ಮಲ್ಪೆ: ಬಾವಿಕಟ್ಟೆ ಬಳಿ ನಿಂತಿದ್ದ ಬಾಲಕ ಸಿಡಿಲು ಬಡಿದು ಸಾವು
Team Udayavani, Jul 18, 2020, 11:15 AM IST
ಮಲ್ಪೆ: ಇತ್ತೀಚೆಗೆ ಎಸ್ಎಸ್ಎಲ್ ಸಿ ಪರೀಕ್ಷೆ ಬರೆದಿದ್ದ ಬಾಲಕನೋರ್ವ ಸಿಡಿಲು ಬಡಿದು ಸಾವನ್ನಪ್ಪಿದ ಘಟನೆ ಮಲ್ಪೆ ಲಕ್ಷ್ಮೀ ನಗರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಲಕ್ಷ್ಮೀ ನಗರ ಗರ್ಡೆ ಆರನೇ ಅಡ್ಡ ರಸ್ತೆಯ ಮಂಜುನಾಥ್ ನಾಯಕ್ ಮತ್ತು ಶಕುಂತಲಾ ನಾಯಕ್ ಅವರ ಪುತ್ರ ಗೌತಮ್ ಸಾವನ್ನಪ್ಪಿದ್ದ ಬಾಲಕ. ಆಟ ಪಾಠಗಳಲ್ಲಿ ಸದಾ ಮುಂದಿದ್ದ ಈತ ಇತ್ತೀಚೆಗಷ್ಟೇ ಎಸ್ಎಸ್ಎಲ್ ಸಿ ಪರೀಕ್ಷೆ ಬರೆದಿದ್ದ.
ಶುಕ್ರವಾರ ರಾತ್ರಿ 7.30ರ ಸುಮಾರಿಗೆ ಘಟನೆ ನಡೆದಿದ್ದು, ಬಾಲಕ ಬಾವಿ ಕಟ್ಟೆ ಬಳಿ ನಿಂತಿದ್ದಾಗ ಸಿಡಿಲು ಬಡಿದಿದ್ದು, ಬಳಿಯಿದ್ದ ಪಂಪ್ ಸೆಟ್ ನಿಂದ ವಿದ್ಯುತ್ ಪ್ರವಹಿಸಿರಬಹುದು ಎನ್ನಲಾಗಿದೆ.
ಬಾಲಕನ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು, ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ
Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!