ಮಧುವನ ರೈಲ್ವೇ ಮೇಲ್ಸೇತುವೆ: ಸಂಚಾರ ದುಸ್ತರ
Team Udayavani, Jun 23, 2018, 6:20 AM IST
ಕೋಟ: ಮಧುವನ ರೈಲ್ವೇ ಮೇಲ್ಸೇತುವೆಯಲ್ಲಿ ಪ್ರತಿ ವರ್ಷ ಮಳೆಗಾಲದಲ್ಲಿ ಹೊಂಡಗಳು ಸೃಷ್ಟಿಯಾಗಿ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ಸಂಚರಿಸಲು ಸಮಸ್ಯೆಯಾಗುತ್ತಿದೆ.ಈ ಬಾರಿ ಕೂಡ ಇದೇ ಪರಿಸ್ಥಿತಿ ಮುಂದುವರಿದಿದ್ದು ಹಲವು ಕಡೆ ಹೊಂಡ ಸೃಷ್ಟಿಯಾಗಿ ನೀರು ನಿಂತಿದೆ.
ಸೇತುವೆಯ ಮಧ್ಯ ತಗ್ಗಾಗಿರುವುದರಿಂದ ಹಾಗೂ ನೀರು ಹೊರಗಡೆ ಹೋಗಲು ಸರಿಯಾದ ವ್ಯವಸ್ಥೆ ಇಲ್ಲದಿ ರುವುದರಿಂದ ಹೊಂಡಗಳು ಸೃಷ್ಟಿಯಾಗುತ್ತವೆ. ಕಳೆದ ವರ್ಷ ರಸ್ತೆ ದುರಸ್ತಿಗೊಳಿಸುವ ಸಂದರ್ಭ ಡಾಮರು ಕಾಮಗಾರಿ ಕೈಗೊಂಡರೂ ಕೂಡ ಪ್ರಯೋಜನವಾಗಿಲ್ಲ.
ಸಮಸ್ಯೆಯ ವಿರುದ್ಧ ಕಳೆದ ವರ್ಷ ಸ್ಥಳೀಯರು ಗಿಡ ನೆಡುವ ಮೂಲಕ ಪ್ರತಿಭಟನೆ ನಡೆಸಿದ್ದು ಈ ಬಾರಿ ಸಮಸ್ಯೆ ಉಲ್ಬಣಿಸುವ ಮೊದಲೇ ಕ್ರಮ ಕೈಗೊಳ್ಳುವಂತೆ ಆಗ್ರಹ ಕೇಳಿ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು