ವಾಕಥಾನ್ನಿಂದ ಉತ್ಸಾಹ ಆರಂಭಗೊಳ್ಳಲಿ: ನಿರಂಜನ್ ಭಟ್
Team Udayavani, Oct 2, 2018, 6:15 AM IST
ಉಡುಪಿ: ಹಿರಿಯ ನಾಗರಿಕರು ಮಾನಸಿಕವಾಗಿ ಯಾವಾಗಲೂ ಸದೃಢರೇ ಆಗಿರುತ್ತಾರೆ. ಆದರೆ ದೈಹಿಕವಾಗಿ ಸದೃಢರಾಗಲು ನಿಯಮಿತ ವ್ಯಾಯಾಮ ಅಗತ್ಯ, ಈ ವಾಕಥಾನ್ ಮೂಲಕ ನಿರಂತರ ವ್ಯಾಯಾಮಕ್ಕೆ ಚಾಲನೆ ದೊರಕಲಿ ಎಂದು ಜಿಲ್ಲಾ ವಿಕಲಚೇತನ ಮತ್ತು ಹಿರಿಯನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ ನಿರಂಜನ್ ಭಟ್ ಹೇಳಿದರು.
ಅವರು, ಮಣಿಪಾಲದ ಮಾಹೆ ವಿಶ್ವವಿದ್ಯಾನಿಲಯದ ಆಕ್ಯೂಪೇಶನಲ್ ಥೆರಪಿ ವಿಭಾಗ, ಹಿರಿಯನಾಗರಿಕರ ವೇದಿಕೆ, ಲಯನ್ಸ್ಕ್ಲಬ್ ಸಂಯುಕ್ತ ಆಶ್ರಯದಲ್ಲಿ ನಡೆದ ವಾಕಥಾನ್ ಅನ್ನು ಸಿಳ್ಳೆ ಊದುವ ಮೂಲಕ ಉದ್ಘಾಟಿಸಿ ಮಾತನಾಡಿ, ಹಿರಿಯನಾಗರಿಕರು ವಯಸ್ಸಾಯಿತು ಎಂದು ಮನೆಯಲ್ಲಿ ಕುಳಿತುಕೊಳ್ಳದೆ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿ ಕೊಳ್ಳಬೇಕು. ಆಗ ಮಾತ್ರ ಲವಲವಿಕೆಯಿಂದ ಇರಲು ಸಾಧ್ಯ ಎಂದರು.
ಲಯನ್ಸ್ ಜಿಲ್ಲಾ ಗವರ್ನರ್ ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿ, ವಾಕಿಂಗ್ ಜತೆ ಸ್ನೇಹಿತರೊಂದಿಗೆ ಕಷ್ಟ ಸುಖ
ಮಾತನಾಡಿ ಇದರಿಂದ ಮನಸ್ಸಿನ ಭಾರ ಇಳಿಯುತ್ತದೆ, ಮನಸ್ಸು ಆಹ್ಲಾದಗೊಳ್ಳುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಹಿರಿಯ ನಾಗರಿಕ ವೇದಿಕೆಯ ಗೌರವಾಧ್ಯಕ್ಷ ಎ.ಪಿ ಕೊಡಂಚ, ನಾವು ಹಿರಿಯ ನಾಗರಿಕರೆಂದು ಸುಮ್ಮನೆ ಕುಳಿತು ಕೊಳ್ಳುವುದು ತಪ್ಪು. ನಾವು ನಮ್ಮ ಕೆಲಸವನ್ನು ಮಾಡಿಕೊಂಡು ನಮ್ಮ ಪಾಡಿಗೆ ಇದ್ದರೆ ಬೇರೆಯವರಿಗೆ ಹೊರೆಯಾಗುವುದಿಲ್ಲ. ನಾವು ಕೂಡ ಆರೋಗ್ಯವಂತರಾಗಿರುತ್ತೇವೆ ಎಂದರು.
ಮಣಿಪಾಲದ ಅಸೋಸಿಯೇಟ್ ಡೀನ್ ಡಾ| ಕೆ.ಎಂ ಸಾಬು ಉಪಸ್ಥಿತರಿದ್ದರು. ವೇದಿಕೆ ಅಧ್ಯಕ್ಷ ಸಿ. ಎಸ್ ರಾವ್ ಸ್ವಾಗತಿಸಿ, ಆಕ್ಯುಪೇಶನಲ್ ತೆರಪಿ ವಿಭಾಗದ ವಿಭಾಗ ಮುಖ್ಯಸ್ಥೆ ಡಾ| ಸೆಬಾಸ್ಟಿನ್ ಅನಿತಾ ಡಿ’ಸೋಜಾ ಪ್ರಸ್ತಾವನೆಗೈದರು. ಭುವನೇಂದ್ರ ರಾವ್ ನಿರೂಪಿಸಿ, ದೇವರಾಜ್ ರಾವ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ