ಮಲ್ಪೆ ಬೀಚ್: ಸಮುದ್ರದಲ್ಲಿ ಮುಳುಗಿ ಓರ್ವ ಸಾವು, ನಾಲ್ವರ ರಕ್ಷಣೆ
Team Udayavani, Mar 20, 2019, 1:00 AM IST
ಮಲ್ಪೆ: ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ನಾಲ್ವರು ಪ್ರವಾಸಿಗರನ್ನು ಇಲ್ಲಿನ ಜೀವ ರಕ್ಷಕ ತಂಡದವರು ರಕ್ಷಿಸಿ ದಡಸೇರಿದ್ದು ಅವರಲ್ಲಿ ಓರ್ವ ಸಾವನ್ನಪ್ಪಿರುವ ಘಟನೆ ಮಂಗಳವಾರ ಮಲ್ಪೆ ಬೀಚ್ಸಮೀಪ ನಡೆದಿದೆ. ಬೆಂಗಳೂರು ಮೂಲದ ಕೀರ್ತನ್ ಸಿಂಹ (22) ಮೃತಪಟ್ಟವರು.
ಬೆಂಗಳೂರಿನಿಂದ ಒಟ್ಟು 30 ಮಂದಿ ಬಸ್ಸಿನಲ್ಲಿ ಪ್ರವಾಸಕ್ಕೆಂದು ಬಂದಿದ್ದರು. ಮಂಗಳವಾರ ಬೆಳಗ್ಗೆ ಉಡುಪಿ ಶ್ರೀಕೃಷ್ಣ ಮಠಕ್ಕೆ ತೆರಳಿ ಅಲ್ಲಿಂದ ಮಧ್ಯಾಹ್ನ 12ರ ವೇಳೆ ಮಲ್ಪೆ ಬೀಚ್ಗೆ ಬಂದಿದ್ದರು. ಬೀಚ್ನ ಉತ್ತರ ಭಾಗದ ತಡೆಗೋಡೆಗೆ ಕಲ್ಲು ಹಾಕಿರುವ ಸಮೀಪ ಎಲ್ಲರೂ ಸ್ನಾನ ಮಾಡಲು ನೀರಿಗಿಳಿದಿದ್ದರು. ಇವರಲ್ಲಿ ನಾಲ್ವರು ಈಜುತ್ತಾ ಮುಂದೆ ಮುಂದೆ ಹೋಗಿ ನೀರಿನ ಸೆಳೆತಕ್ಕೆ ಕೊಚ್ಚಿ ಹೋದರು. ಸಮೀಪದಲ್ಲಿದ ಜೀವ ರಕ್ಷಕ ತಂಡದವರು ಧಾವಿಸಿ ಬಂದು ನಾಲ್ವರನ್ನು ರಕ್ಷಿಸಿ, 108ರ ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸೇರಿಸಿದ್ದಾರೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು