ಮಲ್ಪೆ ಬೀಚ್‌ ಉತ್ಸವಕ್ಕೆ ಚಾಲನೆ : ಕಡಲ ಕಿನಾರೆಯಲ್ಲಿ ಮನ ಸೆಳೆದ ಮೋಹಕ ಕಲರವ


Team Udayavani, Jan 20, 2023, 11:42 PM IST

ಮಲ್ಪೆ ಬೀಚ್‌ ಉತ್ಸವಕ್ಕೆ ಚಾಲನೆ : ಕಡಲ ಕಿನಾರೆಯಲ್ಲಿ ಮನ ಸೆಳೆದ ಮೋಹಕ ಕಲರವ

ಮಲ್ಪೆ: ರಜತೋತ್ಸವ ಸಂಭ್ರಮದಲ್ಲಿರುವ ಉಡುಪಿ ಜಿಲ್ಲೆಯು ಮುಂದಿನ 25 ವರ್ಷಗಳಲ್ಲಿ ಸಮಗ್ರ ಅಭಿವೃದ್ಧಿ ಹೊಂದಲು ದೂರದೃಷ್ಟಿ ಯೋಚನೆಯ ಜತೆಗೆ ಯೋಜನೆಯೂ ಬೇಕು ಮತ್ತು ಮುಂದೆ ಬರಲಿರುವ ಜನಪ್ರತಿನಿಧಿಗಳ ಮೇಲೂ ಮಹತ್ತರ ಜವಾಬ್ದಾರಿಯಿದೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ ಹೇಳಿದರು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆಯಿಂದ ಮಲ್ಪೆ ಬೀಚ್‌ನಲ್ಲಿ ಜ. 20ರಿಂದ 22ರ ವರೆಗೆ ಹಮ್ಮಿಕೊಂಡಿರುವ “ರಜತ ಉಡುಪಿ-ಬೀಚ್‌ ಉತ್ಸವ’ಕ್ಕೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲೆಯ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಯೋಚನೆ, ಯೋಜನೆಯ ಜತೆಗೆ ಮೂಲಸೌಕರ್ಯಗಳನ್ನು ಒದಗಿಸಬೇಕು. ಮುಂದಿನ ಪೀಳಿಗೆಗೆ ನಾವೇನು ನೀಡುತ್ತೇವೆ ಎಂಬುದು ಮುಖ್ಯವಾಗುತ್ತದೆ ಎಂದರು.

ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಅಭಿವೃದ್ಧಿ
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ರಘುಪತಿ ಭಟ್‌, ರಜತೋತ್ಸವದ ಆಚರಣೆಯ ಸಮಾರೋಪವು ಕಾರ್ಕಳದ ಬೈಲೂರಿನಲ್ಲಿ ಪರಶುರಾಮ ಥೀಮ್‌ ಪಾರ್ಕ್‌ ಉದ್ಘಾಟನೆಯೊಂದಿಗೆ ನೆರವೇರಲಿದೆ. ಉಡುಪಿ ಹೊಸ ಜಿಲ್ಲೆಯಾದ ಪ್ರತಿಫಲ ಆಡಳಿತಾತ್ಮಕವಾಗಿ ಜನರಿಗೆ ಸಿಕ್ಕಿದೆ. ಭಾರತವು ಸ್ವಾತಂತ್ರ್ಯದ ಶತಮಾನೋತ್ಸವ ಆಚರಿಸುವಾಗ ಉಡುಪಿ ಜಿಲ್ಲೆ ಸುವರ್ಣ ಮಹೋತ್ಸವ ಆಚರಿಸಲಿದೆ. ಈ ಅವಧಿಗೆ ಜಿಲ್ಲೆ ದೇಶದಲ್ಲೇ ಮುಂದೆ ಬರಬೇಕು. ಮುಂದಿನ 25 ವರ್ಷಗಳ ಜಿಲ್ಲೆಯ ಅಭಿವೃದ್ಧಿ ವರ್ಕ್‌ ಪ್ಲಾನ್‌ ಸಿದ್ಧಪಡಿಸಬೇಕಿದೆ. ಸ್ಥಳೀಯರಿಗೆ ಉದ್ಯೋಗ, ಪ್ರವಾಸೋದ್ಯಮದ ಅಭಿವೃದ್ಧಿಗೆ ಉತ್ತೇಜನ ನೀಡುವುದೇ ಉತ್ಸವದ ಮೂಲ ಉದ್ದೇಶ ಎಂದರು.

ಮುಂದುವರಿಯಲಿದೆ
ಬೀಚ್‌ ಉತ್ಸವ ಹಿನ್ನೆಲೆಯಲ್ಲಿ ವಿದೇಶದಿಂದ ಫ್ಲೈ ಬೋರ್ಡ್‌, ಕ್ಲಿಪ್‌ ಡೈವ್‌, ಸ್ಕೂಬಾ ಡೈವ್‌, ಐಶಾರಾಮಿ ಪ್ರವಾಸಿ ಬೋಟ್‌ ತರಿಸಲಾಗಿದೆ ಮತ್ತು ಮುಂದಿನ ಒಂದು ತಿಂಗಳು ಅದೆಲ್ಲವೂ ಮುಂದುವರಿಯಲಿದೆ. ಇದರ ನಿರ್ವಹಣೆಗೆ ಸ್ಥಳೀಯರಿಗೆ ತರಬೇತಿ ನೀಡಲಿದ್ದೇವೆ ಎಂದರು.

ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್‌. ನಾಯಕ್‌, ಉಪಾಧ್ಯಕ್ಷೆ ಲಕ್ಷ್ಮೀ ಮಂಜು ಕೊಳ, ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀಶ ಕೊಡವೂರು, ಮಲ್ಪೆ ಬೀಚ್‌ ಅಭಿವೃದ್ಧಿ ಸಮಿತಿ ಅಧ್ಯಕ್ಷ ಪಾಂಡುರಂಗ ಮಲ್ಪೆ, ಜಿ.ಪಂ. ಸಿಇಒ ಪ್ರಸನ್ನ ಎಚ್‌., ಎಸ್ಪಿ ಹಾಕೆ ಅಕ್ಷಯ್‌ ಮಚ್ಚೀಂದ್ರ, ತರಬೇತಿ ನಿರತ ಐಎಎಸ್‌ ಅಧಿಕಾರಿ ಯತೀಶ್‌ ಉಪಸ್ಥಿತರಿದ್ದರು.

ಜಿಲ್ಲಾಧಿಕಾರಿ ಕೂರ್ಮಾರಾವ್‌ ಸ್ವಾಗತಿಸಿ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್‌. ವಂದಿಸಿದರು. ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ| ರೋಶನ್‌ ಶೆಟ್ಟಿ ನಿರೂಪಿಸಿದರು.

ಬೀಚ್‌ ಉತ್ಸವದ ಹೈಲೈಟ್ಸ್‌
ನಿಯಾನ್‌ ಲೈಟಿಂಗ್‌, ಫ್ಲೆ„ ಬೋರ್ಡ್‌, ಸೈಂಟ್‌ ಮೇರಿಸ್‌ ಐಲ್ಯಾಂಡ್‌ನ‌ಲ್ಲಿ ಕ್ಲಿಪ್‌ ಡೈವ್‌, ಯಾಚ್‌ ಸೇವೆ, ಸ್ಕೂಬಾ ಡೈವ್‌, ಓಪನ್‌ ಸೀ ವಾಟರ್‌ ಸ್ವಿಮ್ಮಿಂಗ್‌, ಜನರಲ್‌ ತಿಮ್ಮಯ್ಯ ಅಕಾಡೆಮಿಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಕಯಾಕಿಂಗ್‌, ಮಹಿಳೆಯರ ತ್ರೋಬಾಲ್‌, ಚಿತ್ರಕಲಾ ಶಿಬಿರ, ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳ ಛಾಯಾಚಿತ್ರ ಪ್ರದರ್ಶನ, ವಿವಿಧ ಸ್ಪರ್ಧೆ, ಆಹಾರ ಮೇಳದಲ್ಲಿ ವಿವಿಧ ಖಾದ್ಯಗಳು, ಗಾಳಿಪಟ ಉತ್ಸವ ಹೀಗೆ ಹತ್ತಾರು ಚಟುವಟಿಕೆಗಳು ಇವೆ.

ಸಂಗೀತ ಸಂಜೆ
ಮಲ್ಪೆ ಕಡಲ ಕಿನಾರೆಯಲ್ಲಿ ಶುಕ್ರವಾರ ಇಳಿಸಂಜೆ ಗಾಯಕ ರಾಜೇಶ್‌ ಕೃಷ್ಣನ್‌ ಮತ್ತು ತಂಡದಿಂದ ಸಂಗೀತ ರಸಮಂಜರಿ ಸಭಿಕರನ್ನು ಮನಸೂರೆಗೊಳಿಸಿತು.

ಟಾಪ್ ನ್ಯೂಸ್

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.