ವಾರಾಂತ್ಯದ ಹಿನ್ನೆಲೆ: ಮಲ್ಪೆ ಬೀಚ್‌; ಮಳೆ ಇದ್ದರೂ ಜನಜಂಗುಳಿ


Team Udayavani, Jun 13, 2022, 12:17 AM IST

ವಾರಾಂತ್ಯದ ಹಿನ್ನೆಲೆ: ಮಲ್ಪೆ ಬೀಚ್‌; ಮಳೆ ಇದ್ದರೂ ಜನಜಂಗುಳಿ

ಮಲ್ಪೆ : ವಾರಾಂತ್ಯದ ಹಿನ್ನೆಲೆಯಲ್ಲಿ ರವಿವಾರ ಮಧ್ಯಾಹ್ನದ ಬಳಿಕ ಮಳೆ ಬಂದರೂ ಮಲ್ಪೆ ಬೀಚ್‌ಗೆ ಪ್ರವಾಸಿಗರು ಆಗಮಿಸುತ್ತಿರುವುದು ಕಂಡು ಬಂದಿದೆ.

ಹೊರ ಜಿಲ್ಲೆಯ, ಹೆಚ್ಚಾಗಿ ಉತ್ತರ ಕರ್ನಾಟಕದ ಪ್ರವಾಸಿಗರು ಸೇರಿದಂತೆ ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದರು. ಬೀಚ್‌ಗೆ ಶನಿವಾರ ಮತ್ತು ರವಿವಾರ ಬೆಳಗ್ಗಿನಿಂದ ಪ್ರವಾಸಿಗರ ದಂಡೇ ಹರಿದು ಬಂದಿತ್ತು. ಪಾರ್ಕಿಂಗ್‌ ಏರಿಯಾ ಮತ್ತು ರಸ್ತೆ ಬದಿಯಲ್ಲಿ ವಾಹನಗಳ ಸಾಲು ಕಂಡು ಬಂದಿದೆ. ಮುಖ್ಯ ಬೀಚ್‌ನಲ್ಲಿ ಒಂದು ಕಿ.ಮೀ ಉದ್ದಕ್ಕೆ ನೆಟ್‌ ಅಳವಡಿಸಲಾಗಿದ್ದು, ಆಗಮಿಸಿದ ಜನರು ದೂರದಲ್ಲೇ ನಿಂತು ಸಮುದ್ರವನ್ನು ವೀಕ್ಷಿಸಿದರು. ಮಳೆಗಾಲದಲ್ಲಿ ಸಮುದ್ರ ಪ್ರಕ್ಷುಬ್ಧ ವಾಗಿರುವ ಹಿನ್ನೆಲೆ ಯಲ್ಲಿ ಪ್ರವಾಸಿಗರು ನೀರಿಗಿಳಿಯ ದಂತೆ 6 ಅಡಿ ಎತ್ತರಕ್ಕೆ ನೆಟ್‌ ಅಳ ವಡಿಸಲಾಗಿದೆ.

ನೀರಿಗಿಳಿದ ಪ್ರವಾಸಿಗರು
ಬೀಚ್‌ನ ಉತ್ತರ ಮತ್ತು ದಕ್ಷಿಣ ಭಾಗದಲ್ಲಿ ಪ್ರವಾಸಿಗರು ಜೀವ ರಕ್ಷಕರ ಕಣ್ಣು ತಪ್ಪಿಸಿ ನೀರಿಗಿಳಿದು ಆಟವಾಡುತ್ತಿರುವುದು ಕಂಡು ಬಂದಿದೆ. ಮುಖ್ಯ ಬೀಚ್‌ನಲ್ಲಿ ನೆಟ್‌ ಅಳ ವಡಿಸಿದೆ ಎಂದು ಹೆಚ್ಚಿನ ಪ್ರವಾಸಿ  ಗರು ಉತ್ತರ ದಿಕ್ಕು ತೊಟ್ಟಂ ಫ‌ುರ್ಟಾಡೋ ಗೆಸ್ಟ್‌ ಹೌಸ್‌ ಸಮೀಪ ಹಾಗೂ ದಕ್ಷಿಣ ಭಾಗದ ಕೊಳ ಹನುಮಾನ್‌ ನಗರದ ಸಮುದ್ರ ತೀರದಲ್ಲಿ ನೀರಿಗಿಳಿದು ಆಟವಾಡುತ್ತಿದ್ದರು. ಜೀವ ರಕ್ಷಕರು ನೀರಿಗಿಳಿದವರನ್ನು ಓಡಿಸುತ್ತಿದ್ದರೂ ಅವರು ಕ್ಯಾರೇ ಎನ್ನದೆ ಮತ್ತೊಂದು ಕಡೆಯಲ್ಲಿ ಪ್ರತ್ಯಕ್ಷ ವಾಗು ತ್ತಿದ್ದರು. ಪೊಲೀಸರ ಮಾತನ್ನು ಕೂಡ ಕೇಳುತ್ತಿರಲಿಲ್ಲ. ರವಿವಾರ ಬೆಳಗ್ಗಿನಿಂದ ಇಲ್ಲಿನ ಜೀವರಕ್ಷಕ ಸಿಬಂದಿಗೆ ಪ್ರವಾಸಿಗರನ್ನು ನೀರಿಗಿಳಿಯದಂತೆ ತಡೆಯುವುದೇ ಬಹುದೊಡ್ಡ ಸಾಹಸ ವಾಗಿತ್ತು.

ಬೀಚ್‌ನಲ್ಲಿ ಈಗ ಯಾವುದೇ ವಾಟರ್‌ ಸ್ಪೋರ್ಟ್ಸ್ ಇಲ್ಲ. ದೂರ ದಿಂದ ಬಂದ ಪ್ರವಾಸಿಗರು ಎಷ್ಟೇ ಎಚ್ಚರಿಕೆ ನೀಡಿದರೂ ಬೇರೆ ಭಾಗದಲ್ಲಿ ನೀರಿಗೆ ಇಳಿದು ಅಪಾಯವನ್ನು ತಂದುಕೊಳ್ಳುತ್ತಾರೆ. ಪ್ರಸ್ತುತ ಸಮುದ್ರದ ಅಲೆಗಳ ಅಬ್ಬರವೂ ಜೋರಾಗಿದೆ ಎಂದು ಬೀಚ್‌ ನಿರ್ವಾಹಕರಾದ ಸುದೇಶ್‌ ಶೆಟ್ಟಿ ತಿಳಿಸಿದ್ದಾರೆ.

ಸೀವಾಕ್‌ನಲ್ಲೂ ಜನ ಮಲ್ಪೆ ಸೀವಾಕ್‌ನಲ್ಲೂ ಜನ ಸಂದಣಿ ಕಂಡು ಬಂದಿದೆ. ಮಳೆ ಇದ್ದರೂ ಇಲ್ಲಿನ ಉದ್ಯಾನವನದಲ್ಲೂ ಜನರು ವಿಹರಿಸುತ್ತಿದ್ದರು.

ಟಾಪ್ ನ್ಯೂಸ್

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.