ಮಲ್ಪೆ; ಲಂಗರು ಹಾಕಿದ ಬೋಟ್‌ಗಳಿಗೆ ಸುರಕ್ಷೆಯೇ ಇಲ್ಲ


Team Udayavani, Feb 20, 2024, 4:15 PM IST

ಮಲ್ಪೆ; ಲಂಗರು ಹಾಕಿದ ಬೋಟ್‌ಗಳಿಗೆ ಸುರಕ್ಷೆಯೇ ಇಲ್ಲ

ಮಲ್ಪೆ: ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಮೀನು ಖಾಲಿ ಮಾಡುವ ಮತ್ತು ಲಂಗರು ಹಾಕುವ ಸಮಯದಲ್ಲಿ ಬೋಟ್‌ಗಳನ್ನು ಹಗ್ಗದ ಸಹಾಯ ದಿಂದ ಕಟ್ಟಲು ಜೆಟ್ಟಿಯಲ್ಲಿ ಅಳವಡಿಸಲಾದ ಗೂಟಗಳು (ಬೊಲಾರ್ಡ್‌) ಹಾನಿಗೊಂಡು ಹಲವಾರು ವರ್ಷಗಳೇ ಕಳೆದರೂ ಇದುವರೆಗೂ ಯಾವುದೇ ಪರ್ಯಾಯ ವ್ಯವಸ್ಥೆಯನ್ನು ಕಂಡಿಲ್ಲ.

ಬಂದರಿನ 1 ಮತ್ತು 2ನೇ ಹಂತದ ಜೆಟ್ಟಿ ಹಾಗೂ ಪಶ್ಚಿಮ ದಿಕ್ಕಿನಲ್ಲಿರುವ ಜೆಟ್ಟಿಯಲ್ಲಿ ಸೇರಿದಂತೆ ಸುಮಾರು 50 ಗೂಟಗಳು ಹಾನಿಗೊಂಡಿವೆ. ಇದರಿಂದಾಗಿ ಮೀನುಗಾರರು ಬೋಟ್‌ಗಳನ್ನು ಜೆಟ್ಟಿಯಲ್ಲಿ ಸುರಕ್ಷಿತವಾಗಿ ಇಡಲು ಸಂಕಷ್ಟ ಪಡುತ್ತಿದ್ದಾರೆ.

ಮೊದಲ ಮತ್ತು ಎರಡನೆಯ ಹಂತದ ಜೆಟ್ಟಿ ನಿರ್ಮಾಣವಾಗಿ ಸುಮಾರು 45 ವರ್ಷ ಕಳೆದಿದ್ದು ಆ ವೇಳೆ ಇಲ್ಲಿ ಬೋಟನ್ನು ಕಟ್ಟಲು ಗೂಟವನ್ನು ನಿರ್ಮಿಸಲಾಗಿತ್ತು. ಪಶ್ಚಿಮ ಬದಿಯಲ್ಲಿರುವ ಜೆಟ್ಟಿಯನ್ನು ಆ ಬಳಿಕ ನಿರ್ಮಾಣ ಮಾಡಲಾಗಿತ್ತು. ಇದೀಗ ಎರಡೂ ಬದಿಯ ಜೆಟ್ಟಿಯ ಸ್ಲ್ಯಾಬ್‌ಗಳು ಹಾನಿಗೊಂಡು ಗೂಟಗಳು ಕಳಚಿ ಹೋಗಿದ್ದರೆ ಇನ್ನು ಕೆಲವೆಡೆ ಗೂಟಗಳು ಸಂಪೂರ್ಣ ಹಾನಿಕೊಂಡಿದೆ.

ಸಮುದ್ರ ಪಾಲಾಗುವ ಭೀತಿ 
ಮಲ್ಪೆ ಬಂದರಿನಲ್ಲಿ ಸುಮಾರು 2500 ಬೋಟ್‌ಗಳಿದ್ದು ಇಲ್ಲಿ ಲಂಗರು ಹಾಕುವುದೇ ದೊಡ್ಡ ಸಮಸ್ಯೆಯಾಗಿದೆ. ಒಂದೊಂದು
ಗೂಟದಲ್ಲಿ 20ರಿಂದ 25 ಬೋಟ್‌ಗಳನ್ನು ಹಗ್ಗದಿಂದ ಕಟ್ಟಲಾಗುತ್ತಿದೆ. ಇದೀಗ ಇಲ್ಲಿ ಬೋಟ್‌ಗಳಿಗೆ ಸುರಕ್ಷೆ ಇಲ್ಲದೆ ಸಮುದ್ರದ ಉಬ್ಬರ ವೇಳೆ ಬೋಟ್‌ಗಳು ಯಾವುದೇ ಆಧಾರ ಇಲ್ಲದೆ ಹಿಂದಕ್ಕೆ ಚಲಿಸಿ ಸಮುದ್ರ ಪಾಲಾಗುವ ಮೂಲಕ ಅವಘಡಕ್ಕೆ ಕಾರಣವಾಗುತ್ತಿದೆ.

ಮಲ್ಪೆ ಬಂದರಿನಲ್ಲಿ ಈಗಾಗಲೇ ಇಂತಹ ಪ್ರಕರಣಗಳು ಸಾಕಷ್ಟು ನಡೆದಿದೆ. ಗೂಟ ಸಿಗದ ಹೆಚ್ಚಿನ ಬೋಟ್‌ಗಳು ಮತ್ತೂಂದು ಬೋಟ್‌ಗೆ ಆಧಾರವಾಗಿ ಹಗ್ಗವನ್ನು ಕಟ್ಟಿ ಲಂಗರು ಹಾಕಿದರೂ ಆ ಬೋಟಿಗೆ ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯ ಇಲ್ಲದೆ ಒಂದಕ್ಕೊಂದು ತಾಗಿ ಸಾಕಷ್ಟು ಹಾನಿಗೊಳಗಾಗುತ್ತಿದೆ ಎನ್ನುತ್ತಾರೆ ಮಲ್ಪೆ ಕನ್ನಿ ಮೀನುಗಾರ ಸಂಘದ ಅಧ್ಯಕ್ಷ ದಯಾಕರ ವಿ. ಸುವರ್ಣ ಅವರು.

ತಿಂಗಳೊಳಗೆ ಕಾಮಗಾರಿ ಆರಂಭ
ರಾಜ್ಯ ಮೀನುಗಾರಿಕೆ ಸಚಿವ ಮಾಂಕಾಳ ವೈದ್ಯ ಅವರು ಮಲ್ಪೆ ಬಂದರಿಗೆ ಭೇಟಿ ನೀಡಿ ಬಂದರು ಪರಿಶೀಲನೆ ನಡೆಸಿದ್ದಾರೆ. ಬಂದರಿನ ಕೆಲವೊಂದು ಸಮಸ್ಯೆಗಳನ್ನು ಪರಿಹರಿಸುವಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬಂದರು ಮತ್ತು ಮೀನುಗಾರಿಕೆ ಇಲಾಖೆ ಈಗಾಗಲೇ ಬಂದರು ಪರಿಶೀಲನೆ ನಡೆಸಿ ಜೆಟ್ಟಿಯಲ್ಲಿ ಎಲ್ಲೆಲ್ಲಿ ಬೊಲಾರ್ಡ್‌ ಗಳು ಹಾನಿಯಾಗಿದೆ ಅದೆಲ್ಲವನ್ನು ಗುರುತಿಸಿ ಅಂದಾಜು ಪಟ್ಟಿಯನ್ನು ತಯಾರಿಸಿ, ಬಂದರು ಮತ್ತು ಮೀನುಗಾರಿಕೆ ಇಲಾಖೆಯ ಕಾರ್ಯ ನಿರ್ವಾಹಕರಿಗೆ ಸಲ್ಲಿಸಲಾಗಿದೆ. ಸರಕಾರದಿಂದ ಅನುದಾನ ಬಿಡುಗಡೆಯಾದ ತತ್‌ಕ್ಷಣ ಕಾಮಗಾರಿಯನ್ನು ಆರಂಭಿಸಲಾಗುವುದು, ಈ ಬಗ್ಗೆ ಪ್ರಕ್ರಿಯೆಗಳು
ನಡೆಯುತ್ತಿದ್ದು ತಿಂಗಳೊಳಗೆ ಕಾಮಗಾರಿ ಆರಂಭಗೊಳ್ಳಲಿದೆ ಈ ಬಗ್ಗೆ ಎಲ್ಲ ಪ್ರಯತ್ನ ಮಾಡಲಾಗುತ್ತಿದೆ ಎಂದು ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಅಧಿಕಾರಿಗಳಿಗೆ ಮನವಿ
ಬೋಟ್‌ ಕಟ್ಟುವ ಗೂಟಗಳು ಹಾನಿಗೊಂಡು ಬೋಟ್‌ ಮಾಲಕರಿಗೆ ಬಹಳ ಸಮಸ್ಯೆಯಾಗಿದೆ. ಈಗಾಗಲೇ ಮೀನುಗಾರಿಕೆ ಅಧಿಕಾರಿಗಳಿಗೂ ಮನವಿ ಮಾಡಲಾಗಿದೆ. ಕಳೆದ ವಾರ ಮೀನುಗಾರಿಕ ಸಚಿವರು ಬಂದರಿಗೆ ಬಂದ ವೇಳೆ ಅವರ ಗಮನಕ್ಕೂ ತರಲಾಗಿದ್ದು ತತ್‌ಕ್ಷಣ ಸ್ಪಂದಿಸುವ ಭರವಸೆಯನ್ನು ನೀಡಿದ್ದಾರೆ.
-ದಯಾನಂದ ಕೆ. ಸುವರ್ಣ, ಅಧ್ಯಕ್ಷರು,
ಮೀನುಗಾರರ ಸಂಘ

*ನಟರಾಜ್‌ ಮಲ್ಪೆ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.