ಇನ್ನಷ್ಟು ಹಚ್ಚ ಹಸುರಾಗಲಿದೆ ಮಲ್ಪೆ ಸೈಂಟ್‌ಮೇರಿ ದ್ವೀಪ


Team Udayavani, Jul 16, 2017, 2:40 AM IST

saint-marrys.jpg

ಮಲ್ಪೆ: ಭೂಲೋಕದ ಕೌತುಕಗಳಲ್ಲೊಂದೆನಿಸಿದ ದೇಶ ವಿದೇಶಗಳ ಪ್ರವಾಸಿಗರ ಆಕರ್ಷಣೀಯ ಸ್ಥಳ ಮಲ್ಪೆಯ ಸೈಂಟ್‌ ಮೇರೀಸ್‌ ದ್ವೀಪ ಇನ್ನು ಮುಂದೆ ಸಂಪೂರ್ಣ ಹಚ್ಚ ಹಸಿರಿನ ತಾಣವಾಗಿ ಕಂಗೊಳಿಸಲಿದೆ. 

ತೆಂಗಿನ ಮರಗಳ ದ್ವೀಪ
ತೆಂಗಿನ ಮರಗಳ ಸಾಲು ತೋರಣದಿಂದ ಈ ಹಿಂದೆ ತೆಂಗಿನ ಮರಗಳ ದ್ವೀಪ (ಕೊಕೊನೆಟ್‌ ಐಲ್ಯಾಂಡ್‌) ಎಂದೇ ಕರೆಸಿಕೊಳ್ಳುತ್ತಿದ್ದ ಈ ದ್ವೀಪ ಇದೀಗ ಮತ್ತೆ ತನ್ನ ಗತ ವೈಭವವನ್ನು ಕಾಣಲಿದೆ. 

ಹಸಿರಿನ ತಾಣ
ಸುಮಾರು 15 ಎಕ್ರೆ ವಿಸ್ತಾರದ ಈ ಐತಿಹಾಸಿಕ ತಾಣವನ್ನು ಬೀಚ್‌ ನಿರ್ವಹಣೆಯ ಗುತ್ತಿಗೆಯನ್ನು ವಹಿಸಿಕೊಂಡ ಮಂತ್ರ ಟ್ರಾವೆಲ್‌ ಆ್ಯಂಡ್‌ ಟೂರಿಸಂ ಡವೆಲಪ್‌ಮೆಂಟ್‌ನ ಸುದೇಶ್‌ ಶೆಟ್ಟಿ ಅವರು ಹಸಿರಿನ ತಾಣವಾಗಿಸಲು ಆಸಕ್ತಿ ತೋರಿದ್ದು ಪ್ರವಾಸಿಗರಿಗೆ ಸಂತಸವನ್ನು ಉಂಟು ಮಾಡಿದೆ. 

ಉಲ್ಲಾಸ
ಬಿಸಿಲಿನ ಹೊಡೆತದಿಂದಾಗಿ ಹೆಚ್ಚು ಹೊತ್ತು ಸುತ್ತಾಡಲು ಹಿಂಜರಿಯುತ್ತಿದ್ದ ಪ್ರವಾಸಿಗರಿಗೆ ಇನ್ನು ಮುಂದೆ ತಂಪಾದ ವಾತಾವರಣ ಉಲ್ಲಾಸ ನೀಡಲಿದೆ. 

ಸುದಿನ 
ನೂರಾರು ಬಗೆಯ ಸಸ್ಯರಾಶಿಗಳು ಆಲಂಕಾರಿಕ ಗಿಡಗಳು ಆಹ್ಲಾದಕರ ಅನುಭವ ನೀಡಲಿದೆ. ಮುಳ್ಳುಗಂಟಿಗಳಿಂದ ಆವರಿಸಿದ್ದ ತಾಣ ಮುಂದೆ ಹಸಿರಿನಿಂದ ಕಂಗೊಳಿಸುವ ಸುದಿನ ಬರಲಿದೆ.

ಔಷಧೀಯ ಸಸ್ಯ
ಈಗಾಗಲೇ ಇಲ್ಲಿ ನೂರಾರು ವರ್ಷದ ಹಿಂದಿದ್ದ 150ಕ್ಕೂ ಹೆಚ್ಚು ಆಯುಷ್ಯ ಮುಗಿದಿರುವ ತೆಂಗಿನ ಮರಗಳು ಗಾಳಿಗೆ ಧರೆಗುರುಳಿದ್ದು ಆ ಜಾಗದಲ್ಲಿ  ತೆಗೆದು ಹೊಸ ತೆಂಗಿನ ಸಸಿಗಳನ್ನು ನೆಡಲಾಗಿದೆ.  ಹೆಚ್ಚಿನ ಕಡೆಗಳಲ್ಲಿ ಖಾಲಿ ಜಾಗವಿರುವಡೆ ವಿವಿಧ ಜಾತಿಯ ಗಿಡಗಳನ್ನು ನೆಡಲಾಗಿದ್ದು ಇಲ್ಲಿರುವ ಕೆಲವೊಂದು ಔಷಧೀಯ ಸಸ್ಯಗಳನ್ನು ಮುಂದೆ ನೀರುಣಿಸಿ ರಕ್ಷಿಸಲಾಗುತ್ತದೆ ಗಿಡಗಳ ರಕ್ಷಣೆ, ನಿರ್ವಹಣೆ ಕೇವಲ ಮರಗಳನ್ನು ನೆಟ್ಟು ಸುಮ್ಮನೆ ಕೂರುವುದಿಲ್ಲ. 

ಗಿಡಗಳ ರಕ್ಷಣೆಗಾಗಿ ವಿಶೇಷ ಕಾಳಜಿ ವಹಿಸಲಾಗಿದೆ. ಸುಮಾರು 2000 ಲೀ ಟ್ಯಾಂಕಿನಲ್ಲಿ ನೀರನ್ನು ತುಂಬಿಸಿ ಬೋಟಿನಿಂದ ಐಲ್ಯಾಂಡಿಗೆ  ಕೊಂಡೊಯ್ಯಲಾಗುತ್ತದೆ. ಅದಕ್ಕಾಗಿಯೇ ಒಂದು ಬೋಟನ್ನು ಕೂಡ ಖರೀದಿಸಲಾಗಿದೆ. ಪ್ರತಿದಿನ  5 ರಿಂದ 6 ಟ್ಯಾಂಕ್‌ ನೀರನ್ನು (ಸುಮಾರು 12 ಸಾವಿರ ಲೀ ) ಅಲ್ಲಿರುವ ತೆಂಗಿನ ಮರಸೇರಿ ಎಲ್ಲ ಜಾತಿಯ ಗಿಡಗಳಿಗೆ ನೀರುಣಿಸಲಾಗುತ್ತದೆ. ಇದರ ನಿರ್ವಹಣೆಗೆಂದು ಮೂರು ಮಂದಿಯನ್ನು ಕೂಡ ನೇಮಿಸಲಾಗಿದೆ. 

ವಿವಿಧ ಗಿಡಗಳು
ದ್ವೀಪದ ಉತ್ತರ ಭಾಗದಲ್ಲಿ ಈಗಾಗಲೇ ಸುಮಾರು 300ಕ್ಕೂ ಅಧಿಕ ಗಿಡಗಳನ್ನು ನೆಡಲಾಗಿದೆ. ತೆಂಗಿನ ಸಸಿಗಳು, ಬಾದಾಮು ಗಿಡ, ಮಾವು, ಚಿಕ್ಕು, ಜಾಮ್‌, ನೇರಳೆ ವಿವಿಧ ಜಾತಿಯ ಗಿಡಗಳನ್ನು ಬೆಳೆಸಲಾಗಿದೆ. ಆಗಸ್ಟ್‌ ಅನಂತರ ಐಲ್ಯಾಂಡಿನ ದಕ್ಷಿಣ ಭಾಗದಲ್ಲೂ ಬೆಳಸಲಾಗುತ್ತದೆ 

ಫಲವತ್ತತೆ
ಇಲ್ಲಿನ ದ್ವೀಪ ಪ್ರದೇಶದಲ್ಲಿರುವ ಮಣ್ಣು ಫಲವತ್ತತೆಯಿಂದ ಕೂಡಿದ್ದು ಗೊಬ್ಬರದ ರೀತಿಯಲ್ಲಿರುವ ಈ ಮಣ್ಣಿನಲ್ಲಿ  ಗಿಡಗಳಿಗೆ ಸರಿಯಾದ ರೀತಿಯಲ್ಲಿ ನೀರುಣಿಸಿದರೆ ಯಾವ ಜಾತಿಯ ಗಿಡವನ್ನು ಕೂಡ ಬೆಳೆಸಿದರೂ ಜೀವ ಪಡೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. 

ಐಲ್ಯಾಂಡ್‌ನ್ನು ಪೂರ್ಣ ಗ್ರೀನರಿಯಾಗಿಸುವುದು ಮತ್ತು ಪ್ರವಾಸಿಗರಿಗೆ ನೆರಳು ನೀಡುವ ಉದ್ದೇಶದಿಂದ ಈ ಕಾರ್ಯಕ್ಕೆ ಮುಂದಾಗಿದ್ದೇವೆ. ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಈಗಾಗಲೇ ಇಲ್ಲಿದ್ದ ಪೊದೆ ಮುಳ್ಳುಗಂಟಿಗಳನ್ನು ತೆರವುಗೊಳಿಸಲಾಗಿದೆ. ಖಾಲಿ ಜಾಗವಿದ್ದಲ್ಲಿ ಎಲ್ಲ ಕಡೆ ಗಿಡ ಮರಗಳನ್ನು ಬೆಳೆಸಿ ತಂಪಿನ ವಾತಾವರಣ ಸೃಷ್ಟಿಯಾಗುವುದರಿಂದ ಪ್ರವಾಸಿಗರು ಇಲ್ಲಿ ಹೆಚ್ಚು ಸಮಯ ಕಳೆಯಬಹುದಾಗಿದೆ. ಮುಂದಿನ ದಿನಗಳಲ್ಲಿ ಇಲ್ಲಿ ವಾಟರ್‌ ನ್ಪೋರ್ಟ್ಸ್ ಸೇರಿದಂತೆ ಇನ್ನಷ್ಟು ಮನೋರಂಜನೆಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದ್ದು ಮತ್ತಷ್ಟು ಪ್ರವಾಸಿಗರನ್ನು ಸೆಳೆಯಲಿದೆ.
– ಸುದೇಶ್‌ ಶೆಟ್ಟಿ , ಬೀಚ್‌ ನಿರ್ವಾಹಕ

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.