ಅಂಗವಿಕಲರಿಗಾಗಿ ನಿರ್ಮಿಸಿದ ಶೌಚಾಲಯಕ್ಕೆ ಬೀಗ

 ಬಳಕೆಗೆ ಅವಕಾಶವಿಲ್ಲ; ರಸ್ತೆಯಲ್ಲೇ ಮೂತ್ರ ವಿಸರ್ಜನೆ

Team Udayavani, Feb 11, 2020, 5:30 AM IST

394014485409265220200107_144502

ಉಡುಪಿ: ನಗರಸಭೆ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ನಾರ್ತ್‌ ಶಾಲೆ ಬಳಿ ವಿಶೇಷವಾಗಿ ಅಂಗವಿಕಲರಿಗಾಗಿ ನಿರ್ಮಿಸಲಾದ ಶೌಚಾಲಯ ಬಳಕೆಗೆ ಅವಕಾಶ ನೀಡದೆ ಬೀಗ ಹಾಕಲಾಗಿದೆ.

4.30 ಲಕ್ಷ ರೂ. ವೆಚ್ಚದ ಶೌಚಾಲಯ
2013-14ನೇ ಸಾಲಿನ ಎಸ್‌ಎಫ್ಸಿ ಶೇ. 3ರಷ್ಟು ನಿಧಿ ಬಳಸಿಕೊಂಡು ಸುಮಾರು 4.30 ಲ.ರೂ ವೆಚ್ಚದಲ್ಲಿ ಒಂದೇ ಕಟ್ಟಡದಲ್ಲಿ ಪುರುಷರಿಗೆ, ಮಹಿಳೆಯರಿಗೆ ಹಾಗೂ ಅಂಗವಿಕಲರಿಗೆ ಪ್ರತ್ಯೇಕ ಶೌಚಾಲಯ ನಿರ್ಮಿಸಲಾಗಿತ್ತು. ಅದರೆ ಈ ಶೌಚಾಲಯ ಯಾರಿಗಾಗಿ ನಿರ್ಮಿಸಲಾಗಿತ್ತೋ ಅವರಿಗೆ ಬಳಕೆ ಮಾಡಲು ಸಾಧ್ಯವಾಗುತ್ತಿಲ್ಲ. ಅಂಗವಿಕಲರು ಬೀಗ ಕಂಡು ಹಿಂದಿರುಗುತ್ತಿದ್ದಾರೆ.

ರಸ್ತೆಯಲ್ಲಿ ಮೂತ್ರ ವಿಸರ್ಜನೆ
ಶ್ರೀಕೃಷ್ಣ ಮಠ ಹಾಗೂ ಉಡುಪಿ ನಗರ ಸಂಪರ್ಕಿಸುವ ಮಧ್ಯ ಭಾಗದಲ್ಲಿ ಅಂಗವಿಕಲರಿಗೆ 2018ರಲ್ಲಿ ಶೌಚಾಲಯ ನಿರ್ಮಿಸಲಾಗಿತ್ತು. ಆದರೆ ಕಟ್ಟಡ ಉದ್ಘಾಟನೆಯಾದ ತಿಂಗಳಲ್ಲಿ ಬೀಗ ಹಾಕಿದ್ದು, ಶೌಚಾಲಯದ ಪಹರೆ ಕಾಯುವ ಸಿಬಂದಿ ನಿತ್ಯ ಬಳಕೆಯ ವಸ್ತುಗಳನ್ನು ಕೊಠಡಿಯಲ್ಲಿ ಇಟ್ಟಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ. ಬೀಗ ಹಾಕಿದ್ದರಿಂದ ಹಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ.

ಮದ್ಯ ವ್ಯಸನಿ ಸಿಬಂದಿ
ಶೌಚಾಲಯ ಉಸ್ತುವಾರಿಗೆ ಗುತ್ತಿಗೆದಾರಿಂದ ನೇಮಕಗೊಂಡ ವ್ಯಕ್ತಿ ಮದ್ಯ ಸೇವಿಸಿ ಕರ್ತವ್ಯ ನಿರ್ವಹಿಸುತ್ತಿರುವ ಬಗ್ಗೆ ದೂರುಗಳಿವೆ. ಅಂಗವಿಕಲರು ಏನಾದರೂ ಬಂದರೆ ಅವರನ್ನು 5ರಿಂದ 10 ನಿಮಿಷ ಕಾಯಿಸುತ್ತಿರುವ ಬಗ್ಗೆಯೂ ದೂರುಗಳಿವೆ. ಸಿಬಂದಿ ಮದ್ಯ ಸೇವನೆ ಮಾಡುವುದರಿಂದ ರಾತ್ರಿ ವೇಳೆ ಶೌಚಾಲಯಕ್ಕೆ ಹೋಗಲು ಜನರು ಭಯಪಡುತ್ತಾರೆ ಎಂದು ಸ್ಥಳೀಯರು ಹೇಳುತ್ತಾರೆ.

ನೀರಿನ ಸಮಸ್ಯೆ- ದುರ್ನಾತ
ಕಟ್ಟಡಕ್ಕೆ ಅಗತ್ಯವಿರುವ ನೀರು ಸರಬರಾಜು ಸರಿಯಾಗಿ ಆಗದೆ ಇರುವುದರಿಂದ ದುರ್ನಾತ ದಿಂದ ಶೌಚಾಲಯ ಕಟ್ಟಡ ಸಮೀಪ ತೆರಳಲು ಸಾಧ್ಯವಾಗುತ್ತಿಲ್ಲ. ಈ ಮಾರ್ಗವಾಗಿ ಶ್ರೀಕೃಷ್ಣ ಮಠಕ್ಕೆ ತೆರಳುವ ಪ್ರವಾಸಿಗರು ಮೂಗು ಮುಚ್ಚಿಕೊಂಡು ಹೋಗಬೇಕಾಗಿದೆ. ಪರಿಸರ ಸುತ್ತಮುತ್ತಲಿನಲ್ಲಿ ಸ್ವತ್ಛತೆಯ ಕೊರತೆಯಿಂದ ಸೊಳ್ಳೆ ಉತ್ಪಾದನ ಕೇಂದ್ರವಾಗಿ ಪರಿವರ್ತನೆಯಾಗಿದೆ.

ಅಧಿಕಾರಿಗಳು ಕ್ರಮ ಕೈಗೊಳ್ಳಿ
ಅಂಗವಿಕಲರಿಗಾಗಿ ನಿರ್ಮಾಣವಾದ ಶೌಚಾಲಯ ಇದೀಗ ಅವರ ಬಳಕೆಗೆ ಅವಕಾಶ ನೀಡದೆ ಬೀಗ ಹಾಕಿರುವುದು ಸರಿಯಲ್ಲ. ನಗರಸಭೆ ಅಧಿಕಾರಿಗಳು ಎಚ್ಚೆತ್ತುಕೊಂಡು ಕ್ರಮ ತೆಗೆದುಕೊಳ್ಳಬೇಕು.
-ಮೀನಾಕ್ಷಿ ಮಾಧವ ಬನ್ನಂಜೆ, ಮಾಜಿ ನಗರಸಭೆ ಅಧ್ಯಕ್ಷೆ.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.