತೆಯ ನಿಜಬಣ್ಣ ಬಯಲಾಗಲಿದೆ ಹಾಗೂ ಈ ಬಾರಿ ಮಳೆಗಾಲದಲ್ಲಿ ಸಂಚಾರಕ್ಕೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ ಎಂದು ಮಾಜಿ ಶಾಸಕರಾದ ಗೋಪಾಲ ಪೂಜಾರಿ ಆಕ್ರೋಶ ಹೊರಹಾಕಿದರು.

ಬಿ.ಎಂ. ಸುಕುಮಾರ ಶೆಟ್ಟಿ, ಮುಖಂಡರಾದ ಎಂ.ಎ. ಗಫೂರ್‌, ಜಿ.ಎ. ಬಾವಾ, ಕಿಶನ್‌ ಹೆಗ್ಡೆ ಕೊಳ್ಕೆಬೈಲು, ಎಸ್‌. ರಾಜು ಪೂಜಾರಿ, ದೇವಾನಂದ ಶೆಟ್ಟಿ ಹಳ್ನಾಡು, ಹರಿಪ್ರಸಾದ್‌ ಶೆಟ್ಟಿ ಕಾನ್ಮಕ್ಕಿ, ಪ್ರದೀಪ್‌ ಕುಮಾರ್‌ ಶೆಟ್ಟಿ ಗುಡಿಬೆಟ್ಟು, ದಿನೇಶ್‌ ಹೆಗ್ಡೆ ಮೊಳಹಳ್ಳಿ, ಮಲ್ಯಾಡಿ ಶಿವರಾಮ ಶೆಟ್ಟಿ, ಹೆರಿಯಣ್ಣ, ಅಶೋಕ್‌ ಪೂಜಾರಿ ಬೀಜಾಡಿ ಮೊದಲಾದವರು ಇದ್ದರು.

ಕಾಂಗ್ರೆಸ್‌ ಪದಾಧಿಕಾರಿಗಳು, ಕಾರ್ಯಕರ್ತರು, ಜನಪ್ರತಿನಿಧಿಗಳು ಪಾದಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆ ಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

4-uv-fusion

Cricket: ವಿಶ್ವ ಕ್ರಿಕೆಟನ್ನಾಳಿದ ದೈತ್ಯ: ವೆಸ್ಟ್‌ ಇಂಡೀಸ್‌

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಂಗಳೂರು: 4 ತಿಂಗಳಲ್ಲಿ ಮೂರ್ತಿ ಸ್ಥಾಪನೆ ಪೂರ್ಣಗೊಳಿಸಲು ಆದೇಶ

ಬೆಂಗಳೂರು: 4 ತಿಂಗಳಲ್ಲಿ ಮೂರ್ತಿ ಸ್ಥಾಪನೆ ಪೂರ್ಣಗೊಳಿಸಲು ಆದೇಶ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

4-uv-fusion

Cricket: ವಿಶ್ವ ಕ್ರಿಕೆಟನ್ನಾಳಿದ ದೈತ್ಯ: ವೆಸ್ಟ್‌ ಇಂಡೀಸ್‌

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

3-uv-fusion

UV Fusion: ನಿಷ್ಕಲ್ಮಶ ಮನ ನಮ್ಮದಾಗಲಿ

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.