ಮಲ್ಲಾರು ರಿಕ್ಷಾದ ಮೇಲೆ ಮರ ಬಿದ್ದ ಘಟನೆ: ಇಬ್ಬರ ಅಂತ್ಯಕ್ರಿಯೆ
Team Udayavani, May 13, 2023, 6:15 AM IST
ಕಾಪು: ಕಾಪು ಮಲ್ಲಾರು ಸ್ವಾಗತ್ ನಗರದ ಬಳಿ ಚಲಿಸುತ್ತಿದ್ದ ರಿಕ್ಷಾದ ಮೇಲೆ ಗುರುವಾರ ರಾತ್ರಿ ಬೃಹತ್ ಮರ ಬಿದ್ದು, ಮೃತಪಟ್ಟಿದ್ದ ಪ್ರಯಾಣಿಕರಾದ ಪಾದೂರು ಕೂರಾಲು ನಿವಾಸಿ ಪುಷ್ಪಾ ಕುಲಾಲ್ ಮತ್ತು ಕಳತೂರು ನಿವಾಸಿ ಕೃಷ್ಣ ಮುಖಾರಿ ಅವರ ಮೃತದೇಹಗಳನ್ನು ಉಡುಪಿ ಅಜ್ಜರಕಾಡು ಆಸ್ಪತ್ರೆಯಿಂದ ಮನೆಗೆ ತಂದು ಅಂತಿಮ ಸಂಸ್ಕಾರದ ವಿಧಿವಿಧಾನಗಳನ್ನು ನಡೆಸಲಾಯಿತು.
ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಗುರ್ಮೆ ಫೌಂಡೇಶನ್ ಅಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಮೃತರ ಮನೆಗೆ ತೆರಳಿ ಸಾಂತ್ವನ ಹೇಳಿದ್ದಾರೆ.
ಈ ಘಟನೆಗೆ ಅರಣ್ಯ ಇಲಾಖೆ ಮತ್ತು ಸ್ಥಳೀಯಾಡಳಿತದ ನಿರ್ಲಕ್ಷ್ಯವೇ ಕಾರಣವೆಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಘಟನೆಯನ್ನು ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ.
ಸರಕಾರಿ ಜಾಗದಲ್ಲಿರುವ ಅಪಾಯಕಾರಿ ಮರಗಳನ್ನು ಅರಣ್ಯ ಇಲಾಖೆ, ಸ್ಥಳೀಯಾಡಳಿತ ಸಂಸ್ಥೆಯ ಮೂಲಕ ತೆರವುಗೊಳಿಸಲು ಕ್ರಮ ವಹಿಸಲಾಗುವುದು ಎಂದು ಉಡುಪಿ ಆರ್ಎಫ್ಒ ಸುಬ್ರಹ್ಮಣ್ಯ ಆಚಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ