ಹಳ್ಳಾಡಿ; ಕಲ್ಲುಗಣಿಗಾರಿಕೆ ಸಮಸ್ಯೆ : ಸ್ಥಳೀಯರ ದೂರು ಪರಿಶೀಲನೆ
Team Udayavani, Jul 31, 2017, 6:30 AM IST
ಕೋಟ: ಹಳ್ಳಾಡಿ-ಹರ್ಕಾಡಿ ಗ್ರಾಮದ ಹಳ್ಳಾಡಿ ಗುಡ್ಡಿ ಎಂಬಲ್ಲಿ ನಡೆಯುತ್ತಿರುವ ಕಲ್ಲುಗಣಿಗಾರಿಕೆಯಿಂದ ಸಮಸ್ಯೆಯಾಗುತ್ತಿರುವ ಕುರಿತು ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಸ್ಥಳೀಯರು ಗಣಿ ಇಲಾಖೆಗೆ ನೀಡಿದ ದೂರಿನ ಮೇರೆಗೆ ತಜ್ಞರ ತಂಡ ಶುಕ್ರವಾರ ಕಲ್ಲುಕೋರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಸ್ಫೋಟದ ತೀವೃತೆ ಕುರಿತು ಪರಿಶೀಲನೆ
ಗಣಿಗಾರಿಕೆ ಸಂದರ್ಭ ನಡೆಸುವ ನ್ಪೋಟದಿಂದ ಮನೆಗಳಿಗೆ ಹಾನಿ ಯಾಗುತ್ತಿದೆ. ಆದ್ದರಿಂದ ಗಣಿಗಾರಿಕೆಯನ್ನು ಸ್ಥಗಿತಗೊಳಿಸಬೇಕು ಎಂದು ಸ್ಥಳೀಯರು ದೂರು ನೀಡಿರುವುದರಿಂದ, ಇಲ್ಲಿ ನಡೆಸಲಾಗುವ ನ್ಪೋಟ ಹಾಗೂ ಅದರ ತೀವೃತೆ ಮತ್ತು ಹಾನಿಯ ಕುರಿತು ತಜ್ಞರ ತಂಡ ಪರಿಶೀಲನೆ ನಡೆಸಿತು.
ಸ್ಥಳೀಯರ ಆಕ್ರೋಶ, ಪ್ರತಿಭಟನೆ ಎಚ್ಚರಿಕೆ
ಗಣಿಗಾರಿಕೆ ನಡೆಯುವ ಪಕ್ಕದಲ್ಲೇ ಹಲವಾರು ಮನೆಗಳಿದೆ. ಒಮ್ಮೆಲೆ ನೂರಾರು ನ್ಪೋಟಕಗಳನ್ನು ಸಿಡಿಸುವುದರಿಂದ ಮನೆಗಳಿಗೆ ಹಾನಿ ಯಾಗುತ್ತಿದೆ. ಆದ್ದರಿಂದ ಯಾವುದೇ ಕಾರಣಕ್ಕೆ ಗಣಿಗಾರಿಕೆ ಮುಂದುವರಿಸಲು ಅವಕಾಶ ನೀಡಬಾರದು ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು ಹಾಗೂ ಸಂಬಂಧಪಟ್ಟ ಇಲಾಖೆ ನಮ್ಮ ಮನವಿಯನ್ನು ಪುರಸ್ಕರಿಸುವ ಬದಲು ಸ್ಫೋಟಕದ ತೀವ್ರತೆಯನ್ನು ಪರಿಶೀಲಿಸುವ ನಾಟಕ ವಾಡುತ್ತಿದೆ. ತತ್ಕ್ಷಣ ಗಣಿಗಾರಿಕೆಗೆ ನೀಡಲಾದ ಪರವಾನಿಗೆಯನ್ನು ವಾಪಾಸು ಪಡೆಯುವ ಮೂಲಕ ನಮಗೆ ನ್ಯಾಯ ನೀಡಬೇಕು. ಇಲ್ಲವಾದರೆ ಮುಂದೆ ನಮ್ಮ ಅಸ್ಥಿತ್ವಕ್ಕಾಗಿ ಉಗ್ರ ಹೋರಾಟ ನಡೆಸುತ್ತೇವೆ ಎಂದು ಹೋರಾಟಗಾರರ ಪರವಾಗಿ ಗಣೇಶ ಅವರು ತಿಳಿಸಿದರು.
ಕೋಟ ಠಾಣಾಧಿಕಾರಿ ಸಂತೋಷ ಕಾಯ್ಕಿಣಿ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಉಪ ಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
MUST WATCH
ಹೊಸ ಸೇರ್ಪಡೆ
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ