ಮಲ್ಪೆ ಬೀಚ್: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ
Team Udayavani, Sep 11, 2022, 7:17 PM IST
ಸಾಂದರ್ಭಿಕ ಚಿತ್ರ.
ಮಲ್ಪೆ: ಈಜಾಡಲು ಹೋಗಿ ಸಮುದ್ರಪಾಲಾಗುತ್ತಿದ್ದ ಇಬ್ಬರು ಪ್ರವಾಸಿಗರನ್ನು ಜೀವ ರಕ್ಷಕ ತಂಡದವರು ರಕ್ಷಿಸಿದ ಘಟನೆ ರವಿವಾರ ಸಂಜೆ 5 ಗಂಟೆಗೆ ಮಲ್ಪೆ ಬೀಚ್ನಲ್ಲಿ ನಡೆದಿದೆ.
ಸಕಲೇಶಪುರದ ಕಾರು ಚಾಲಕರಾದ ಅವಿನಾಶ್ (26) ಮತ್ತು ಸಾಗರ್ (27) ಅವರು ಮುಖ್ಯ ಬೀಚ್ನಿಂದ ತುಸು ದೂರದಲ್ಲಿರುವ ಶಿವಪಂಚಾಕ್ಷರಿ ಭಜನ ಮಂದಿರದ ಎದುರು ನೀರಿಗಿಳಿದು ಈಜಾಡ ತೊಡಗಿದ್ದರು. ಅಬ್ಬರದ ಅಲೆಗಳು ಅವರಿಬ್ಬರನ್ನು ಕೊಚ್ಚಿಕೊಂಡು ಹೋದವು. ತತ್ಕ್ಷಣ ಬೀಚ್ನ ಜೀವರಕ್ಷಕರು ಧಾವಿಸಿ ಬಂದು ಮುಳುಗುತ್ತಿದ್ದ ಇಬ್ಬರನ್ನೂ ರಕ್ಷಿಸಿದರು.ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಶಿವಪಂಚಾಕ್ಷರಿ ಭಜನ ಮಂದಿರದ ಸಮೀಪ ಸಮುದ್ರ ತೀರದಲ್ಲಿ ನೆಟ್ ಆಳವಡಿಸದಿದ್ದುರಿಂದ ಆ ಭಾಗದಲ್ಲಿ ಅವರು ಜೀವರಕ್ಷಕರ ಎಚ್ಚರಿಕೆಯನ್ನು ಧಿಕ್ಕರಿಸಿ ನೀರಿಗಿಳಿದಿದ್ದರು. ಇಬ್ಬರೂ ಪಾನಮತ್ತರಾಗಿದ್ದರು ಎಂದು ಜೀವರಕ್ಷಕರು ತಿಳಿಸಿದ್ದಾರೆ.