98 ಲ.ರೂ. ವೆಚ್ಚದ ಕಾಮಗಾರಿಗೆ ಒಂದೂವರೆ ವರ್ಷ ಆಯುಷ್ಯ!

ಮಹಾತ್ಮಾ ಗಾಂಧಿ ಬಯಲು ರಂಗಮಂದಿರ‌ ಈಗ ಪ್ರಾಣಿಗಳ ಆವಾಸ ಸ್ಥಳ

Team Udayavani, Jan 11, 2021, 7:00 AM IST

98 ಲ.ರೂ. ವೆಚ್ಚದ ಕಾಮಗಾರಿಗೆ ಒಂದೂವರೆ ವರ್ಷ ಆಯುಷ್ಯ!

ಉಡುಪಿ: ನಗರದ ಬೀಡಿನಗುಡ್ಡೆಯಲ್ಲಿ ಲಕ್ಷಾಂತರ ರೂ.  ವೆಚ್ಚದಲ್ಲಿ ನಿರ್ಮಿಸಲಾದ ಮಹಾತ್ಮಾ ಗಾಂಧಿ ಬಯಲು ರಂಗಮಂದಿರ‌ ಇದೀಗ ಪ್ರಾಣಿಗಳ ಆವಾಸ ಸ್ಥಳವಾಗಿ ಪರಿವರ್ತನೆಗೊಂಡಿದೆ. ಸಾಂಸ್ಕೃತಿಕ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಬೀಡಿನಗುಡ್ಡೆಯಲ್ಲಿ  ಇದನ್ನು 2016ರ ಜ.26ರಂದು  ಅಂದಿನ ಉಸ್ತುವಾರಿ ಸಚಿವರಾಗಿದ್ದ ವಿನಯಕುಮಾರ್‌ ಸೊರಕೆ ಉದ್ಘಾಟಿಸಿ ದ್ದರು. ಆ ಬಳಿಕ ಸ್ವಾತಂತ್ರ್ಯೋತ್ಸವ, ಗಣರಾಜ್ಯೋತ್ಸವ ಸೇರಿದಂತೆ ಇತರ  ಕೆಲವು ಸರಕಾರಿ ಕಾರ್ಯಕ್ರಮಗಳು ಇದೇ ವೇದಿಕೆಯಲ್ಲಿ ನಡೆದಿತ್ತು. ವೇದಿಕೆಯ ಬಾಡಿಗೆ ಶುಲ್ಕವನ್ನು  ಅಂದಿನ ಡಿಸಿ ಡಾ| ವಿಶಾಲ್‌ ಅವರಿಗೆ ಮನವಿ ನೀಡಿದ ಅನಂತರ  ಇದರ ಶುಲ್ಕವನ್ನು ಪರಿಷ್ಕೃತಗೊಳಿಸಿದ್ದರು.

ಒಂದೂವರೆ ವರ್ಷದಲ್ಲಿ ಕುಸಿತ :

ಇದು  ನಿರ್ಮಾಣಗೊಂಡ  ಒಂದೂವರೆ  ವರ್ಷದೊಳಗೆ ಇದರ ಮುಂಭಾಗದ  ಅವರಣ ಗೋಡೆ ಕುಸಿದಿದ್ದು   ಇದುವರೆಗೂ ದುರಸ್ತಿ ಕಂಡಿಲ್ಲ. ಕೋವಿಡ್‌- 19ರ ಸಂದರ್ಭ ಇಲ್ಲಿ ಸಂತೆ  ನಡೆದಾಗ  ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಇದರ ಆವರಣ ಗೋಡೆ ಮತ್ತೆ ಕುಸಿದಿತ್ತು. ಪ್ರಸ್ತುತ ಅಡಿಕೆಯ ಸಲಿಕೆ, ಬಿದಿರು ತುಂಡುಗಳನ್ನಿಟ್ಟು ತಡೆಬೇಲಿ ಹಾಕಲಾಗಿದೆ.

98 ಲ.ರೂ. ವೆಚ್ಚದಲ್ಲಿ ನಿರ್ಮಾಣ :

ನಗರಸಭೆಯ ಸುಮಾರು 3.5 ಎಕ್ರೆ  ಪ್ರದೇಶದಲ್ಲಿ ವಿಶೇಷ ಅನುದಾನದಿಂದ 98 ಲ.ರೂ. ವೆಚ್ಚದಲ್ಲಿ  ಅವರಣ ಗೋಡೆ  ನಿರ್ಮಿಸಿ ವಿವಿಧ ಕಾರ್ಯಕ್ರಮಗಳ ಬಳಕೆಗೆ  ಇದನ್ನು ನೀಡಲಾಗಿತ್ತು. ಕೋವಿಡ್‌-19ರ ಬಳಿಕ ಇಲ್ಲಿ ಕಾರ್ಯಕ್ರಮನಡೆದಿರುವುದು ಕಡಿಮೆ. ಈ ರಂಗಮಂದಿರ ನಗರಸಭೆ ವ್ಯಾಪ್ತಿಯ ಲ್ಲಿದೆ.  ಜಿಲ್ಲಾಧಿಕಾರಿ ಇದರ ಉಸ್ತುವಾರಿ ಸಮಿತಿಯ ಅಧ್ಯಕ್ಷರಾಗಿದ್ದಾರೆ.

ಯಾವುದೇ ಕ್ರಮವಿಲ್ಲ :

ಇಷ್ಟು  ವೆಚ್ಚದ ಕಾಮಗಾರಿ ಒಂದೇ  ವರ್ಷದಲ್ಲಿ ಕುಸಿದಿದ್ದರೂ ಗುತ್ತಿಗೆ ದಾರರ ವಿರುದ್ಧ  ಯಾವುದೇ  ಕ್ರಮ ಕೈಗೊಂಡಿಲ್ಲ. ಮಳೆಯಿಂದ ಹಾಳಾಗಿವೆಎನ್ನುವ ಸಬೂಬು ನೀಡಲಾಗಿದೆ. ಇದೀಗ ಅವರಣ ಗೋಡೆ ದುರಸ್ತಿಗೆ 56,000  ರೂ. ಮೊತ್ತದ ಅಂದಾಜುಪಟ್ಟಿ ತಯಾರಿಸಲಾಗಿದ್ದು  ಇದರ ಕಾಮಗಾರಿಗೆ ಆಡಳಿತ ಮಂಜೂರಾತಿ  ಕೋರಿ ಡಿ. 22ರಂದು ನಡೆದ ಸಾಮಾನ್ಯ ಸಭೆಯಲ್ಲಿ ಮಂಡಿಸಿದ್ದು, ಇದಕ್ಕೆ ನಗರಸಭೆಯ ಜನಪ್ರತಿನಿಧಿಗಳು ಒಪ್ಪಿಗೆ ಸೂಚಿಸಿದ್ದಾರೆ.

ಕೋವಿಡ್ ಸಂದರ್ಭದಲ್ಲಿ ಬೀಡಿನ ಗುಡ್ಡೆಯಲ್ಲಿ ಸಂತೆ  ನಡೆದಿತ್ತು.  ಈ ಸಂದರ್ಭ ಲಾರಿಯೊಂದು ನಿಯಂತ್ರಣ ತಪ್ಪಿ ಆವರಣಗೋಡೆಗೆ ಗುದ್ದಿತ್ತು. ಅದರ ದುರಸ್ತಿಗೆ 56,000 ರೂ. ಮೊತ್ತದ ಕಾಮಗಾರಿ ನಡೆಸಲಾಗುತ್ತದೆ. -ಸುಮಿತ್ರಾ ನಾಯಕ್‌,  ಅಧ್ಯಕ್ಷರು, ನಗರಸಭೆ, ಉಡುಪಿ.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.