ಪ್ರವಾಸಿಗರಿಗೆ ಮಲ್ಪೆ  ಬೀಚ್‌ ಮುಕ್ತ : ವಾಟರ್‌ ಸ್ಪೋರ್ಟ್ಸ್ ಆರಂಭ


Team Udayavani, Sep 21, 2021, 7:50 AM IST

Untitled-1

ಮಲ್ಪೆ:  ಆಕರ್ಷಣೀಯ ವಿಹಾರ ತಾಣ ಮಲ್ಪೆ ಬೀಚ್‌ ಇದೀಗ ಪ್ರವಾಸಿಗರಿಗೆ ತೆರೆದುಕೊಂಡಿದೆ. ಮಳೆಗಾಲದಲ್ಲಿ ಸಮುದ್ರಕ್ಕೆ ಇಳಿಯದಂತೆ ಹಾಕಲಾಗಿದ್ದ ತಡೆಬೇಲಿಯನ್ನು ರವಿವಾರ ತೆರವುಗೊಳಿಸಲಾಗಿದೆ.

ಮುನ್ನೆಚ್ಚರಿಕೆ ಕ್ರಮ:

ಸಾಮಾನ್ಯವಾಗಿ ಮಳೆಗಾಲದಲ್ಲಿ ಕಡಲಬ್ಬರ ಹೆಚ್ಚಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರು ನೀರಿಗೆ ಇಳಿಯದಂತೆ ಪ್ರತೀ ವರ್ಷ ಮಳೆಗಾಲದಲ್ಲಿ ಬೀಚ್‌ನ ಉದ್ದಕ್ಕೂ ರಿಫ್ಲೆಕ್ಟೆಡ್‌ ಪಟ್ಟಿ ಮತ್ತು ಫಿಶ್‌ನೆಟ್‌ ತಡೆಬೇಲಿಯನ್ನು ಕಟ್ಟಿ ಮುನ್ನೆಚ್ಚರಿಕೆ ವಹಿಸಲಾಗುತ್ತದೆ.  ಅಲ್ಲಲ್ಲಿ ಎಚ್ಚರಿಕೆ ಫಲಕಗಳನ್ನೂ ಅಳವಡಿಸಲಾಗುತ್ತದೆ. ಅದಾಗಿಯೂ ನಿಯಮ ಉಲ್ಲಂಘಿಸಿ ನೀರಿಗಿಳಿದವರಿಗೆ ದಂಡವನ್ನು ವಿಧಿಸಲಾಗುತ್ತಿತ್ತು. ಇದೀಗ ಬೀಚ್‌ ಬಯಲು ರಂಗ ಮಂದಿರದ ನೇರ ಸಮುದ್ರಕ್ಕಿಳಿಯುವಲ್ಲಿ ಅಪಾ ಕಾರಿ ಸುಳಿಗಳಿರುವುದರಿಂದ ಆ ಪ್ರದೇಶವ‌ನ್ನು ಹೊರತುಪಡಿಸಿ ಉಳಿದೆಲ್ಲಡೆ ತಡೆಬೇಲಿಯನ್ನು ತೆರವು ಮಾಡಲಾಗಿದೆ.

ಪ್ರವಾಸಿಗರ ಕಲರವ:

ರಾಜ್ಯಾದ್ಯಂತ ಅನ್‌ಲಾಕ್‌ ಆದ ಬೆನ್ನಲ್ಲೆ ಕರಾವಳಿಯ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಚೌತಿ ಹಬ್ಬದ ಬಳಿಕ ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಂದ ಸಾವಿರಾರು  ಪ್ರವಾಸಿಗರು ಅಗಮಿಸುತ್ತಿದ್ದಾರೆ. ವೀಕೆಂಡ್‌ಗಳಲ್ಲಿ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು, ಸಂಜೆ ವೇಳೆಗೆ ಸ್ಥಳೀಯರು ವಿಹಾರಕ್ಕೆ ಬರುವುದರಿಂದ ಜನಸಂದಣಿ ಹೆಚ್ಚಾಗುವುದರೊಂದಿಗೆ ಪಾರ್ಕಿಂಗ್‌ ಏರಿಯಾಗಳಲ್ಲಿ ವಾಹನ ನಿಲುಗಡೆಗೆ ಜಾಗದ ಸಮಸ್ಯೆ ಉಂಟಾಗುತ್ತಿದೆ.

ವಾರದೊಳಗೆ ಎಲ್ಲ  ಸಾಹಸ ಕ್ರೀಡೆಗಳು ಆರಂಭ :

ಲಾಕ್‌ಡೌನ್‌ನಿಂದಾಗಿ ಮಳೆಗಾಲಕ್ಕೆ ಮೊದಲೇ ಸ್ಥಗಿತಗೊಂಡಿದ್ದ ಬೀಚ್‌ ವಾಟರ್‌ ನ್ಪೋರ್ಟ್ಸ್ ರವಿವಾರದಿಂದ ಮತ್ತೆ ಆರಂಭಗೊಂಡಿದೆ. ಪ್ಯಾರಾ ಸೈಲಿಂಗ್‌, ಬನಾನಾ ರ್ಯಾಪ್ಟಿಂಗ್‌, ಬಂಪಿ ರೈಡ್‌, ಝೋರ್ಬಿಂಗ್‌, ಪವರ್‌ ಬೈಕ್‌, ಕ್ರಿಕೆಟ್‌, ಶೂಟಿಂಗ್‌, ಗಾಳಿಪಟ ಮೊದಲಾದವುಗಳೂ ಆರಂಭಗೊಂಡಿದೆ. ಉಳಿದ ಸಾಹಸ ಕ್ರೀಡೆಗಳು ಒಂದು ವಾರದಲ್ಲಿ ಪೂರ್ಣ ಪ್ರಮಾಣದಲ್ಲಿ ಆರಂಭಗೊಳ್ಳಲಿದೆ ಎನ್ನಲಾಗಿದೆ.

ಸ್ವಚ್ಛತ ಕಾರ್ಯ :

ಸುರಕ್ಷತೆಯ ಹಿನ್ನೆಲೆಯಲ್ಲಿ ಈಗಾಗಲೇ ನಾಲ್ವರು ಜೀವರಕ್ಷಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಬೀಚ್‌ನ ಮುಖ್ಯ ಭಾಗದ ಸ್ವಚ್ಛತ ಕಾರ್ಯ ನಡೆಸಲಾಗಿದೆ. ಉತ್ತರ ಮತ್ತು ದಕ್ಷಿಣ ಭಾಗದಲ್ಲಿ ಕ್ಲೀನಿಂಗ್‌ ಮಾಡಲಾಗುತ್ತಿದೆ. ಕೆಲವೊಂದು ದೀಪಗಳು ಕೆಟ್ಟು ಹೋಗಿದ್ದು ಅದನ್ನು ದುರಸ್ತಿಗೊಳಿಸಲಾಗುತ್ತದೆ. ಒಟ್ಟಿನಲ್ಲಿ ಅಕ್ಟೋಬರ್‌ 1ರಿಂದ ಬೀಚ್‌ ಪೂರ್ಣ ಪ್ರಮಾಣದಲ್ಲಿ ತೆರೆದುಕೊಳ್ಳಲಿದೆ.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.