ಲಾಕ್‌ಡೌನ್‌ ಪರಿಣಾಮ; ಮಾಸ್ಕ್, ಸ್ಯಾನಿಟೈಸರ್‌ಗೆ ಹೆಚ್ಚಿನ ಬೇಡಿಕೆ


Team Udayavani, Mar 29, 2020, 6:25 AM IST

ಲಾಕ್‌ಡೌನ್‌ ಪರಿಣಾಮ; ಮಾಸ್ಕ್, ಸ್ಯಾನಿಟೈಸರ್‌ಗೆ ಹೆಚ್ಚಿನ ಬೇಡಿಕೆ

ಉಡುಪಿ: ಕೋವಿಡ್‌- 19 ಭೀತಿ ಆರಂಭವಾದೊಡನೆ ಮಾಸ್ಕ್ ಹಾಗೂ ಸ್ಯಾನಿಟೈಸರ್‌ಗಳಿಗೆ ಅತೀ ಹೆಚ್ಚು ಬೇಡಿಕೆ ಬಂದಿದೆ. ಸದ್ಯ ಮೆಡಿಕಲ್‌ ಶಾಪ್‌ ಗಳಲ್ಲಿ ಯಾವ ವಿಧದ ಮಾಸ್ಕ್ ಗಳೂ ಸಾಕಷ್ಟು ಲಭ್ಯವಾಗುತ್ತಿಲ್ಲ. ಕೆಲವು ಮೆಡಿಕಲ್‌ ಶಾಪ್‌ ಗಳಲ್ಲಿ ದಿನವಿಡಿ ಸಾಮಾಜಿಕ ಅಂತರ ಕಾಯ್ದುಕೊಂಡು ಸರತಿ ಸಾಲಿನಲ್ಲಿ ನಿಂತರೂ ಮಾಸ್ಕ್, ಸ್ಯಾನಿಟೈಸರ್‌ ಸಿಗುತ್ತಿಲ್ಲ ಎಂಬುದು ಸಾರ್ವಜನಿಕರ ಅಳಲು. ಜಿಲ್ಲೆಯಲ್ಲಿ 320ಕ್ಕೂ ಅಧಿಕ ಮೆಡಿಕಲ್‌ ಶಾಪ್‌, 100 ಹೋಲ್‌ಸೇಲ್‌ ಮೆಡಿಕಲ್‌ ಶಾಪ್‌ಗ್ಳಿವೆ. ಅಧಿಕಾರಿಗಳು ಹೇಳುವ ಪ್ರಕಾರ ಕೆಲವು ಮೆಡಿಕಲ್‌ ಶಾಪ್‌ ಗಳಲ್ಲಿ ಇನ್ನೊಂದು ವಾರಕ್ಕೆ ಬೇಕಾಗುವಷ್ಟು ಮಾಸ್ಕ್ ಇದೆ ಎನ್ನುತ್ತಾರೆ.

ಉಡುಪಿ ಜಿಲ್ಲೆಗೆ ಸ್ಯಾನಿಟರಿ ಉತ್ಪಾದಿಸುವ ಫ್ಯಾಕ್ಟರಿಗಳು ಲಾಕ್‌ಡೌನ್‌ ಪರಿಣಾಮ ಮುಚ್ಚಲ್ಪಟ್ಟಿವೆ. ಫ್ಯಾಕ್ಟರಿ ತೆರೆದು ಕಾರ್ಯನಿರ್ವಹಿಸಲು ಸರಕಾರ ಅನುವು ಮಾಡಿಕೊಟ್ಟರೂ ಕೋವಿಡ್‌- 19 ಭೀತಿಯಿಂದಾಗಿ ಕಾರ್ಮಿಕರು ಕೆಲಸಕ್ಕೆ ಬರುತ್ತಿಲ್ಲ. ಇದರಿಂದಾಗಿ ಎಲ್ಲ ಫ್ಯಾಕ್ಟರಿಗಳು ಕೆಲಸ ನಿಲ್ಲಿಸಿಬಿಟ್ಟಿದೆ ಎನ್ನುತ್ತಾರೆ ಅಧಿಕಾರಿಗಳು.

ಮನೆಯಲ್ಲಿ ತಯಾರಿಸಬಹುದು
ಮಾಸ್ಕನ್ನು ಮನೆಯಲ್ಲೇ ತಯಾರಿಸಬಹುದು. ಅನಾರೋಗ್ಯವಿಲ್ಲ ದವರೂ ಮನೆಯಲ್ಲಿರುವ ಕಾಟನ್‌ ಬಟ್ಟೆಯನ್ನೇ ಮಾಸ್ಕ್ ಮಾಡಿ ಬಳಕೆ ಮಾಡಬಹುದು ಎಂದು ಸಲಹೆ ನೀಡುತ್ತಾರೆ ಆರೋಗ್ಯ ಇಲಾಖೆಯ ವೈದ್ಯರು. ಕಾಟನ್‌ ಬಟ್ಟೆಯನ್ನು ಚೆನ್ನಾಗಿ ಡಿಟರ್ಜೆಂಟ್‌ ಅಥವಾ ಡೆಟಾಲ್‌ ಬಳಸಿ ಬಿಸಿನೀರಲ್ಲಿ ವಾಶ್‌ ಮಾಡಬೇಕು. ಅನಂತರ ಅದನ್ನು ಮಾಸ್ಕ್ನಂತೆ ಹ್ಯಾಂಡ್‌ ಸ್ಟಿಚ್‌ ಮಾಡಿ ಬಳಕೆ ಮಾಡಬಹುದು. ಪ್ರತೀ ದಿನ ಸಾಯಂಕಾಲ ಉಪಯೋಗಿಸಿದ ಅನಂತರ ಅದನ್ನು ವಾಶ್‌ ಮಾಡಿ, ಮರುದಿನ ಐರನ್‌ ಮಾಡಿ ಉಪಯೋಗಿಸಬಹುದು ಎಂದು ಸಲಹೆ ನೀಡಿದ್ದಾರೆ. ಟ್ರಿಪಲ್‌ಲೇಯರ್‌ ಮಾಸ್ಕ್ 8 ಗಂಟೆ ಬಳಕೆ ಮಾಡಬಹುದು. ಎನ್‌-95 ಮಾಸ್ಕ್ 6 ಗಂಟೆ ಬಳಕೆಗೆ ಯೋಗ್ಯವಾಗಿರುತ್ತದೆ. ಕೆಲವರು ಇದನ್ನೇ ಎರಡು, ಮೂರು ವಾರಗಟ್ಟಲೆ ಹಾಕಿ ತಿರುಗಾಡುತ್ತಾರೆ. ಹೀಗೆ ಮಾಡುವುದು ಸುರಕ್ಷಿತವಲ್ಲ. ಇದನ್ನು ವಾಶ್‌ ಮಾಡಲು ಸಾಧ್ಯವಿಲ್ಲ. ಶೀತ, ಕೆಮ್ಮು ಇರುವವರು ಇದನ್ನು ಬಳಕೆ ಮಾಡಬಹುದು. ಆದರೆ ಸಾಮಾನ್ಯ ಜನರಿಗೆ ಇದರ ಅಗತ್ಯವಿಲ್ಲ. ಇದರಿಂದ ಪ್ರತೀದಿನ ಮಾಸ್ಕ್ ಬದಲಾಯಿಸುವ ಆವಶಕ್ಯತೆಯು ಬರುವುದಿಲ್ಲ. ತ್ಯಾಜ್ಯ ಸಮಸ್ಯೆಯೂ ಕಡಿಮೆಯಾಗುತ್ತದೆ ಎನ್ನುತ್ತಾರೆ ವೈದ್ಯರು.

ಸೂಕ್ತ ಕ್ರಮ ಅಗತ್ಯ
ಉತ್ಪಾದನೆ ಸ್ಥಗಿತವಾಗಿ, ಪೂರೈಕೆ ಇಲ್ಲವಾದ್ದರಿಂದ ಮಾಸ್ಕ್ ಹಾಗೂ ಸ್ಯಾನಿಟೈಸರ್‌ ಕೊರತೆ ಎದುರಾಗಿದೆ. ಜಿಲ್ಲೆಯಲ್ಲಿ ಒಂದು ವಾರಕ್ಕೆ ಬೇಕಾಗುವಷ್ಟು ಮಾಸ್ಕ್ ಗಳು ಮೆಡಿಕಲ್‌ ಶಾಪ್‌ ಗಳಲ್ಲಿ ಲಭ್ಯವಿದೆ. ಜನರಿಗೆ ಎಲ್ಲ ಮೆಡಿಕಲ್‌ ಶಾಪ್‌ ಗಳಲ್ಲಿ ಮಾಸ್ಕ್ ದೊರೆಯುವಂತಾಗಲು ಕ್ರಮ ತೆಗೆದುಕೊಳ್ಳಲಾಗುತ್ತಿದೆ.
-ಕೆ.ವಿ. ವೆಂಕಟೇಶ್‌,
ಸಹಾಯಕ ಔಷಧ ನಿಯಂತ್ರಕ, ಉಡುಪಿ

ಟಾಪ್ ನ್ಯೂಸ್

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

9-temple

Temple History: ಶ್ರೀ ವಡಭಾಂಡೇಶ್ವರ ಬಲರಾಮ ದೇವಸ್ಥಾನ; ಹಿನ್ನೆಲೆ, ಇತಿಹಾಸ,ವಿಶೇಷಗಳು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.