ಲಾಕ್‌ಡೌನ್‌ ಮುಗಿದರೂ ಮೀನುಗಾರಿಕೆಗೆ ತೊಡಕು? ಊರಿಗೆ ಹೋಗಿರುವ ಹೊರರಾಜ್ಯಗಳ ಕಾರ್ಮಿಕರು


Team Udayavani, Apr 11, 2020, 6:59 PM IST

ಲಾಕ್‌ಡೌನ್‌ ಮುಗಿದರೂ ಮೀನುಗಾರಿಕೆಗೆ ತೊಡಕು? ಊರಿಗೆ ಹೋಗಿರುವ ಹೊರರಾಜ್ಯಗಳ ಕಾರ್ಮಿಕರು

ಉಡುಪಿ/ಕುಂದಾಪುರ: ಕೋವಿಡ್ 19 ಹಿನ್ನೆಲೆಯಲ್ಲಿ ದೇಶವ್ಯಾಪಿ ಎ.14 ರವರೆಗೆ ಕರ್ಫ್ಯೂ ವಿಧಿಸಲಾಗಿದೆ. ಆ ಬಳಿಕ ಲಾಕ್‌ಡೌನ್‌ ತೆರವಾದರೂ, ಮೀನುಗಾರಿಕೆ ಪೂರ್ಣ ಮಟ್ಟದಲ್ಲಿ ಆರಂಭಗೊಳ್ಳುವುದು ಸಂಶಯವೆನಿಸಿದೆ. ಮೀನುಗಾರಿಕೆಯಲ್ಲಿದ್ದ ಹೊರ ರಾಜ್ಯಗಳ ಬಹುತೇಕ ಕಾರ್ಮಿಕರು ತಮ್ಮ ಊರುಗಳಿಗೆ ಹೋಗಿದ್ದಾರೆ.

ಮೇ 31ಕ್ಕೆ ಈ ಮೀನುಗಾರಿಕಾ ಋತು ಮುಕ್ತಾಯಗೊಳ್ಳಲಿದೆ. ಅಂದರೆ ಎ.14 ರ ಅನಂತರ ಮೀನುಗಾರಿಕೆಗೆ ಅವಕಾಶ ಕಲ್ಪಿಸಿದರೂ ಒಂದೂವರೆ ತಿಂಗಳ ಕಾಲವಷ್ಟೇ ಮೀನುಗಾರಿಕೆ ನಡೆಯಲಿದೆ. ಈಗಾಗಲೇ ಮಂಗಳೂರು, ಮಲ್ಪೆ, ಕಾರವಾರ, ಗಂಗೊಳ್ಳಿ, ಭಟ್ಕಳ ಮತ್ತಿತರ ಬಂದರುಗಳಲ್ಲಿ ಮೀನುಗಾರಿಕೆ ವೃತ್ತಿಯಲ್ಲಿದ್ದ ಆಂಧ್ರ ಪ್ರದೇಶ, ಒಡಿಸ್ಸಾ ಮತ್ತಿತರ ರಾಜ್ಯಗಳ ಕಾರ್ಮಿಕರು ಕೋವಿಡ್ 19 ಭೀತಿಯಲ್ಲಿ ಊರಿಗೆ ತೆರಳಿದ್ದಾರೆ. ಅವರೆಲ್ಲ ಮತ್ತೆ ವಾಪಾಸು ಬರುವುದು ಅನುಮಾನ.

ಇದರಿಂದ ನಾಡದೋಣಿಗಳು, ತ್ರಿ ಸೆವೆಂಟಿ, ಪಾತಿ ದೋಣಿಗಳು, ಸಣ್ಣ ಬೋಟಿನಲ್ಲಿ ಮೀನುಗಾರಿಕೆ ನಡೆಸುವವರಿಗೆ ಅಷ್ಟೇನು ಸಮಸ್ಯೆಯಾಗದಿದ್ದರೂ, ಆಳ ಸಮುದ್ರ ಮೀನುಗಾರಿಕೆಯಲ್ಲಿ ತೊಡಗಿಸಿಕೊಳ್ಳುವ ದೊಡ್ಡ ದೊಡ್ಡ ಬೋಟ್‌ಗಳಿಗೆ ಸಮಸ್ಯೆಯಾಗಲಿದೆ. ಮೀನು ಹಿಡಿದು ತಂದರೂ, ಅದನ್ನು ಬೋಟಿನಿಂದ ಇಳಿಸಲು, ಕಂಟೈನರ್‌ ಮತ್ತಿತರ ವಾಹನಗಳಿಗೆ ಲೋಡ್‌ ಮಾಡಲು ಜನರ ಕೊರತೆಯಾಗಲಿದೆ.

ಸಾವಿರಾರು ಮಂದಿ
ದ.ಕ., ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಸಾವಿರಾರು ಮಂದಿ ಈ ಮೀನುಗಾರಿಕೆ ವೃತ್ತಿಯನ್ನೇ ಅವಲಂಬಿಸಿದ್ದಾರೆ. ಮಂಗಳೂರಿನಲ್ಲಿ ಸುಮಾರು 1,200 ದಷ್ಟು ಬೋಟ್‌ಗಳಿದ್ದರೆ, 2 ಸಾವಿರಕ್ಕೂ ಮಿಕ್ಕಿ ಯಾಂತ್ರಿಕೃತ ಬೋಟುಗಳಿವೆ. ಇನ್ನು ಉಡುಪಿಯಲ್ಲಿ 4,332 ನಾಡ ದೋಣಿಗಳು, ದ.ಕ.ದ 1,416 ನಾಡ ದೋಣಿಗಳಿವೆ. ಇದಲ್ಲದೆ ಗಂಗೊಳ್ಳಿ, ಹೆಜಮಾಡಿ, ಮರವಂತೆ, ಕೋಡಿ ಕನ್ಯಾನ ಮತ್ತಿತರ ಬಂದರುಗಳಲ್ಲಿ ಸೇರಿದಂತೆ ಒಟ್ಟಾರೆ 50 ಸಾವಿರಕ್ಕೂ ಮಿಕ್ಕಿ ಮಂದಿ ಈ ಮೀನುಗಾರಿಕೆಯನ್ನು ಅವಲಂಬಿಸಿದ್ದಾರೆ.

ಕೋಟ್ಯಾಂತರ ರೂ. ನಷ್ಟ
ಕೋವಿಡ್ 19 ಹಿನ್ನೆಲೆಯಲ್ಲಿ ಕೋಟ್ಯಾಂತರ ರೂ. ನಷ್ಟ ಸಂಭವಿಸಿದೆ. ಸಣ್ಣ – ಸಣ್ಣ ಬೋಟು, ದೋಣಿಗಳಿಗೆ ದಿನವೊಂದಕ್ಕೆ 10 ರಿಂದ 20 ಸಾವಿರ ರೂ. ವರೆಗಿನ ಮೀನುಗಾರಿಕೆಯಾಗುತ್ತಿತ್ತು. ತ್ರಿಸೆವೆಂಟಿ ಬೋಟುಗಳು ಒಮ್ಮೆ ತೆರಳಿದರೆ 2 ರಿಂದ 3 ಲಕ್ಷ ರೂ.ವರೆಗಿನ ಮೀನು ಸಿಗುತ್ತಿತ್ತು. ಪರ್ಸಿನ್‌ ಬೋಟುಗಳಿಗೆ ಮೀನು ಸಿಕ್ಕರೆ 5 ರಿಂದ 6 ಲಕ್ಷ ರೂ. ಸಿಗುತ್ತಿತ್ತು. ಜತೆಗೆ ಮಂಜುಗಡ್ಡೆ, ಮೀನು ವ್ಯಾಪಾರಿಗಳು, ಸಾಗಣೆದಾರರು ಸಹಿತ ಎಲ್ಲ ಕ್ಷೇತ್ರಗಳಿಗೂ ಹೊಡೆತ ಬಿದ್ದಂತಾಗಿದೆ. ಸರಕಾರ ಮೀನುಗಾರರಿಗೆ ವಿಶೇಷ ಪ್ಯಾಕೇಜ್‌ ಘೋಷಿಸುವಂತೆ ಮೀನುಗಾರರು ಆಗ್ರಹಿಸಿದ್ದಾರೆ.

ಸಿಎಂ ಗಮನಕ್ಕೆ
ಮೀನುಗಾರರ ಸಂಕಷ್ಟದ ಬಗ್ಗೆ ಗಮನವಿದೆ. ಸದ್ಯ ಆರ್ಥಿಕ ಸಂಕಷ್ಟದಿಂದಾಗಿ ವಿಶೇಷ ಪ್ಯಾಕೇಜ್‌ನಂತಹ ಘೋಷಣೆ ಕಷ್ಟ. ಆದರೂ ಈ ಎಲ್ಲದರ ಬಗ್ಗೆ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರ ಗಮನಕ್ಕೆ ತರಲಾಗಿದ್ದು, ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ.
– ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರಿಕೆ, ಬಂದರು ಖಾತೆ ಸಚಿವ

ಮತ್ತಷ್ಟು ಸಂಕಷ್ಟ
ಮೀನುಗಾರರನ್ನು ಕೋವಿಡ್ 19 ಮತ್ತಷ್ಟು ಸಂಕಷ್ಟಕ್ಕೀಡು ಮಾಡಿದೆ. ಹೆಚ್ಚಿನ ಕಾರ್ಮಿಕರು ಊರಿಗೆ ಹೋಗಿದ್ದಾರೆ. ಮತ್ತೆ ಶೀಘ್ರ ಅವರು ಇಲ್ಲಿಗೆ ಬರುವುದು ಕಷ್ಟ. ಇದರಿಂದ ಆಳ ಸಮುದ್ರ ಮೀನುಗಾರಿಕೆಗೆ ಸಮಸ್ಯೆ ಎದುರಾಗಲಿದೆ.
– ರಮೇಶ್‌ ಕುಂದರ್‌,
ಅಧ್ಯಕ್ಷರು, ಪರ್ಸಿನ್‌ ಮೀನುಗಾರರ ಸಹಕಾರ ಸಂಘ, ಗಂಗೊಳ್ಳಿ

ಸಬ್ಸಿಡಿಯೂ ಇಲ್ಲ
ಸರಕಾರ ಕೊಡುತ್ತಿರುವ ಡೀಸೆಲ್‌ ಸಬ್ಸಿಡಿಯನ್ನು ಕಳೆದ ಸೆಪ್ಟೆಂಬರ್‌ನಿಂದ ಡಿಸೆಂಬರ್‌ವರೆಗಿದ್ದನ್ನು ಮಾರ್ಚ್‌ನಲ್ಲಿ ಮೀನುಗಾರರ ಖಾತೆಗೆ ಹಾಕಲಾಗಿದೆ. ಆದರೆ ಜನವರಿಯಿಂದ ಮಾರ್ಚ್‌ವರೆಗಿನ ಡೀಸೆಲ್‌ ಸಬ್ಸಿಡಿಯನ್ನು ಇನ್ನೂ ಕೊಟ್ಟಿಲ್ಲ. ಈ ಸಮಯದಲ್ಲಾದರೂ ನೀಡಬೇಕು.
– ಸತೀಶ್‌ ಕುಂದರ್‌, ಮೀನುಗಾರ ಮುಖಂಡರು, ಮಲ್ಪೆ

ಟಾಪ್ ನ್ಯೂಸ್

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.