“ಯಕ್ಷಗಾನದಲ್ಲಿ ಜೀವನ ಆದರ್ಶ’
Team Udayavani, Jul 8, 2019, 5:03 AM IST
ಬ್ರಹ್ಮಾವರ: ಯಕ್ಷಗಾನವು ಜೀವನ ಆದರ್ಶವನ್ನು ಮನ ಮುಟ್ಟುವಂತೆ ತಿಳಿಸುವ, ಮನೋ ರಂಜನೆಯೊಂದಿಗೆ ಮನೋ ವಿಕಾಸಗೊಳಿಸುವ ಜೀವಂತ ಕಲೆ ಎಂದು ಸಮಾಜ ಸೇವಕ ಎಚ್. ಇಬ್ರಾಹಿಂ ಸಾಹೇಬ್ ಹೇಳಿದರು.
ಅವರು ಶನಿವಾರ ಬ್ರಹ್ಮಾವರ ಹೆರಂಜೆಯಲ್ಲಿ ಬ್ರಹ್ಮಾವರ ನ್ಪೋರ್ಟ್ಸ್ ಕ್ಲಬ್ ಒಳಾಂಗಣ ಕ್ರೀಡಾಂಗಣದಲ್ಲಿ ಯಕ್ಷಗಾನ ಸಂದರ್ಭ ಕ್ಲಬ್ ವತಿಯಿಂದ ಸಮ್ಮಾನ ಸ್ವೀಕರಿಸಿ ಮಾತನಾಡಿದರು. ಯಕ್ಷಗಾನ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದೆ. ಯಕ್ಷಗಾನ ಸತ್ವಕ್ಕೆ ಭಂಗ ಬಾರದಂತೆ ನಡೆಯಬೇಕು ಎಂದರು.
ಇದಕ್ಕೂ ಮೊದಲು ಮಣಿಪಾಲ ಎಂ.ಐ.ಟಿ. ಪ್ರಾಧ್ಯಾಪಕ ಎಸ್.ವಿ. ಉದಯ ಕುಮಾರ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ, ಕ್ಲಬ್ ಕ್ರೀಡೆಯೊಂದಿಗೆ ಹಲವು ಸಮಾಜಮುಖೀ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ. ಪರಿಸರದ ಕ್ರೀಡಾ ಪ್ರತಿಭೆಗಳು ಬೆಳೆಯುವಂತಾಗಲಿ ಎಂದರು.
ಅತಿಥಿಯಾಗಿ ಬ್ರಹ್ಮಾವರ ರೋಟರಿ ವೆಲ್ಫೆàರ್ ಸೊಸೈಟಿ ಗೌರವಾಧ್ಯಕ್ಷ ಟಿ. ಭಾಸ್ಕರ ರೈ ಮಾತನಾಡಿದರು. ಕ್ಲಬ್ ಅಧ್ಯಕ್ಷ ಎಂ. ಚಂದ್ರಶೇಖರ ಹೆಗ್ಡೆ ಸ್ವಾಗತಿಸಿ, ಕಾರ್ಯದರ್ಶಿ ಗ್ರೆಗರಿ ಡಿ’ಸಿಲ್ವಾ ವಂದಿಸಿದರು. ನಿವೃತ್ತ ಪ್ರಾಂಶುಪಾಲ ಎಸ್. ನೊರೊನ್ಹಾ ಸಮ್ಮಾನ ಪತ್ರ ವಾಚಿಸಿ, ಡಾ| ರೋಶನ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.ಬಳಿಕ ಪೆರ್ಡೂರು ಮೇಳದ ಆಯ್ದ ಕಲಾವಿದರಿಂದ ಕೀಚಕ ವಧೆ ಯಕ್ಷಗಾನ ಪ್ರದರ್ಶನಗೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅನಾಮಧೇಯ ಲಿಂಕ್ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ
Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ
MLC ಚುನಾವಣೆ ಬಿಜೆಪಿ, ಎನ್ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ
SSLC ಕಡಿಮೆ ಅಂಕ: ಕುಂದಾಪುರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ
Ajekar;ಕೆರೆಗೆ ಮೀನು ಹಿಡಿಯಲು ತೆರಳಿದ್ದ ಮಾವ-ಅಳಿಯ ಮುಳುಗಿ ಸಾವು
MUST WATCH
ಹೊಸ ಸೇರ್ಪಡೆ
National Conference ರೋಡ್ ಶೋ ವೇಳೆ ಮೂವರಿಗೆ ಚಾಕು ಇರಿತ
ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ
Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್ ಲಾರಿ; ಟ್ರಾಫಿಕ್ ಜಾಮ್
ಅನಾಮಧೇಯ ಲಿಂಕ್ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ
Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ