ಮಣಿಪಾಲ: ಅಂಗನವಾಡಿ ಕೇಂದ್ರದಲ್ಲೇ ಎಲ್ಕೆಜಿ, ಯುಕೆಜಿ ತೆರೆಯಲು ಆಗ್ರಹ
Team Udayavani, Dec 2, 2022, 5:30 AM IST
ಮಣಿಪಾಲ : ಮಕ್ಕಳ ಪೂರ್ವ ಪ್ರಾಥಮಿಕ ಶಿಕ್ಷಣವನ್ನು(ಎಲ್ಕೆಜಿ, ಯುಕೆಜಿ) ಅಂಗನವಾಡಿ ಕೇಂದ್ರದಲ್ಲೇ ನೀಡಲು ವ್ಯವಸ್ಥೆ ಮಾಡಬೇಕು ಮತ್ತು ಗ್ರಾಚ್ಯುಟಿ ನೀಡುವುದು, ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕಿಯರಾಗಿ ಪರಿಣಿಸಬೇಕೆಂದು ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದ (ಸಿಐಟಿಯು) ಜಿಲ್ಲಾ ಸಮಿತಿಯಿಂದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಅನಂತರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಹಾಗಾರ್ ಮಾತನಾಡಿ, ಗ್ರಾಚ್ಯುಟಿ ಪಡೆಯಲು ಅಂಗನವಾಡಿ ನೌಕರರು ಅರ್ಹರು ಎಂದು ಈಗಾಗಲೇ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಹೀಗಾಗಿ ಕೂಡಲೇ ಗ್ರಾಚ್ಯುಟಿಗೆ ಸರಕಾರ ನಿರ್ದೇಶನ ಮಾಡಬೇಕು. ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸುವ ಮೂಲಕ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಮಕ್ಕಳಿಗೆ ಅಲ್ಲಿಯೇ ನೀಡುವ ವ್ಯವಸ್ಥೆ ಸರಕಾರ ಮಾಡಬೇಕು. ಸರಕಾರ ನಿರ್ದಿಷ್ಟ ಸೇವೆಗಳ ಹೊರತಾಗಿ ಹೆಚ್ಚುವರಿ ಕಾರ್ಯಗಳನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತತ್ಕ್ಷಣದಿಂದಲೇ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಶೀಲಾ ನಾಡ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರಿಗೆ ವಿವಿಧ ಸೌಲಭ್ಯ ಒದಗಿಸುವ ಜತೆಗೆ ಅವರನ್ನು ಶಿಕ್ಷಕಿಯರ ರೀತಿಯಲ್ಲೇ ಪರಿಗಣಿಸಿಬೇಕು. ವೇತನ ಹೆಚ್ಚಳ ಮಾಡಬೇಕು ಮತ್ತು ಗ್ರಾಚ್ಯುಟಿ ನೀಡುವ ವ್ಯವಸ್ಥೆಯನ್ನು ಕೂಡಲೇ ಜಾರಿ ಮಾಡಬೇಕು ಎಂದು ಆಗ್ರಹಿಸಿದರು. ಸಂಘದ ಜಿಲ್ಲಾಧ್ಯಕ್ಷೆ ಭಾರತಿ, ಖಜಾಂಚಿ ಯಶೋದಾ, ಸಿಐಟಿಯು ತಾಲೂಕು ಸಂಚಾಲಕ ಎಚ್. ನರಸಿಂಹ, ಮುಖಂಡ ಶೇಖರ್ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಸುಮೋ ತಳಿಯ ಕಲ್ಲಂಗಡಿ ಬೆಳೆದು ಯಶಸ್ವಿಯಾದ ಕರಾವಳಿ ರೈತ
ತುಳು ,ಕೊಂಕಣಿ ಭಾಷೆ ಕನ್ನಡದ ಸಹೋದರ ಭಾಷೆಗಳು | ಉದಯವಾಣಿ ಜತೆ ಡಾ| ಮಹೇಶ್ ಜೋಷಿ ಸಂವಾ
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಹೊಸ ಸೇರ್ಪಡೆ
ಫೆ.11, 12: ನಮ್ಮ ಸಂತೆಯಲ್ಲಿ ನಿಮ್ಮ ಮಳಿಗೆಯೂ ಇರಲಿ
ಕುಡಿದು ಬಂದು ಪತ್ನಿಗೆ ಹಲ್ಲೆ,ನಿಂದನೆ: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ವಿರುದ್ಧ FIR
ಚೀನಾದ ಗೂಢಚಾರಿಕೆ ಬಲೂನ್ ಹೊಡದುರುಳಿಸಿದ ಅಮೆರಿಕಾ: ಚೀನಾ ಆಕ್ರೋಶ
“ದೈವನರ್ತಕ’ರ ಮಾಸಾಶನ ಘೋಷಣೆಯಲ್ಲೇ ಬಾಕಿ? ಪ್ರತ್ಯೇಕ ಮಾರ್ಗಸೂಚಿ ಇಲ್ಲದೆ ಎದುರಾದ ತೊಡಕು
ಇನ್ನೂ ಜನಿಸದ ಕಂದಮ್ಮನಿಗಾಗಿ ಮಿಡಿದ ಸುಪ್ರೀಂಕೋರ್ಟ್!