ಕಿರು ಆಹಾರ ಸಂಸ್ಕರಣೆ ಉದ್ಯಮ ಘಟಕ ಆರಂಭಕ್ಕೆ  ಸಾಲ ಸೌಲಭ್ಯ: ತಿರಸ್ಕೃತ ಅರ್ಜಿಗಳೇ ಹೆಚ್ಚು !


Team Udayavani, Aug 19, 2022, 8:50 AM IST

33

ಉಡುಪಿ: ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣೆ ಉದ್ಯಮ (ಪಿಎಂಎಫ್ಎಂಇ) ಯೋಜನೆಯಡಿ ಉತ್ಪಾದನೆ ಘಟಕ ತೆರೆಯುವುದಕ್ಕಾಗಿ ಸಾಲ ಪಡೆಯಲು ಸಲ್ಲಿಕೆಯಾಗಿರುವ ಅರ್ಜಿಗಳಲ್ಲಿ ಮಂಜೂರಾಗಿರುವುದಕ್ಕಿಂತ ತಿರಸ್ಕೃತ ಮತ್ತು ಪರಿಶೀಲನೆಯಲ್ಲಿ ಇರುವುದೇ ಹೆಚ್ಚು.

ಉಡುಪಿ ಜಿಲ್ಲೆಯಲ್ಲಿ ಕಿರು ಆಹಾರ ಸಂಸ್ಕರಣೆ ಘಟಕ  ತೆರೆಯಲು 53 ಅರ್ಜಿಗಳು ಸಲ್ಲಿಕೆಯಾಗಿದ್ದವು. ಅವುಗಳಲ್ಲಿ 23 ಮಂಜೂರಾಗಿದ್ದು, 30 ತಿರಸ್ಕೃತಗೊಂಡಿವೆ. ಎರಡು ಅರ್ಜಿಗಳು ಬ್ಯಾಂಕ್‌ ಹಂತದಲ್ಲಿ ಪರಿಶೀಲನೆಯಲ್ಲಿವೆ. ದಕ್ಷಿಣ ಕನ್ನಡದಲ್ಲಿ 79 ಅರ್ಜಿಗಳಲ್ಲಿ 38 ಮಂಜೂರಾಗಿದ್ದು, 29 ತಿರಸ್ಕೃತಗೊಂಡಿವೆ; 12 ಪರಿಶೀಲನೆಯಲ್ಲಿವೆ. ಈ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕೆಂದು ಸರಕಾರದ ಸೂಚನೆಯಿದ್ದರೂ ಕೆಲವು ಬ್ಯಾಂಕ್‌ಗಳಲ್ಲಿ ಇದು ಪಾಲನೆಯಾಗುತ್ತಿಲ್ಲ ಎಂಬ ಆರೋಪ ಇದೆ.

ಸರಕಾರದಿಂದ ಸಬ್ಸಿಡಿ:

ಪಿಎಂಎಫ್ಎಂ ಘಟಕ ತೆರೆಯುವವರಿಗೆ ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಸಬ್ಸಿಡಿ ನೀಡಲಾಗುತ್ತದೆ. 20 ಲಕ್ಷ ರೂ.ಗಳ ವರೆಗಿನ ಹೂಡಿಕೆಗೆ ಶೇ. 50ರಷ್ಟು ಸಬ್ಸಿಡಿ ಸಿಗಲಿದೆ. ಇದರಲ್ಲಿ ರಾಜ್ಯ ಸರಕಾರದ ಪಾಲು ಶೇ. 15 ಮತ್ತು ಕೇಂದ್ರ ಸರಕಾರದ ಪಾಲು ಶೇ. 35ರಷ್ಟಿದೆ. ಸಬ್ಸಿಡಿಯು ನೇರವಾಗಿ ಬ್ಯಾಂಕ್‌ ಖಾತೆಗೆ ಜಮೆ ಆಗುತ್ತದೆ. ಈಗಾಗಲೇ ಉಡುಪಿ ಜಿಲ್ಲೆಯಲ್ಲಿ 23 ಘಟಕಗಳಿಗೆ ಸುಮಾರು 2.60 ಕೋಟಿ ರೂ. ಮತ್ತು ದ. ಕನ್ನಡ ಜಿಲ್ಲೆಯಲ್ಲಿ 38 ಘಟಕಗಳಿಗೆ 3 ಕೋ.ರೂ.ಗೂ ಅಧಿಕ ಸಾಲ ಮಂಜೂರು ಮಾಡಲಾಗಿದೆ.

ತಿರಸ್ಕೃತವಾಗಲು ಏನು ಕಾರಣ? :

ಪಿಎಂಎಫ್ಎಂ ಯೋಜನೆಗೆ ಸಲ್ಲಿಸಿರುವ ಬಹುಪಾಲು ಅರ್ಜಿಗಳು ವ್ಯಾಪಾರ ಪರವಾನಿಗೆ (ಟ್ರೇಡ್‌ ಲೈಸನ್ಸ್‌) ಕಾರಣದಿಂದ ತಿರಸ್ಕೃತಗೊಳ್ಳುತ್ತಿವೆ. ಗ್ರಾ.ಪಂ. ಸಹಿತ ಸ್ಥಳೀಯ ಸಂಸ್ಥೆಗಳು, ನಗರ ಸ್ಥಳೀಯ ಸಂಸ್ಥೆಗಳು ವ್ಯಾಪಾರ ಪರವಾನಿಗೆ ನೀಡುವುದಿಲ್ಲ. ಅವುಗಳಿಂದ ಎನ್‌ಒಸಿ ಮಾತ್ರ ಪಡೆಯಬೇಕಾಗುತ್ತದೆ. ಆದರೆ ಬ್ಯಾಂಕ್‌ಗಳು ಸ್ಥಳೀಯ ಸಂಸ್ಥೆಗಳಿಂದ ವ್ಯಾಪಾರ ಪರವಾನಿಗೆ ತರುವಂತೆ ಹೇಳುವುದೇ ಪ್ರಮುಖ ಸಮಸ್ಯೆ. ಉದ್ಯಮ್‌ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಂಡಿದ್ದರೆ ವ್ಯಾಪಾರ ಪರವಾನಿಗೆ ಅಗತ್ಯ ಇರುವುದಿಲ್ಲ. ಹೀಗಾಗಿ ಬ್ಯಾಂಕ್‌ಗಳು ಅರ್ಜಿ ತಿರಸ್ಕರಿಸುವುದಕ್ಕೆ ಮುನ್ನ ಈ ಅಂಶವನ್ನು ಗಮನಿಸಬೇಕಾಗುತ್ತದೆ. ಅಪೂರ್ಣ ದಾಖಲೆಗಳನ್ನು ನೀಡುವ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ. ಎಲ್ಲ ದಾಖಲೆಗಳನ್ನು ಏಕಕಾಲದಲ್ಲೇ ನೀಡಬೇಕು. ಒಮ್ಮೆ ಅರ್ಜಿ ಸಲ್ಲಿಸಿದ ಅನಂತರದ ಪರಿಷ್ಕರಿಸಲು ಅಥವಾ ಹೊಸದಾಗಿ ದಾಖಲೆಗಳನ್ನು ಸೇರಿಸಲು ಆಗುವುದಿಲ್ಲ. ಹೀಗಾಗಿ ಯಾವುದೇ ಒಂದು ದಾಖಲೆ ಇಲ್ಲದಿದ್ದರೂ ಅರ್ಜಿ ತಿರಸ್ಕೃತಗೊಳ್ಳುತ್ತದೆ. ಒಮ್ಮೆ ತಿರಸ್ಕೃತಗೊಂಡರೆ ಮತ್ತೆ ಆರಂಭದಿಂದಲೇ ಹೊಸದಾಗಿ ಅರ್ಜಿ ಸಲ್ಲಿಸಬೇಕು. ತಾಂತ್ರಿಕ ಅಂಶಗಳ ಬಗ್ಗೆ ವಿಶೇಷ ಎಚ್ಚರ ವಹಿಸಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಿ.ಎಂ. ಪಿಂಜಾರ, ಉಡುಪಿ ಜಿಲ್ಲಾ ಲೀಡ್‌ ಬ್ಯಾಂಕ್‌ ಮ್ಯಾನೇಜರ್‌ ಪಿಎಂಎಫ್ಎಂಇ ಯೋಜನೆಯಡಿ ಅರ್ಜಿಗಳು ತಿರಸ್ಕೃತವಾಗಿರುವುದು ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲೂ ಚರ್ಚೆಯಾಗಿದೆ. ವ್ಯಾಪಾರ ಪರವಾನಿಗೆ ವಿಚಾರವಾಗಿ ತಿರಸ್ಕೃತವಾಗಿರುವುದು ಇದೆ. ಉದ್ಯಮ್‌ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಂಡರೆ ಎಲ್ಲದಕ್ಕೂ ಅನುಕೂಲ. ಬ್ಯಾಂಕ್‌ಗಳು ಗ್ರಾ.ಪಂ.ಗಳಿಂದ ವ್ಯಾಪಾರ ಪರವಾನಿಗೆ ಕೇಳಬಾರದು.-ಪಿ.ಎಂ. ಪಿಂಜಾರ, ಉಡುಪಿ ಜಿಲ್ಲಾ ಲೀಡ್‌ ಬ್ಯಾಂಕ್‌ ಮ್ಯಾನೇಜರ್‌

-ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.