ಉಡುಪಿ ಜಿಲ್ಲೆಗೊಂದೇ ಮಹಿಳಾ ಸಾಂತ್ವನ ಕೇಂದ್ರ

ಕಾರ್ಕಳದಲ್ಲಿ ಮಾತ್ರ, ಉಡುಪಿ, ಕುಂದಾಪುರ ಇಲ್ಲ

Team Udayavani, Jan 9, 2023, 7:35 AM IST

ಉಡುಪಿ ಜಿಲ್ಲೆಗೊಂದೇ ಮಹಿಳಾ ಸಾಂತ್ವನ ಕೇಂದ್ರ

ಕುಂದಾಪುರ: ವರದಕ್ಷಿಣೆ ಕಿರುಕುಳ, ಲೈಂಗಿಕ ಹಲ್ಲೆ, ಕೌಟುಂಬಿಕ ಸಮಸ್ಯೆ ಹಾಗೂ ಪುರುಷನಿಂದ ದೌರ್ಜನ್ಯಕ್ಕೆ ಒಳಗಾಗುವ ಮಹಿಳೆಯರಿಗೆ ನೆರವಾಗಲು 2001-02ರಲ್ಲಿ ರಾಜ್ಯ ಸರಕಾರ ಆರಂಭಿಸಿದ ಸಾಂತ್ವನ ಮಹಿಳಾ ಸಹಾಯವಾಣಿ ಈಗ “ಅಸಹಾಯವಾಣಿ’ಯಾಗಿದೆ. ಅಧಿಕಾರಿಗಳ ಅಸಡ್ಡೆ, ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಸಾಂತ್ವನ ಕೇಂದ್ರಗಳು ಬಾಗಿಲು ಹಾಕುತ್ತಿವೆ. ಈ ಕೇಂದ್ರಗಳಲ್ಲಿ ಒಬ್ಬ ಕೌನ್ಸೆಲರ್‌ ಮತ್ತು ಮೂವರು ಸಾಮಾಜಿಕ ಕಾರ್ಯಕರ್ತೆಯರಿದ್ದು, ನೊಂದ ಮಹಿಳೆಯರಿಗೆ ಸಾಂತ್ವನ ಹೇಳುವ ಕೆಲಸ ಮಾಡುತ್ತಿದ್ದರು. ಆದರೆ ಇಲಾಖೆಯ ಹಣಕಾಸು ಕೊರತೆಯಿಂದಾಗಿ ಈ ಕೇಂದ್ರಗಳು ಅಸ್ತಿತ್ವ ಉಳಿಸಿಕೊಳ್ಳಲು ಹೆಣಗಾಡುತ್ತಿವೆ.

ಈ ಕೇಂದ್ರಗಳನ್ನು ನಡೆಸುವುದು ಮಹಿಳಾ ಮಂಡಲಗಳೇ ಆದರೂ ಅಲ್ಲಿ ಕೆಲಸ ಮಾಡುವ ಕೌನ್ಸೆಲರ್‌ಗಳಿಗೆ ವೇತನ ನೀಡುವುದು ಸರಕಾರ. ಬಿಎಸ್‌ಡಬ್ಲ್ಯು ಆದರೆ 10 ಸಾವಿರ, ಎಂಎಸ್‌ಡಬ್ಲೂé ಆದರೆ 15 ಸಾವಿರ ರೂ.ಗಳಂತೆ ಒಟ್ಟು 45 ಸಾವಿರ ರೂ. ವೇತನ ನೀಡಲಾಗುತ್ತದೆ. ಅನೇಕ ಬಾರಿ ತಿಂಗಳಾನುಗಟ್ಟಲೆ ಇವರಿಗೆ ವೇತನ ಪಾವತಿಯಾಗದ ಸ್ಥಿತಿ ಇತ್ತು. ಯಡಿಯೂರಪ್ಪ ಮುಖ್ಯಮಂತ್ರಿಯಾದ್ದ ವೇಳೆ ಆನೆಗುಡ್ಡೆಗೆ ಬಂದಿದ್ದಾಗ ರಾಧಾದಾಸ್‌ ನೀಡಿದ ಮನವಿಯಂತೆ 9 ತಿಂಗಳ ವೇತನ, ಅದಕ್ಕೂ ಮುನ್ನ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ 4 ತಿಂಗಳ ವೇತನ ಏಕಗಂಟಿನಲ್ಲಿ ಬಿಡುಗಡೆ ಮಾಡಲಾಗಿತ್ತು. ಅನಂತರ ನಿಯಮಿತವಾಗಿ ವೇತನ ಪಾವತಿಯಾಗಿಲ್ಲ.

ಒನ್‌ ಸ್ಟಾಪ್‌
ಕೇಂದ್ರ ಸರಕಾರದ ಸಖೀ ಒನ್‌ ಸ್ಟಾಪ್‌ ಸೆಂಟರ್‌ ಯೋಜನೆ ಲೈಂಗಿಕ ಮತ್ತು ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ವೈದ್ಯಕೀಯ ಚಿಕಿತ್ಸೆ, ಕಾನೂನು ನೆರವು, ಸಲಹೆ ನೀಡುವ ಉದ್ದೇಶ ಹೊಂದಿದ್ದರೂ ಕರ್ನಾಟಕದಲ್ಲಿ ಅದು ಪೂರ್ಣ ಪ್ರಮಾಣದಲ್ಲಿ ಕಾರ್ಯ ಮಾಡುತ್ತಿಲ್ಲ. ಜಿಲ್ಲೆಗೆ ಕೇವಲ ಒಂದು ಕೇಂದ್ರ ಇರುವ ಕಾರಣ ಎಲ್ಲರಿಗೂ ಸುಲಭವಾಗಿ ನೆರವು ಸಿಗಲು ಸಾಧ್ಯವಾಗುತ್ತಿಲ್ಲ.

ಸ್ಥಗಿತ
ರಾಜ್ಯದಲ್ಲಿ ಈಗ ಒಟ್ಟು 119 ಕೇಂದ್ರಗಳಿದ್ದು, 2021ರಲ್ಲಿ 71 ತಾಲೂಕುಗಳ ಸಾಂತ್ವನ ಕೇಂದ್ರಗಳನ್ನು ಸ್ಥಗಿತಗೊಳಿಸಲಾ ಗಿತ್ತು. ಬಳಿಕ 59 ಸಾಂತ್ವನ ಕೇಂದ್ರಗಳನ್ನು ಮುಂದು ವರಿಸಲಾಯಿತು. ಕುಂದಾಪುರದ ಸಾಂತ್ವನ ಕೇಂದ್ರವು ಮೂಕಾಂಬಿಕಾ ಮಹಿಳಾ ಮಂಡಲಗಳ ಒಕ್ಕೂಟ, ಉಡುಪಿ ಕೇಂದ್ರವು ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟದ ಮೂಲಕ ಕಾರ್ಯಾಚರಿಸುತ್ತಿತ್ತು. 2021 ಆಗಸ್ಟ್‌ನಿಂದ ಕುಂದಾಪುರ ಕೇಂದ್ರ ಸ್ಥಗಿತವಾಗಿದ್ದು ಈಗ ಉಡುಪಿ ಕೇಂದ್ರವೂ ಇಲ್ಲ. ಕಾರ್ಕಳದಲ್ಲಿ ತಾ| ಮಹಿಳಾ ಮಂಡಲಗಳ ಒಕ್ಕೂಟ ನಡೆಸುತ್ತಿರುವ ಕೇಂದ್ರ ಇದೆ. ದ.ಕ.ದಲ್ಲಿ ಬಂಟ್ವಾಳ, ಪುತ್ತೂರು ಜನಶಿಕ್ಷಣ ಟ್ರಸ್ಟ್‌, ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟ, ಸುಳ್ಯ ದಲ್ಲಿ ಮಹಿಳಾ ಸಮಾಜ ನಡೆಸುತ್ತಿವೆ.

ಯಾಕೆ ಬೇಕು?
ಕುಂದಾಪುರದಲ್ಲಿ 8 ವರ್ಷಗಳಲ್ಲಿ 10 ಸಾವಿರದಷ್ಟು ಪ್ರಕರಣಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ. ಅಂತರ್ಜಾತಿ, ಪ್ರೇಮ ವಿವಾಹ ಎಂದು 150ಕ್ಕೂ ಹೆಚ್ಚು ಮದುವೆ ಮಾಡಿಸಲಾಗಿದೆ. 100ಕ್ಕೂ ಹೆಚ್ಚು ಶವಸಂಸ್ಕಾರ ನಡೆಸಲಾಗಿದೆ. ಪ್ರೀತಿಸಿ ಕೈ ಕೊಟ್ಟವರ ರಾಜೀ ಸಂಧಾನಗಳು ನಡೆದಿವೆ. ದೌರ್ಜನ್ಯ, ಅತ್ಯಾಚಾರ ಪ್ರಕರಣಗಳಲ್ಲಿ ನ್ಯಾಯ ದೊರಕಿಸಿಕೊಡಲಾಗಿದೆ ಎನ್ನುತ್ತಾರೆ ಈವರೆಗೆ ಕೇಂದ್ರ ನಡೆಸುತ್ತಿದ್ದ ಮೂಕಾಂಬಿಕಾ ಮಹಿಳಾ ಒಕ್ಕೂಟದ ಅಧ್ಯಕ್ಷೆ ರಾಧಾದಾಸ್‌ ಹಾಗೂ ಕಾರ್ಯದರ್ಶಿ ಜಯಂತಿ ಐತಾಳ.

ಪ್ರತೀ ಕೇಂದ್ರದಲ್ಲಿ ತಿಂಗಳಲ್ಲಿ 15-20 ಹೊಸ ಪ್ರಕರಣಗಳನ್ನು ಇತ್ಯರ್ಥಗೊಳಿಸುವುದಲ್ಲದೆ 250ರಿಂದ 300 ಕರೆಗಳ ಮೂಲಕ ನೊಂದ ಮಹಿಳೆಯರನ್ನು ಸಂತೈಸಿ ಅನ್ಯೋನ್ಯವಾಗಿ ಜೀವಿಸುವಂತೆ ಮಾಡಲಾಗುತ್ತದೆ. ಆತ್ಮಹತ್ಯೆಗೆ ಮುಂದಾದ ಹೆಣ್ಣು ಮಕ್ಕಳಲ್ಲಿ ಧೈರ್ಯ ತುಂಬಿ ದಾನಿಗಳಿಂದ ಧನಸಹಾಯದ ಮೂಲಕ ಉನ್ನತ ವಿದ್ಯಾಭ್ಯಾಸ ಕಲ್ಪಿಸಿದ, ಪತಿ ಇನ್ನೊಂದು ಮದುವೆಯಾಗಲು ಹೊರಟಾಗ ಮಕ್ಕಳೊಂದಿಗೆ ಆಶ್ರಯ ಬೇಡಿ ಬಂದಾಕೆಗೆ ನ್ಯಾಯ, ಅಸಹಾಯಕರಾಗಿ ಅಲೆಯುತ್ತಿದ್ದ ಮಹಿಳೆಯರ ರಕ್ಷಣೆ, ಚಿಕಿತ್ಸೆ ಮೊದಲಾದ ಹಲವಾರು ಘಟನೆಗಳಿವೆ. “ಸಾಂತ್ವನ’ ಪಡೆದ ಅದೆಷ್ಟೋ ಮಹಿಳೆಯರು ಕೇಂದ್ರವನ್ನು ತಮ್ಮ ಬದುಕು ರೂಪಿಸಿದ ತವರು ಮನೆ ಎಂದೇ ಭಾವಿಸುತ್ತಿದ್ದಾರೆ.

ಕುಂದಾಪುರಕ್ಕೆ ತಲ್ಲೂರು ಫ್ಯಾಮಿಲಿ ಟ್ರಸ್ಟ್‌ನವರು ಸಾಂತ್ವನ ಕೇಂದ್ರಕ್ಕಾಗಿ ಅರ್ಜಿ ಸಲ್ಲಿಸಿದ್ದು, ಕೇಂದ್ರ ಕಚೇರಿಗೆ ಕಳುಹಿಸಿಕೊಡಲಾಗಿದೆ. ಶೀಘ್ರ ಮಂಜೂರಾಗಬಹುದು.
– ಶ್ವೇತಾ ಸಂತೋಷ್‌ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಯೋಜನಾಧಿಕಾರಿ, ಕುಂದಾಪುರ

– ಲಕ್ಷ್ಮೀ ಮಚ್ಚಿನ

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.