ಮಲ್ಪೆ : ಬೋಟು ಮುಳುಗಡೆ, 7 ಮಂದಿ ಮೀನುಗಾರರ ರಕ್ಷಣೆ
Team Udayavani, Sep 10, 2022, 10:09 AM IST
ಮಲ್ಪೆ : ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಆಳಸಮುದ್ರ ಬೋಟು ಮುಳುಗಿದ್ದು, ಅದರಲ್ಲಿದ್ದ 7 ಮಂದಿಯನ್ನು ರಕ್ಷಿಸಲಾಗಿದೆ.
ಲತೀಶ್ ಮೆಂಡನ್ ಅವರಿಗೆ ಸೇರಿದ ಶ್ರೀ ದುರ್ಗಾ ವೈಷ್ಣವಿ ಬೋಟು ಆ. 29ರಂದು ರಾತ್ರಿ ಮಲ್ಪೆ ಬಂದರಿನಿಂದ ಹೊರಟಿತ್ತು. ಮೀನುಗಾರಿಕೆ ಮುಗಿಸಿ ವಾಪಸು ಬರುವಾಗ ಸೆ. 8ರಂದು ಬೆಳಗ್ಗೆ ಗಂಗೊಳ್ಳಿ ತೀರದಿಂದ ಸುಮಾರು 15 ಮಾರು ಆಳ ದೂರ ಬೋಟಿನ ಕೆಳಭಾಗಕ್ಕೆ ಗಟ್ಟಿಯಾದ ವಸ್ತು ತಾಗಿದಂತಾಯಿತು. ಪರಿಣಾಮ ಬೋಟಿನೊಳಗೆ ನೀರು ಬರಲಾರಂಭಿಸಿತು. ಬೋಟಿನಲ್ಲಿದ್ದ ಕಾರ್ಮಿಕರು ನೀರು ಖಾಲಿ ಮಾಡಲು ಪ್ರಯತ್ನಿಸಿದರೂ ನೀರಿನ ಒಳ ಹರಿವು ಹೆಚ್ಚಾಗಿ ಬೋಟ್ನ ಎಂಜಿನ್ ಕೆಟ್ಟು ಹೋಗಿ ಬೋಟು ಮುಳುಗಡೆಗೊಂಡಿತು.
ಸಮೀಪದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಸ್ವರ್ಣಮಂಗಳ, ಸಮೃದ್ಧಿ, ಸಮುದ್ರತನಯ ಬೋಟ್ನವರು ತತ್ಕ್ಷಣ ಧಾವಿಸಿ ಬಂದು ಬೋಟ್ನಲ್ಲಿದ್ದ ಮೀನುಗಾರರನ್ನು ರಕ್ಷಿಸಿದ್ದಾರೆ. ಮೂರು ಬೋಟ್ನ ಸಹಾಯದಿಂದ ಎಳೆದು ತರುವಾಗ ಸಂಜೆ ಹಂಗಾರಕಟ್ಟೆ ಬೆಂಗ್ರೆ ಸಮೀಪ ಬೋಟು ಸಂಪೂರ್ಣ ಮುಳುಗಡೆಗೊಂಡಿತ್ತು. ಹಿಡಿದ ಮೀನು, ಬಲೆ, ಎಂಜಿನ್ ಸಹಿತ ಸುಮಾರು 50 ಲಕ್ಷ ರೂ. ನಷ್ಟ ಉಂಟಾಗಿದೆ.
ಇದನ್ನೂ ಓದಿ : ಸೋಮವಾರದಿಂದ ಅಧಿವೇಶನ: ಮೂರು ಪಕ್ಷಗಳಿಗೆ ಸಾಮರ್ಥ್ಯ ಪ್ರದರ್ಶನ ಅನಿವಾರ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್