ಬೋಟ್‌ ಅವಶೇಷ ಪತ್ತೆ; ಮೃತದೇಹಗಳ ಮಾಹಿತಿ ಇಲ್ಲ

ನೌಕಾಪಡೆಯಿಂದ ಉಡುಪಿ ಎಸ್‌ಪಿಗೆ ಅಧಿಕೃತ ಮಾಹಿತಿ

Team Udayavani, May 9, 2019, 6:00 AM IST

BOAT-MISSING

ಉಡುಪಿ: ಮಲ್ಪೆಯಿಂದ ಆಳಸಮುದ್ರ ಮೀನುಗಾರಿಕೆಗೆ ಹೊರಟು 7 ಮಂದಿ ಮೀನುಗಾರರ ಸಹಿತ ನಾಪತ್ತೆಯಾಗಿದ್ದ ಸುವರ್ಣ ತ್ರಿಭುಜ ಬೋಟ್‌ನ ಅವಶೇಷ ಪತ್ತೆಯಾಗಿರುವ ಕುರಿತು ನೌಕಾಪಡೆ ಉಡುಪಿ ಎಸ್‌ಪಿಯವರಿಗೆ ಮೇ 7ರಂದು ಅಧಿಕೃತ ಮಾಹಿತಿ ನೀಡಿದೆ.

ಮೇ 1ರಂದು ಅವಶೇಷ ಪತ್ತೆಯಾಗಿರುವ ಬಗ್ಗೆ ನೌಕಾಪಡೆ ತನ್ನ ಟ್ವಿಟರ್‌ನಲ್ಲಿ ಪ್ರಕಟಿಸಿತ್ತು. ಶಾಸಕ ರಘುಪತಿ ಭಟ್‌ ಕೂಡ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದರು. ಈ ಬಗ್ಗೆ ವರದಿ ನೀಡುವಂತೆ ಎಸ್‌ಪಿ ನಿಶಾ ಜೇಮ್ಸ್‌ ಮೇ 3ರಂದು ಕಾರವಾರ ನೌಕಾ ಅಧಿಕಾರಿಗಳಿಗೆ ಪತ್ರ ಬರೆದಿದ್ದರು.

ಮೃತದೇಹ ಮಾಹಿತಿ ಇಲ್ಲ
ಎ. 30ರಿಂದ ಮೇ 2ರ ವರೆಗೆ ನಡೆದ ಕಾರ್ಯಾಚರಣೆಯಲ್ಲಿ ಮಹಾರಾಷ್ಟ್ರದ ಮಾಲ್ವಾಣ್‌ ಪ್ರದೇಶದ ಸಮುದ್ರ ದಡದಿಂದ 30 ಕಿ.ಮೀ. ದೂರದಲ್ಲಿ, 60 ಮೀ. ಆಳದಲ್ಲಿ ಬೋಟ್‌ನ ಅವಶೇಷ ಪತ್ತೆಯಾಗಿದೆ. ಆದರೆ ಮೃತದೇಹಗಳ ಕುರಿತು ಮಾಹಿತಿ ಸಿಕ್ಕಿಲ್ಲ.

ನಿರಂತರ ಸಂಪರ್ಕ
ಮೀನುಗಾರರ ನಾಪತ್ತೆ ಬಗ್ಗೆ ದೂರು ದಾಖಲಾಗಿದೆ. ಹಾಗಾಗಿ ಪೊಲೀಸ್‌ ಇಲಾಖೆ ಸೂಕ್ತ ಭೌತಿಕ ಸಾಕ್ಷ್ಯಾಧಾರವಿಲ್ಲದೆ 7 ವರ್ಷಗಳ ವರೆಗೆ ಈ ಪ್ರಕರಣವನ್ನು ಅಂತ್ಯಗೊಳಿಸುವಂತಿಲ್ಲ. ಆದರೆ ಪೊಲೀಸ್‌ ಇಲಾಖೆ ನೇರವಾಗಿ ಸಾಕ್ಷ್ಯಾಧಾರ ಸಂಗ್ರಹ ನಡೆಸುವುದು ಅಸಾಧ್ಯ. ನೌಕಾಪಡೆ, ಕರಾವಳಿ ಕಾವಲು ಪಡೆ ಮೊದಲಾದವುಗಳ ನೆರವು ಪಡೆಯಲಾಗುವುದು. ಮಹಾರಾಷ್ಟ್ರ ಸಿಂಧುದುರ್ಗಾ ಎಸ್‌ಪಿ ಅವರ ಜತೆಗೂ ಸಂವಹನ ನಡೆಸಲಾಗಿದೆ. ನೌಕಾಪಡೆಯಿಂದ ಅಗತ್ಯ ಮಾಹಿತಿ ಪಡೆದುಕೊಳ್ಳುತ್ತೇವೆ. ಇದೊಂದು ಅಪರೂಪದ ಪ್ರಕರಣ. ಆದಾಗ್ಯೂ ಅವಶೇಷ ದೊರಕಿರುವುದು ಮಹತ್ವದ ಬೆಳವಣಿಗೆ ಎಂದು ಎಸ್‌ಪಿ ಹೇಳಿದ್ದಾರೆ.

ಚಿತ್ರವೂ ನೌಕಾಪಡೆಯದ್ದು
ಐಎನ್‌ಎಸ್‌ ಕೊಚ್ಚಿ ಹಡಗಿನ ತಳಭಾಗಕ್ಕೆ ಹಾನಿಯಾಗಿರುವ ಬಗ್ಗೆ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಚಿತ್ರವನ್ನು ಕೂಡ ನೌಕಾಪಡೆಯೇ ಬಿಡುಗಡೆ ಮಾಡಿತ್ತು. ಹಡಗಿಗೆ ಹಾನಿಯಾಗಿರುವ ಕುರಿತು ಕೂಡ ಹೆಚ್ಚಿನ ಮಾಹಿತಿ ಕೋರಲಾಗಿದೆ ಎಂದು ಎಸ್‌ಪಿ ಪ್ರತಿಕ್ರಿಯಿಸಿದ್ದಾರೆ.

ಶಿಪ್ಪಿಂಗ್‌ ನಿರ್ದೇಶನಾಲಯಕ್ಕೂ ಪತ್ರ
ಐಎನ್‌ಎಸ್‌ ಕೊಚ್ಚಿ ಸಾಗಿರುವ ಮಾರ್ಗದಲ್ಲೇ ಮುಂಬಯಿಯಿಂದ ಪ.ಬಂಗಾಲದ ಹಾಲ್ಡಿಯಾಕ್ಕೆ ಸರಕು ಸಾಗಾಟ ನೌಕೆ ಸಂಚರಿಸಿರುವ ಮಾಹಿತಿಗಳ ಹಿನ್ನೆಲೆಯಲ್ಲಿ ಶಿಪ್ಪಿಂಗ್‌ ಸಚಿವಾಲಯದ ನಿರ್ದೇಶನಾಲಯಕ್ಕೂ ಪತ್ರ ಬರೆಯಲಾಗಿದೆ ಎಂದು ಎಸ್‌ಪಿ ಪ್ರತಿಕ್ರಿಯಿಸಿದ್ದಾರೆ.

“ಪರಿಹಾರ ಬೇಡ; ಮೊದಲು
ನಮ್ಮವರನ್ನು ಹುಡುಕಿಕೊಡಿ’
ಮಲ್ಪೆ: ಸುವರ್ಣ ತ್ರಿಭುಜ ಮುಳುಗಿರುವುದನ್ನು ಐಎನ್‌ಎಸ್‌ ನಿರೀಕ್ಷಕ ಪತ್ತೆಹಚ್ಚಿದೆಯಾದರೂ ಅದನ್ನು ಮೇಲೆತ್ತುವುದು ಯಾವಾಗ ಮತ್ತು ಯಾರು ಎನ್ನುವುದು ಪ್ರಶ್ನೆಯಾಗಿದೆ. ಈ ಮಧ್ಯೆ ರಾಜ್ಯ ಸರಕಾರ ನಾಪತ್ತೆಯಾದ ಮೀನುಗಾರರ ಕುಟುಂಬಕ್ಕೆ ಪರಿಹಾರ ನೀಡಲು ಮುಂದಾಗಿದೆಯಾದರೂ ಮೀನುಗಾರರ ಕುಟುಂಬ ನಮ್ಮವರನ್ನು ಹುಡುಕಿಕೊಡಿ ಎಂದು ಆಗ್ರಹಿಸುತ್ತಿದೆ.

ನಾಪತ್ತೆಯಾಗಿರುವ ಭಟ್ಕಳ ಅಳ್ವೆಕೋಡಿಯ ಹರೀಶ್‌ (23) ಅವರ ಮಾವ ಪಾಂಡು ಅವರು ಹೇಳುವಂತೆ ಜೀವನ ನಿರ್ವಹಣೆಗಾಗಿ ಪರಿಹಾರವಾದರೆ ಸರಿ. ಮೃತರಾಗಿದ್ದಾರೆ ಎಂಬ ನಿಟ್ಟಿನಲ್ಲಿ ಪರಿಹಾರಕ್ಕೆ ಮುಂದಾಗಿರುವುದು ಸರಿಯಲ್ಲ ಎಂದಿದ್ದಾರೆ.

ಮೇ 16ರಂದು ಮಲ್ಪೆ ಮೀನುಗಾರ ಸಂಘದವರು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಲ್ಲಿಗೆ ನಮ್ಮನ್ನು ಕರೆದುಕೊಂಡು ಹೋಗಿ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಿದೇªವೆ ಎಂದರು.

ಸ್ವಂತ ಮನೆಯೇ ಇಲ್ಲ
ಹರೀಶ್‌ ಕುಟುಂಬಕ್ಕೆ ಸ್ವಂತ ಮನೆಯೇ ಇಲ್ಲ. ಮಾವ ಪಾಂಡುರಂಗ ಅವರ ಮನೆಯಲ್ಲೇ ಇಡೀ ಕುಟುಂಬ ವಾಸವಾಗಿದೆ. ತಂದೆ ಶನಿಯಾರ್‌ ಮೊಗೇರ್‌ ಮತ್ತು ತಾಯಿ ಧನವಂತಿ ಮೀನು ಮಾರಿ ಜೀವನ ಸಾಗಿಸುತ್ತಿದ್ದಾರೆ.

ಟಾಪ್ ನ್ಯೂಸ್

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.