ಜಾಗತಿಕ ಪೈಪೋಟಿಯ ಸಂಸ್ಥೆಗಳನ್ನು ರೂಪಿಸಲು ಪ್ರಧಾನಿಯತ್ನ: ಡಾ| ಬಲ್ಲಾಳ್


Team Udayavani, Jul 25, 2018, 3:30 AM IST

mahe-sambhrama-24-7.jpg

ಉಡುಪಿ: ಜಾಗತಿಕ ಗುಣಮಟ್ಟದ ಶಿಕ್ಷಣ ಸಂಸ್ಥೆಗಳನ್ನು ರೂಪಿಸಬೇಕೆಂಬ ಪ್ರಧಾನಿ ಮೋದಿ ಅವರ ಹಂಬಲಕ್ಕೆ ಪೂರಕವಾಗಿ ಮಣಿಪಾಲ ಮಾಹೆ ವಿಶ್ವವಿದ್ಯಾನಿಲಯಕ್ಕೆ ಉತ್ಕೃಷ್ಟ ಸಂಸ್ಥೆ (IOE) ಮಾನ್ಯತೆ ದೊರಕಿದೆ ಎಂದು ಮಾಹೆ ವಿ.ವಿ. ಸಹಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌ ಹೇಳಿದರು. ಮಣಿಪಾಲದ ವ್ಯಾಲಿವ್ಯೂ ಹೊಟೇಲ್‌ ನಲ್ಲಿ ಮಂಗಳವಾರ ನಡೆದ ಉತ್ಕೃಷ್ಟ ಸಂಸ್ಥೆ ಮಾನ್ಯತೆ ಸಂಭ್ರಮಾಚರಣೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಭಾರತ ಜಗತ್ತಿನಲ್ಲಿ ಮೂರನೆಯ ಅತಿ ದೊಡ್ಡ ಶಿಕ್ಷಣ ಪೂರೈಕೆದಾರ ರಾಷ್ಟ್ರವಾದರೂ ಇಲ್ಲಿ ಜಾಗತಿಕ ಸ್ತರದ ಸಂಸ್ಥೆಗಳಿಲ್ಲ. ಇದನ್ನು ಮನಗಂಡು ಪ್ರಧಾನಿಯವರು ಜಾಗತಿಕ ಪೈಪೋಟಿಯ ಸಂಸ್ಥೆಗಳನ್ನು ರೂಪಿಸಲು ಯತ್ನಿಸುತ್ತಿದ್ದಾರೆ ಎಂದರು. 

ಅನ್‌-ಅಂಡರ್‌ ಎಂಪ್ಲಾಯ್ಮೆಂಟ್‌!
ವರ್ಷಕ್ಕೆ 15 ಲಕ್ಷ ಎಂಜಿನಿಯರುಗಳನ್ನು ವಿವಿಧ ಎಂಜಿನಿಯರಿಂಗ್‌ ಕಾಲೇಜುಗಳು ಉತ್ಪಾದಿಸುತ್ತಿದ್ದರೂ ಶೇ. 25 ವಿದ್ಯಾರ್ಥಿಗಳು ಉದ್ಯೋಗಾರ್ಹತೆ ಪಡೆದಿರುವುದಿಲ್ಲ. ನನ್ನ ಪ್ರಕಾರ ನಿರುದ್ಯೋಗಕ್ಕಿಂತಲೂ ಶಿಕ್ಷಣ ಪಡೆದು ಉದ್ಯೋಗಾರ್ಹತೆ ಗಳಿಸದೆ ಇರುವುದು ಹೆಚ್ಚು ಅಪಾಯಕಾರಿ ಎಂದು ಡಾ| ಬಲ್ಲಾಳ್‌ ಅಭಿಪ್ರಾಯಪಟ್ಟರು.

ದೇಶದ ಮೂರು ಸರಕಾರಿ ಮತ್ತು ಮೂರು ಖಾಸಗಿ ಸಂಸ್ಥೆಗಳನ್ನು ಮಾನವ ಸಂಪನ್ಮೂಲ ಇಲಾಖೆ ಗುರುತಿಸಿದ್ದು, ಮಾಹೆ ಒಂದಾಗಿದೆ. ಮಾಹೆ ವಿ.ವಿ.ಯಲ್ಲಿ 20ಕ್ಕೂ ಹೆಚ್ಚು ಆಯಾಮದ ಶಿಕ್ಷಣ ಕೋರ್ಸುಗಳಿರುವುದು ವೈಶಿಷ್ಟ್ಯ. ಇದಕ್ಕೆ ಡಾ| ಟಿ.ಎಂ.ಎ. ಪೈಯವರು ದಶಕಗಳ ಹಿಂದೆ ಹಾಕಿದ ಭದ್ರ ಬುನಾದಿಯೇ ಕಾರಣ ಎಂದು ಡಾ| ಬಲ್ಲಾಳ್‌ ನೆನಪಿಸಿಕೊಂಡರು.

ಉತ್ಕೃಷ್ಟ ಸಂಸ್ಥೆ ಮಾನ್ಯತೆ ದೊರಕಬೇಕಾದರೆ ಮಾಹೆ ಕುಲಪತಿ ಸಿದ್ಧಪಡಿಸಿದ ದಾಖಲೆ, ಪಟ್ಟ ಶ್ರಮ ವನ್ನು ನಿರ್ದೇಶಕ (ಗುಣಮಟ್ಟ) ಡಾ| ಸಂದೀಪ್‌ ಶೆಣೈ ವಿವರಿಸಿದರು. ಸಹ ಕುಲಪತಿ ಡಾ| ಪೂರ್ಣಿಮಾ ಬಾಳಿಗಾ ಸ್ವಾಗತಿಸಿ, ಕುಲಸಚಿವ ಡಾ| ನಾರಾಯಣ ಸಭಾಹಿತ್‌ ವಂದಿಸಿದರು. ಮಾಹೆ ಪ್ರಥಮ ಮಹಿಳೆ, ಮಾಹೆ ಟ್ರಸ್ಟ್‌ ಟ್ರಸ್ಟಿ ವಸಂತಿ ಪೈ, ಎಂಇಎಂಜಿ ಅಧ್ಯಕ್ಷ, ಅಕಾಡೆಮಿ ಆಫ್ ಜನರಲ್‌ ಎಜುಕೇಶನ್‌ ಕುಲಸಚಿವ ಡಾ| ರಂಜನ್‌ ಆರ್‌. ಪೈ, ಸಹಕುಲಪತಿಗಳಾದ ಡಾ| ವಿ. ಸುರೇಂದ್ರ ಶೆಟ್ಟಿ, ಡಾ| ಸಿ.ಎಸ್‌. ತಮ್ಮಯ್ಯ ಉಪಸ್ಥಿತರಿದ್ದರು. ಟೆಡ್ಡಿ ಆಂಡ್ರ್ಯೂಸ್‌ ಕಾರ್ಯಕ್ರಮ ನಿರ್ವಹಿಸಿದರು. ಡಾ| ಟಿಎಂಎ ಪೈಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು.

ಮೂರು ಕಡೆ ಮಾಹೆ ಕ್ಯಾಂಪಸ್‌ 
ಬೆಂಗಳೂರು, ಜಮ್ಶೆಡ್‌ಪುರ ಮತ್ತು ಶ್ರೀಲಂಕಾದಲ್ಲಿ ಇನ್ನೆರಡು ವರ್ಷಗಳಲ್ಲಿ ‘ಮಾಹೆ’ ವಿ.ವಿ. ಕ್ಯಾಂಪಸ್‌ ಗಳನ್ನು ತೆರೆಯಲಾಗುವುದು ಎಂದು ವಿ.ವಿ. ಕುಲಪತಿ ಡಾ| ಎಚ್‌. ವಿನೋದ ಭಟ್‌ ತಿಳಿಸಿದರು. ಉತ್ಕೃಷ್ಟ ಸಂಸ್ಥೆ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಾಗತಿಕ ಸ್ತರದ ಸಂಸ್ಥೆಗಳನ್ನು ದೃಷ್ಟಿಯಲ್ಲಿರಿಸಿಕೊಂಡು ಕೇಂದ್ರ ಮಾನವ ಸಂಪದಭಿವೃದ್ಧಿ ಇಲಾಖೆ ಮಾಹೆಯನ್ನು ಉತ್ಕೃಷ್ಟ ಸಂಸ್ಥೆಯಾಗಿ ಘೋಷಿಸಿದೆ. ಆದರೆ ಇಲ್ಲಿಗೆ ನಮ್ಮ ಸಾಧನೆ ನಿಲ್ಲುವುದಿಲ್ಲ. ಮುಂದೆ ಸಂಶೋಧನೆ, ಶೈಕ್ಷಣಿಕ ಉತ್ಕೃಷ್ಟತೆಯು ಇದುವರೆಗೆ ಇದ್ದದ್ದಕ್ಕಿಂತ ಭಿನ್ನವಾಗಿ, ವೈಶಿಷ್ಟ್ಯಪೂರ್ಣವಾಗಿ ಹೊರಹೊಮ್ಮಬೇಕು ಎಂದರು.

1975ರಲ್ಲಿ ಡಾ| ಟಿ.ಎಂ.ಎ. ಪೈಯವರು ಸರಕಾರದ ವರ್ತನೆಯಿಂದ ಬೇಸತ್ತು ಪ್ರಧಾನಿ ಮೊರಾರ್ಜಿ ದೇಸಾಯಿಯವರಿಗೆ ಪತ್ರ ಬರೆದು ‘ಮಣಿಪಾಲದ ಸಂಸ್ಥೆಯನ್ನು ತೆಗೆದುಕೊಂಡು ರಾಷ್ಟ್ರೀಕರಣ ಮಾಡಿಕೊಳ್ಳಿ’ ಎಂದರು. 2006-07ರಲ್ಲಿ ಮಾಹೆ ಇತಿಹಾಸದಲ್ಲಿ ಬೇಸರದ ವರ್ಷ. ಭಾರತೀಯ ವೈದ್ಯಕೀಯ ಮಂಡಳಿಯ ಕಿರಿಕಿರಿಯಿಂದ ಬೇಸತ್ತು ‘ಕೆಎಂಸಿಯನ್ನು ಮುಚ್ಚುತ್ತೇನೆ’ ಎಂದು ಡಾ| ರಾಮದಾಸ್‌ ಪೈ ಹೇಳಿದ್ದರು. ಇದು ಗುಣಮಟ್ಟಕ್ಕೆ ರಾಜಿಯಾಗದ ತಂದೆ-ಮಗನ ಇಚ್ಛಾಶಕ್ತಿಯಾಗಿತ್ತು ಎಂದು ಡಾ| ವಿನೋದ ಭಟ್‌ ನೆನಪಿಸಿಕೊಂಡರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.