ಮಣಿಪಾಲದ ಆರ್ಕಿಟೆಕ್ಟ್ ಡಿಪಾರ್ಟೆಂಟ್ ನ ನಿವೃತ್ತ ಉದ್ಯೋಗಿ ಮಧ್ವರಾಜ್ ಭಟ್ ನಿಧನ
Team Udayavani, Aug 16, 2022, 5:08 PM IST
ಉಡುಪಿ: ಮಣಿಪಾಲದ ಆರ್ಕಿಟೆಕ್ಟ್ ಡಿಪಾರ್ಟೆಂಟ್ ನ ನಿವೃತ್ತ ಉದ್ಯೋಗಿ, ಕಟ್ಟಡಗಳ ವಿನ್ಯಾಸಕಾರ, ವಾಜಶಕ್ಷೇತ್ರ ನಿವಾಸಿ ಮಧ್ವರಾಜ್ ಭಟ್ ರವರು (70) ಆ.16 ರಂದು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರರು,ಓರ್ವ ಪುತ್ರಿ ಸಹಿತ ಹಲವಾರು ಬಂಧು ಮಿತ್ರರನ್ನು ಅಗಲಿದ್ದಾರೆ.
ಶ್ರಿಕೃಷ್ಣ ಮಠದ ಸುತ್ತು ಪೌಳಿಯ ನಿರ್ಮಾಣ ಕಾರ್ಯದಲ್ಲಿ ರಾಜಾಂಗಣ,ಗೀತಾ ಮಂದಿರ ನಿರ್ಮಾಣ ಸಂಧರ್ಭ ವಿಶೇಷ ಮುತುವರ್ಜಿ ವಹಿಸಿದ್ದ ಇವರನ್ನು ಪೇಜಾವರ ಹಿರಿಯ ಶ್ರಿಗಳು ಶ್ರಿ ಕೃಷಾನುಗ್ರಹ ಪ್ರಶಸ್ತಿ ನೀಡಿ ಪುರಸ್ಕರಿಸಿದ್ದರು. ನೇಪಾಳ,ಗುಜರಾತ್ ನ ದ್ವಾರಕಾ, ದ.ಕ, ಉಡುಪಿ, ಬೆಂಗಳೂರು, ಕೋಲಾರ, ಕುಂಭಾಶಿ ಆಯ್ಯಪ್ಪ ಸ್ವಾಮಿ ದೇವಾಲಯ, ಸಹಿತ ಹಲವೆಡೆ ದೇವಸ್ಥಾನ ಮತ್ತು ಮಠಗಳ ಮರು ನಿರ್ಮಾಣದ ಕಾಮಗಾರಿಗೆ ನಕ್ಷೆಗಳನ್ನು ತಯಾರಿಸಿ ಕಟ್ಟಡಗಳ ನಿರ್ಮಾಣಕ್ಕೆ ರೂಪು ರೇಷೆಗಳನ್ನು ತಯಾರಿಸಿ ಕೊಡುತ್ತಿದ್ದರು.
ಸಾತ್ವಿಕ ಸ್ವಭಾವದವರಾಗಿದ್ದು, ಜನಾನುರಾಗಿಯಾಗಿದ್ದ ಶ್ರೀಯುತರ ನಿಧನಕ್ಕೆ ಅಷ್ಟ ಮಠಗಳ ಶ್ರೀಗಳು, ಉಡುಪಿ ಶಾಸಕ ರಘುಪತಿ ಭಟ್,ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸಹಿತ ಹಲವಾರು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ