ಶೌಚಾಲಯ, ಬೀದಿ ದೀಪಕ್ಕೆ ಉದ್ಘಾಟನೆ ಭಾಗ್ಯವಿಲ್ಲ

ಮಲ್ಪೆ 3ನೇ ಹಂತದ ಮೀನುಗಾರಿಕೆ ಬಂದರು ಪ್ರದೇಶ

Team Udayavani, Jan 26, 2020, 5:02 AM IST

rtas-21

ಮಲ್ಪೆ: ಮಲ್ಪೆ ಮೀನುಗಾರಿಕೆ ಮೂರನೇ ಹಂತದ ಬಂದರಿನ ಬಾಪುತೋಟದ ಭಾಗದ ಬಂದರಿನ ರಸ್ತೆ ಬದಿಯಲ್ಲಿ ದಾರಿದೀಪ ಅಳವಡಿಸಿ ವರ್ಷ ನಾಲ್ಕು ಕಳೆದರೂ ಇನ್ನೂ ವಿದ್ಯುತ್‌ ಸಂಪರ್ಕವನ್ನು ನೀಡದ ಪರಿಣಾಮ ರಾತ್ರಿ ಹಾಗೂ ನಸುಕಿನ ವೇಳೆ ಮೀನುಗಾರಿಕೆ ಚಟುವಟಿಕೆಗಳನ್ನು ನಡೆಸಲು ಮೀನುಗಾರರು ತೊಂದರೆ ಅನುಭವಿಸುವಂತಾಗಿದೆ. ಮಾತ್ರವಲ್ಲದೆ ಕೋಟ್ಯಂತರ ರೂಪಾಯಿ ಮೌಲ್ಯದ ಬೋಟುಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಇಲ್ಲಿನ ದಾರಿದೀಪಗಳು ನಾಮ್‌ಕೆವಾಸ್ತೆಗೆ ಇದ್ದಂತಿದೆ. ವಿದ್ಯುತ್‌ ಸಂಪರ್ಕ ಇಲ್ಲದೆ ಜನ ಸಾಮಾನ್ಯರಿಗೆ ಪ್ರಯೋಜನ ಇಲ್ಲದಂತಾಗಿದೆ.

ಅಪಾಯಕ್ಕೆ ಆಹ್ವಾನ
ಬಾಪುತೋಟದ ಬಳಿ ಇರುವ ಸ್ಲಿಪ್‌ವೇಯಿಂದ ಹಿಡಿದು ಸೇತುವೆ ಸಂಪರ್ಕದವರೆಗೆ ಸುಮಾರು 32ಮೆಟಲ್‌ ಲೈಟ್‌, ಸ್ಲಿಪ್‌ವೇ ಬಳಿ ಒಂದು ಹೈಮಾಸ್ಟ್‌ ದೀಪವನ್ನು ಅಳವಡಿಸಲಾಗಿದೆ. ದೀಪಗಳು ಉರಿಯದ ಕಾರಣ ರಾತ್ರಿ ವೇಳೆ ಮೀನುಗಾರಿಕೆ ಬೋಟನ್ನು ದಕ್ಕೆಯಲ್ಲಿ ಲಂಗರು ಹಾಕಲು ಅಥವಾ ತೆರವುಗೊಳಿಸಲು ಮೀನುಗಾರರಿಗೆ ತೊಂದರೆಯಾಗುತ್ತಿದೆ. ಮಾತ್ರವಲ್ಲದೆ ಕತ್ತಲಲ್ಲಿ ದಕ್ಕೆಯಲ್ಲಿ ನಡೆದಾಡುವುದು ಕಷ್ಟ. ಆಯ ತಪ್ಪಿದರೆ ಹೊಳೆಗೆ ಬೀಳುವುದು ನಿಶ್ಚಿತ. ವಾಹನ ಸವಾರರೂ ಅಪಾಯವನ್ನು ಎದುರಿಸುವಂತಾಗಿದೆ..

ಉದ್ಘಾಟನೆಗೊಳ್ಳದ ಶೌಚಾಲಯ
3ನೇ ಹಂತದ ಯೋಜನೆಯಲ್ಲಿ ಮೀನುಗಾರರಿಗಾಗಿ ಸಾರ್ವಜನಿಕ ಶೌಚಾಲಯವನ್ನು ನಿರ್ಮಿಸಲಾಗಿತ್ತು. ಕಾಮಗಾರಿ ಪೂರ್ಣಗೊಂಡಿದ್ದರೂ ಉಪಯೋಗಕ್ಕೆ ನೀಡದಿದ್ದುದರಿಂದ ಪಾಳು ಬಿದ್ದಂತಾಗಿದೆ.
ರಾತ್ರಿ ವೇಳೆ ಮೀನುಗಾರ ಕಾರ್ಮಿಕರು ಸಿಕ್ಕಸಿಕ್ಕಲ್ಲಿ ಮಲಮೂತ್ರ ಮಾಡಲು ಕುಳಿತುಕೊಳ್ಳುತ್ತಾರೆ. ಪಾಳುಬಿದ್ದ ಶೌಚಾಲಯ ಸುತ್ತಮುತ್ತ ಗಿಡಗಂಟಿಗಳು ಬೆಳೆದು ಕಟ್ಟಡ ಬಣ್ಣ ಕಳೆದುಕೊಂಡಿದೆ.

ಪಡುಕರೆಗೂ ಪ್ರಮುಖ ರಸ್ತೆ
ಪಡುಕರೆ ಭಾಗವನ್ನು ಸಂಪರ್ಕಿಸುವ ಪ್ರಮುಖ ರಸ್ತೆಯೂ ಇದಾಗಿದ್ದು ರಾತ್ರಿ ಮತ್ತು ನಸುಕಿನ ವೇಳೆ ಮೀನುಗಾರಿಕೆ ಕೆಲಸಕ್ಕೆ ಬರುವ ಮಹಿಳೆಯರು ಬೀದಿ ದೀಪವಿಲ್ಲದೆ ಭಯದ ವಾತಾವರಣದಲ್ಲಿ ನಡೆದುಕೊಂಡು ಬರುವ ಪರಿಸ್ಥಿತಿ ಇದೆ. ವಾಹನ ಸವಾರರೂ ಇಲ್ಲಿ ತೀವ್ರ ತೊಂದರೆಯನ್ನು ಅನುಭವಿಸುವಂತಾಗಿದೆ. ಈ ಬಗ್ಗೆ ಗಮನಹರಿಸಿ ಸಮಸ್ಯೆಯನ್ನು ತತ್‌ಕ್ಷಣ ಬಗೆಹರಿಸುವಂತೆ ನಾಗರಿಕರು ಆಗ್ರಹಿಸಿದ್ದಾರೆ.

ಕ್ರಮ ಕೈಗೊಳ್ಳಲಿ
ಬಂದರಿನಲ್ಲಿ ಸುಮಾರು 400 ಬೋಟುಗಳನ್ನು ನಿಲ್ಲಿಸಲಾಗಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಸೊತ್ತುಗಳಿವೆ. ಕತ್ತಲಾದ್ದರಿಂದ ಕಳ್ಳರಿಗೆ ಬೋಟಿನ ಬಿಡಿ ಭಾಗಗಳನ್ನು ಕದ್ದೊಯ್ಯಲು ಅನುಕೂಲ ಮಾಡಿಕೊಟ್ಟಂತಾಗಿದೆ. ಸಂಬಂಧಪಟ್ಟ ಇಲಾಖೆ ಸಮಸ್ಯೆ ಪರಿಹಾರಕ್ಕೆ ಕ್ರಮ ತೆಗೆದುಕೊಳ್ಳಬೇಕು.
– ಶೇಖರ್‌ ಜಿ. ಕೋಟ್ಯಾನ್‌, ಬೋಟ್‌ ಮಾಲಕರು

ದಾರಿದೀಪ ಅಗತ್ಯ
ಪಡುಕರೆ ಭಾಗದಿಂದ ಮಲ್ಪೆಗೆ ಮೀನಿನ ಕೆಲಸಕ್ಕೆ ಪ್ರತಿನಿತ್ಯ ಸಾವಿರಾರು ಮಹಿಳೆಯರು ಮುಂಜಾವ 4ಗಂಟೆಗೆ ನಡೆದುಕೊಂಡು ಬರುತ್ತಾರೆ. ದಾರಿದೀಪ ಇಲ್ಲದ್ದರಿಂದ ಭಯದಿಂದಲೇ ನಡೆದಾಡುವಂತಾಗಿದೆ.
– ಬೂದ ಪೂಜಾರಿ, ಸ್ಥಳೀಯರು

ಕೆಲಸ ಬಾಕಿ ಇದೆ
ಎಲೆಕ್ಟ್ರಿಕಲ್‌ ವರ್ಕ್‌ ಮಾತ್ರ ಈಗಷ್ಟೇ ಹಸ್ತಾಂತರ ಆಗಿದೆ. ಉಳಿದವು ಆಗಿಲ್ಲ. ಪ್ರಸ್ತುತ ವಿದ್ಯುತ್‌ ಬಿಲ್‌ ಬಾಕಿ ಇದೆ ಅದನ್ನು ಇಲಾಖೆ ಪಾವತಿ ಮಾಡುತ್ತಿದೆ. ಕಾಂಟ್ರಾಕ್ಟ್ ವಹಿಸಿಕೊಂಡವರು ಶೌಚಾಲಯ ಕಟ್ಟಿದ್ದಾರೆ ಆದರೆ ನೀರಿನ ವ್ಯವಸ್ಥೆ ಮಾಡಿಲ್ಲ. ಓವರ್‌ ಹೆಡ್‌ ಟ್ಯಾಂಕ್‌ ಮಾಡಿ ಟ್ಯಾಪ್‌ ಮೂಲಕ ನೀರಿನ ಸರಬರಾಜಿನ ವ್ಯವಸ್ಥೆ ಕೆಲಸ ಆಗಬೇಕಾಗಿದೆ..
– ಗಣೇಶ್‌ ಕೆ., ಉಪ ನಿರ್ದೇಶಕರು, ಮೀನುಗಾರಿಕೆ ಇಲಾಖೆ

ನಟರಾಜ ಮಲ್ಪೆ

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.