ಸಹಕಾರ ಸಂಸ್ಥೆಗಳ ಸಾಲದ ಮುದ್ರಾಂಕ ಶುಲ್ಕ ಇಳಿಕೆ


Team Udayavani, Jul 1, 2022, 5:18 AM IST

ಸಹಕಾರ ಸಂಸ್ಥೆಗಳ ಸಾಲದ ಮುದ್ರಾಂಕ ಶುಲ್ಕ ಇಳಿಕೆ

ಉಡುಪಿ: ನಗರ ವ್ಯಾಪ್ತಿಯ ಕೃಷಿಯೇತರ ಸಹಕಾರ ಬ್ಯಾಂಕ್‌/ಸಂಘಗಳಲ್ಲಿ ಸಾಲಗಾರರ ಮುದ್ರಾಂಕ ಶುಲ್ಕವನ್ನು ಇಳಿಕೆ ಮಾಡುವ ಮೂಲಕ ಸರಕಾರ ಸಾಲಗಾರರ ಆರ್ಥಿಕ ಹೊರೆಯನ್ನು ತಗ್ಗಿಸಿದೆ.

ಈ ಹಿಂದೆ ಕೃಷಿಯೇತರ ಸಹಕಾರ ಬ್ಯಾಂಕ್‌ಗಳಲ್ಲಿ ಸಾಲದ ಮೊತ್ತದ ಮೇಲೆ ಶೇ. 1ರಷ್ಟು ಮುದ್ರಾಂಕ ಶುಲ್ಕ ವಿಧಿಸಲಾಗುತ್ತಿತ್ತು. 10 ಲಕ್ಷ ರೂ. ಸಾಲ ಪಡೆದುಕೊಂಡರೆ 10 ಸಾವಿರ ರೂ. ಮುದ್ರಾಂಕ ಶುಲ್ಕ ಕಡಿತವಾಗುತ್ತಿತ್ತು. ಇದೀಗ ಶೇ. 0.3ರಷ್ಟು ಇಳಿಸಿದ್ದು, 10 ಲಕ್ಷ ರೂ. ಸಾಲ ಪಡೆದಲ್ಲಿ 3 ಸಾವಿರ ರೂ. ಶುಲ್ಕ ಬರಲಿದೆ. ಈಗಾಗಲೇ ಸರಕಾರ ಆದೇಶ ಮಾಡಿದ್ದು, ಪ್ರಸ್ತುತ ಜಿಲ್ಲೆಯ ಎಲ್ಲ ಸಹಕಾರಿ ಬ್ಯಾಂಕ್‌ಗಳಲ್ಲಿ ಸಾಲ ವಿತರಣೆ ಪ್ರಕ್ರಿಯೆಯಲ್ಲಿ ಇದನ್ನು ಅನುಷ್ಠಾನ ಮಾಡಲಾಗಿದೆ.

681 ಸಹಕಾರಿ ಬ್ಯಾಂಕ್ಗಳು :

ಜಿಲ್ಲೆಯಲ್ಲಿ ಎಲ್ಲ ವಿಧದ 681 ಸಹಕಾರಿ ಬ್ಯಾಂಕ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಇಲ್ಲಿನ ಆರ್ಥಿಕ ಬೆಳವಣಿಗೆಗೆ ತನ್ನದೇ ಆದ ಕೊಡುಗೆ ನೀಡುತ್ತಿವೆ. 681ರಲ್ಲಿ ಕಾಪು, ಕಾರ್ಕಳ, ಕುಂದಾಪುರ, ಉಡುಪಿ, ಸಾಲಿಗ್ರಾಮ ಭಾಗದಲ್ಲಿ ಶೇ. 50ರಷ್ಟು ಸಹಕಾರಿ ಬ್ಯಾಂಕ್‌ಗಳಲ್ಲಿ ಸಾಲ ಪಡೆಯುವ ಜನರಿಗೆ ಸರಕಾರದ ಈ ನಿಯಮ ಅನ್ವಯವಾಗಲಿದೆ. ಆದರೆ ಇದನ್ನು ನಗರ ಮಾತ್ರ ಪರಿಗಣಿಸಿ, ಗ್ರಾಮೀಣ ಭಾಗಕ್ಕೆ ನಿಯಮ ಅನ್ವಯವಾಗದಿರುವ ಬಗ್ಗೆ ಸಹಕಾರಿ ವಲಯದ ಧುರೀಣರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಟಿಡಿಎಸ್ನಿಯಮ ಪರಿಷ್ಕರಿಸಿ :

ಜಿಲ್ಲೆಯಲ್ಲಿ ಸಹಕಾರ ಬ್ಯಾಂಕ್‌ಗಳಲ್ಲಿ ಸಾಲ ವಿತರಣೆ ಮತ್ತು ವಸೂಲಾತಿ ಶೇ. 90ರಷ್ಟು ಉತ್ತಮವಾಗಿದ್ದು, ಸಹಕಾರ ಬ್ಯಾಂಕ್‌ ಠೇವಣಿಯಲ್ಲಿ ಒಟ್ಟು ಬಂಡವಾಳ ಶೇ. 25 ಮೊತ್ತವನ್ನು ಬೇರೆ ಬ್ಯಾಂಕ್‌ಗಳಲ್ಲಿ ವಿನಿಯೋಗಿಸಬೇಕು. ಇದರಿಂದ ಬರುವ ಬಡ್ಡಿ ಮೊತ್ತಕ್ಕೆ ಸರಕಾರ ಟಿಡಿಎಸ್‌ ವಿಧಿಸುತ್ತಿದೆ. ಈ ನಿರ್ಧಾರ ಸರಿಯಲ್ಲ. ಈ ಹೊರೆಯನ್ನು ಸಹಕಾರಿ ಬ್ಯಾಂಕ್‌ ಠೇವಣಿದಾರರ ಮೇಲೆ ಹಾಕಲು ಸಿದ್ಧವಿಲ್ಲ. ಸರಕಾರ ಇದನ್ನು ಪರಿಷ್ಕರಿಸಬೇಕು ಎಂಬ ಬೇಡಿಕೆ ಸಹಕಾರಿ ವಲಯದಲ್ಲಿದೆ.

ಸಹಕಾರ ಬ್ಯಾಂಕ್‌/ ಸಂಘಗಳಲ್ಲಿ ಸಾಲಗಾರರ ಮುದ್ರಾಂಕ ಶುಲ್ಕವನ್ನು ಇಳಿಕೆ ಮಾಡಲು ಈ ಹಿಂದೆ ಮನವಿ ಮಾಡಿದ್ದೆವು. ಸರಕಾರ ನಮ್ಮ ಬೇಡಿಕೆ ಪರಿಗಣಿಸಿದೆ. ಇದನ್ನು ಗ್ರಾಮೀಣ ಭಾಗಕ್ಕೂ ವಿಸ್ತರಿಸಲು ಒತ್ತಾಯಿಸಿದ್ದೇವೆ. ಅನ್ಯ ಬ್ಯಾಂಕ್‌ನಲ್ಲಿರುವ ನಮ್ಮ ಠೇವಣಿ ಮೊತ್ತದ ಬಡ್ಡಿಗೆ ವಿಧಿಸುವ ಟಿಡಿಎಸ್‌ ಕ್ರಮವನ್ನು ಹಿಂದಕ್ಕೆ ತೆಗೆದುಕೊಳ್ಳಬೇಕು.ಬಿ. ಜಯಕರ ಶೆಟ್ಟಿ ಇಂದ್ರಾಳಿಅಧ್ಯಕ್ಷ, ಜಿಲ್ಲಾ ಸಹಕಾರಿ ಯೂನಿಯನ್

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.