ಮದರೆಂಗಿದ ರಂಗ್ “ತುಳುನಾಡ ಸಂಸ್ಕೃತಿಯ ಬಾಂಧವ್ಯ ವಿಸ್ತರಿಸೋಣ’
Team Udayavani, Jul 14, 2019, 5:07 AM IST
ಉಡುಪಿ: ತುಳುನಾಡಿನಲ್ಲಿರುವಂತಹ ಸಂಸ್ಕೃತಿ ದೇಶದಲ್ಲಿ ಯಾವ ಕಡೆಯೂ ಸಿಗಲು ಸಾಧ್ಯವಿಲ್ಲ. ಇದು ಅವನತಿಯತ್ತ ಸಾಗುತ್ತಿರುವುದು ಖೇದನೀಯ. ಹಿಂದಿನ ಸಂಸ್ಕೃತಿ ಮತ್ತು ಈಗಿನ ಸಂಸ್ಕೃತಿಗೆ ಬಹಳಷ್ಟು ವ್ಯತ್ಯಾಸಗಳಿವೆ. ನಮ್ಮ ಸಂಸ್ಕೃತಿಯನ್ನು ಉಳಿಸಿ ಆ ಮೂಲಕ ತುಳುನಾಡಿನ ಬಾಂಧವ್ಯವನ್ನು ವಿಸ್ತರಿಸಬೇಕು ಎಂದು ಕಟಪಾಡಿಯ ನಿವೃತ್ತ ಸೈನಿಕ ಶಿಕ್ಷಕಿ ತುಳಸಿ ದೇವಾಡಿಗ ಹೇಳಿದರು.
ತುಳುಕೂಟ ಉಡುಪಿಯ ಆಶ್ರಯದಲ್ಲಿ ಅಮ್ಮಣ್ಣಿ ರಾಮಣ್ಣಿ ಶೆಟ್ಟಿ ಸಭಾಭವನದಲ್ಲಿ ಶನಿವಾರ ನಡೆದ “ಮದರೆಂಗಿದ ರಂಗ್’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅನುಭವಗಳನ್ನು ಹಂಚಿಕೊಳ್ಳಿ
ಸುಗಮ್ಯ ಜಿಲ್ಲಾ ಮಹಿಳಾ ಒಕ್ಕೂಟದ ಅಧ್ಯಕ್ಷೆ ಜಾನೆಟ್ ಬಬೋìಜಾ ಮಾತನಾಡಿ, ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ತುಳುಕೂಟ ಯಶಸ್ಸು ಕಂಡಿದೆ. ಪ್ರಕೃತಿಯ ಪ್ರತಿಯೊಂದು ಅನುಭವಗಳನ್ನು ಪಡೆದುಕೊಂಡು ಅದನ್ನು ಮಕ್ಕಳೊಂದಿಗೆ ಹಂಚಿಕೊಳ್ಳಬೇಕು ಎಂದರು.
ಪತ್ರಕರ್ತೆ ಕುಲ್ಸೂಮ್ ಅಬೂಬಕ್ಕರ್, ಪತ್ರಕರ್ತ ಶ್ರೀಕಾಂತ ಶೆಟ್ಟಿ ಮಾತನಾಡಿದರು.
ಸಮ್ಮಾನ
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಹರೀಶ್ ಭಟ್, ತನುಲಾ, ರಮ್ಯಾ ಕೆ.ಐತಾಳ್ ಅವರನ್ನು ಸಮ್ಮಾನಿಸಲಾಯಿತು.
ತುಳುಕೂಟ ಉಡುಪಿಯ ಅಧ್ಯಕ್ಷ ವಿ.ಜಿ.ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ದ.ಕ., ಉಡುಪಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ಪಾಲ್ ಸುವರ್ಣ, ಪತ್ರಕರ್ತ ಎಸ್.ಆರ್.ಬಂಡಿಮಾರ್, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಸತೀಶ್ ಕುಂದರ್, ತುಳುಕೂಟದ ಗೌರವ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಉಪಸ್ಥಿತರಿದ್ದರು.
ಸಂಚಾಲಕರಾದ ಜ್ಯೋತಿ ಎಸ್.ದೇವಾಡಿಗ ಸ್ವಾಗತಿಸಿ, ಯಶೋದಾ ಕೇಶವ್ ಕಾರ್ಯಕ್ರಮ ನಿರೂಪಿಸಿದರು.
ಮದರೆಂಗಿ ರಂಗು
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಡಾ| ವೈ.ಎನ್.ಶೆಟ್ಟಿ ಮಾತನಾಡಿ, ಮದರೆಂಗಿಗೆ ಔಷಧೀಯ ಗುಣವಿದೆ. ಇದು ಭಯ, ಆತಂಕ, ಕಡಿಮೆ ಮಾಡಿ ಮನಸ್ಸಿಗೆ ಶಾಂತಿ ನೀಡುತ್ತದೆ. ಇದನ್ನು ಔಷಧವಾಗಿಯೂ ಸೇವನೆ ಮಾಡುತ್ತಾರೆ. ಮುಂದಿನ ಜನಾಂಗಕ್ಕೆ ಈ ಬಗ್ಗೆ ಮನವರಿಕೆ ಮಾಡಬೇಕು. ಮದರಂಗಿಯ ಉದ್ದೇಶವೂ ಮದರಂಗಿಯಂತೆಯೇ ರಂಗು ನೀಡುವುದಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್ ಕಾರ್ಯಕಾರಿ ರಾಜಧಾನಿ
Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು