5.61 ಕೋ.ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿ ಪೂರ್ಣ’


Team Udayavani, Aug 4, 2018, 6:15 AM IST

0308mle1.jpg

ಮಲ್ಪೆ: ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ  5.61 ಕೋ. ರೂ ವೆಚ್ಚದಲ್ಲಿ ದುರಸ್ತಿ ಸೇರಿದಂತೆ ವಿವಿಧ ಅಭಿವೃದ್ದಿ ಕಾರ್ಯ ನಡೆಯುತ್ತಿದೆ. ಮೂಲ ಸೌಲಭ್ಯ, ಏಲಂ ಕಟ್ಟಡದ ದುರಸ್ತಿ, ಬಂದರು ರಸ್ತೆಯನ್ನು ವ್ಯವಸ್ಥಿತವಾಗಿ ಅಭಿವೃದ್ಧಿ ಮಾಡಲಾಗುತ್ತಿದೆ. ಮೀನುಗಾರಿಕೆ  ಋತು ಆರಂಭದ ಹಿನ್ನೆಲೆಯಲ್ಲಿ ಈಗಾಗಲೇ ಬಹುತೇಕ ಕಾಮಗಾರಿ ಪೂರ್ಣಗೊಳಿಸಲಾಗಿದೆ.

ದಿನನಿತ್ಯ ಸಾವಿರಾರು ಮೀನುಗಾರರು ಒಂದೆಡೆ ಸೇರುವ ಪ್ರದೇಶದಲ್ಲಿ ಕೋಟ್ಯಂತರ ರೂ. ಮೀನುಗಾರಿಕೆ ವ್ಯವಹಾರ ಇಲ್ಲಿ ನಡೆಯುತ್ತದೆ. ಇಲ್ಲಿನ ಮಲ್ಪೆ ಬಂದರು ಏಲಂ ಕಟ್ಟಡ ಶೀಟುಗಳು, ನೆಲಹಾಸು ಸಂಪೂರ್ಣ ಹಾಳಾಗಿತ್ತು. ಈ ಬಗ್ಗೆ ಮೀನುಗಾರರು ಬಂದರು ಏಲಂ ಕಟ್ಟಡ ದುರಸ್ತಿಪಡಿಸುವಂತೆ ಅಧಿಕಾರಿ, ಜನಪ್ರತಿನಿಧಿಗಳಲ್ಲಿ ಮನವಿ ಸಲ್ಲಿಸಿದ್ದರು. ಇದರಲ್ಲಿ ಬಂದರು ರಸ್ತೆ ಸೇರಿದಂತೆ ಜೆಟ್ಟಿ ನಿರ್ಮಾಣದ ಪ್ರಸ್ತಾಪವು ಇತ್ತೆನ್ನಲಾಗಿದೆ. ಮೀನುಗಾರಿಕೆ  ಇಲಾಖೆಯ 20 17-18ನೇ ಸಾಲಿನ ಆಯವ್ಯಯದಲ್ಲಿ ಘೋಷಣೆ ಮಾಡಿದ ಅನುದಾನದಡಿಯಲ್ಲಿ ಕಾಮಗಾರಿಯನ್ನು  ಕೈಗೆತ್ತಿಕೊಳ್ಳಲಾಗಿದೆ.

ಏನೆಲ್ಲ ಕಾಮಗಾರಿಗಳಾಗಿವೆ?
ಬಂದರಿನ ಉತ್ತರ ಭಾಗದ ಬದಿಯಲ್ಲಿ ಖಾಲಿ ಪ್ರದೇಶದಲ್ಲಿ 2.80 ಕೋ. ರೂ. ವೆಚ್ಚದಲ್ಲಿ 70.5 ಮೀ.  ಉದ್ದದ ಜೆಟ್ಟಿ ನಿರ್ಮಿಸಲಾಗಿದೆ. ಬಂದರಿನ ಒಳಗೆ ಕಾಂಕ್ರೀಟ್‌ ರಸ್ತೆ ನಿರ್ಮಾಣ ಮಾಡಲಾಗಿದ್ದು, 1.28 ಕೋ. ರೂ. ವೆಚ್ಚದಲ್ಲಿ 1.2 ಕಿ.ಮೀ . ವ್ಯವಸ್ಥಿತ ದ್ವಿಪಥ ಕಾಂಕ್ರೀಟ್‌ ರಸ್ತೆ ನಿರ್ಮಿಸಲಾಗಿದೆ. ಇವೆರಡು ಕಾಮಗಾರಿ ಮಾರ್ಚ್‌ನಲ್ಲಿ ಪೂರ್ಣಗೊಂಡಿದೆ. ಉಳಿದಂತೆ ಬಂದರಿನ ಎರಡು ಹರಾಜು ಕಟ್ಟಡದ ದುರಸ್ತಿ ಕಾರ್ಯಗಳನ್ನು ನಡೆಸಲಾಗುತ್ತಿದೆ. 

ಪ್ರಾಂಗಣದ ನೆಲಕ್ಕೆ ಗ್ರಾನೈಟ್ಸ್‌ ಅಳವಡಿಸುವ ಹಾನಿಗೊಂಡ ಮಾಡಿನ ಹಳೆ ಶೀಟನ್ನು ತೆಗೆದು ಹೊಸ ಶೀಟನ್ನು ಅಳವಡಿಸಲಾಗುತ್ತಿದ್ದು  ಈಗಾಗಲೇ ಒಂದು ಪ್ರಾಂಗಣ ಕೆಲಸ ಮುಗಿದಿದ್ದು ಇನ್ನೊಂದು ಪ್ರಾಂಗಣದ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಶೇ.75 ಡ್ರಜ್ಜಿಂಗ್‌
ಬಂದರಿನಲ್ಲಿ ಈಗಾಗಲೇ ಶೇ.75ರಷ್ಟು  ಡ್ರೆಜ್ಜಿಂಗ್‌ ಮುಗಿಸಲಾಗಿದೆ. ಮೀನುಗಾರಿಕೆ ಆರಂಭ ಗೊಂಡಿದ್ದರಿಂದ ಉಳಿದ ಕೆಲಸವನ್ನು ಬೋಟುಗಳು ಮೀನುಗಾರಿಕೆಗೆ ತೆರಳಿದ ಬಳಿಕ ನಡೆಯಲಿದೆ. ಬೇಸಿನಿನಲ್ಲಿ ಹೂಳುತುಂಬಿದ್ದರಿಂದ ಬೋಟುಗಳ ಚಲನವಲನಕ್ಕೆ ಸಾಕಷ್ಟು ಸಮಸ್ಯೆಯಾಗಿತ್ತು, ನೀರಿಗೆ ಆಕಸ್ಮಿಕವಾಗಿ ಬಿದ್ದ ಸಂದರ್ಭದಲ್ಲಿ ಮೀನುಗಾರರನ್ನು ರಕ್ಷಿಸಲು ಕಷ್ಟ ಸಾಧ್ಯವಾಗಿತ್ತು, ಈ ಬಗ್ಗೆ ಮೀನುಗಾರರು ಹಲವು ದಿನಗಳಿಂದ ಸಮಸ್ಯೆ ಪರಿಹಾರಕ್ಕೆ ಬೇಡಿಕೆ ಸಲ್ಲಿಸಿದ್ದರು. ಮುಂಬೈಯ ಯುನಿಕ್‌ ಡ್ರೆಜ್ಜಿಂಗ್‌ ಸಂಸ್ಥೆ  ಡ್ರಜ್ಜಿಂಗ್‌ ಕಾಮಗಾರಿಯನ್ನು ಕೈಗೊಂಡಿದೆ.

ತಾಂತ್ರಿಕ ಕೆಲಸ ಅಪೂರ್ಣ
ಮಳೆಗಾಲದಲ್ಲಿ ಬೋಟನ್ನು  ದಕ್ಕೆಯಲ್ಲಿ ನಿಲ್ಲಿಸಲಾಗುವುದರಿಂದ ಡ್ರಜ್ಜಿಂಗ್‌ ಕೆಲಸ  ಸ್ಥಗಿತಗೊಳಿಸಲಾಗಿತ್ತು. ಅಗಸ್ಟ್‌ನಲ್ಲಿ ಬೋಟ್‌ಗಳು ಸಮುದ್ರಕ್ಕೆ ತೆರಳಿದ ಬಳಿಕ ಮತ್ತೆ ಕಾಮಗಾರಿ ಆರಂಭಿಸಲಾಗುವುದು. ಹರಾಜು ಪ್ರಾಂಗಣದ ನೆಲಕ್ಕೆ ಗ್ರಾನೈಟ್‌ ಅಳವಡಿಸುವ ಕೆಲಸಗಳು ಮುಗಿದಿದೆ. ಪ್ರಾಂಗಣದ ಮೇಲ್ಛಾವಣೆ ಶೀಟು ಆಳವಡಿಸುವ ಕೆಲಸ ಆಗಬೇಕಾಗಿದೆ. ಮೇಲ್ಛಾವಣಿ ವಿನ್ಯಾಸಗೊಳಿಸುವ ಬಗ್ಗೆ ಮೀನುಗಾರಿಕೆ  ಇಲಾಖೆಯ ಗಮನಕ್ಕೆ ತರಲಾಗಿದ್ದು  ತಾಂತ್ರಿಕ ಕೆಲಸಗಳು ಆಗಬೇಕಾಗಿದ್ದು ಅದು ಮುಗಿದ ಬಳಿಕ ಕಾಮಗಾರಿ ಪೂರ್ಣಗೊಳಿಸಲಾಗುವುದು.
– ನಾಗರಾಜ್‌, ಎಕ್ಸಿಕ್ಯೂಟಿವ್‌ ಎಂಜಿನಿಯರ್‌, ಬಂದರು ಇಲಾಖೆ

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.