ನಾಪತ್ತೆಯಾದ ಮಲ್ಪೆ ಬೋಟ್‌ ಇನ್ನೂ ನಿಗೂಢ!


Team Udayavani, Jan 1, 2019, 3:54 AM IST

malpe.jpg

ಮಲ್ಪೆ: ಏಳು ಮಂದಿ ಮೀನುಗಾರರನ್ನು ಹೊತ್ತು ಮಲ್ಪೆಯಿಂದ ಹೊರಟ ಸುವರ್ಣ ತ್ರಿಭುಜ ಆಳಸಮುದ್ರ ಬೋಟ್‌ ನಾಪತ್ತೆಯಾಗಿ 16 ದಿನಗಳು ಸಂದರೂ ಯಾವುದೇ ಸುಳಿವು ಲಭ್ಯವಾಗಿಲ್ಲ. ಮೀನುಗಾರರ ಕುಟುಂಬಗಳ ನೋವು ಅರಣ್ಯ ರೋದನವಾಗಿದೆ.

ಪೂಜೆ ಮಾಡಿ ಹೊರಟಿದ್ದರು
ಬೋಟಿನ ಸಣ್ಣಪುಟ್ಟ ದುರಸ್ತಿ, ಪೈಂಟ್‌ ಕೆಲಸ ಮುಗಿದ ಬಳಿಕ ಡಿ. 13ರಂದು ಗಣಪತಿ ಹೋಮ, ಪೂಜೆ ನಡೆಸಿ ರಾತ್ರಿ 11 ಗಂಟೆಗೆ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದರು. ಡಿ. 15ರ ತಡರಾತ್ರಿ 1 ಗಂಟೆ ವರೆಗೆ ವಾಸುದೇವ ಬೋಟ್‌ನ ಮೀನುಗಾರರ ಜತೆ  ವಯರ್‌ಲೆಸ್‌ ಸಂಪರ್ಕದಲ್ಲಿದ್ದರು. ಬಳಿಕ ಎಲ್ಲರ ಮೊಬೈಲ್‌ ಮತ್ತು ವಯರ್‌ಲೆಸ್‌ ಸಂಪರ್ಕ ಕಡಿದುಕೊಂಡಿತ್ತು. ಮೊಬೈಲ್‌ಗ‌ಳು ಸ್ವಿಚ್‌ ಆಫ್‌ ಆಗಿದೆ ಎಂದು ತಿಳಿದು ಬಂದಿದೆ.

ಯಕ್ಷ ಪ್ರಶ್ನೆ
ಮಲ್ಪೆ ಬಂದರು ವ್ಯಾಪ್ತಿಯಲ್ಲಿ ಬೋಟ್‌ ನಾಪತ್ತೆ ಘಟನೆ ಇದೇ ಮೊದಲ ಬಾರಿಗೆ ನಡೆದಿದೆ. ಈ ಹಿಂದೆ ಗೋವಾ, ಮಹಾರಾಷ್ಟ್ರಕ್ಕೆ ತೆರಳಿದ ಸಂದರ್ಭ ಅಲ್ಲಿ ಮೀನು ಲೂಟಿಕೋರರಿಂದ ಹಲ್ಲೆಗೊಳಾಗಿದ್ದು ಮತ್ತು ಅಲ್ಲಿನ ಪೊಲೀಸರು ಬೋಟ್‌ ವಶಪಡಿಸಿಕೊಂಡ ಪ್ರಕರಣ ಹಲವು ಬಾರಿ ನಡೆದಿತ್ತು. ಅಗ ಮೊಬೈಲ್‌ ಮೂಲಕ ಸಂಬಂಧಪಟ್ಟವರಿಗೆ ಮಾಹಿತಿ ನೀಡಲಾಗುತ್ತಿತ್ತು. ಆದರೆ ಈ ಬಾರಿ ಅಂತಹ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಸಂಬಂಧಪಟ್ಟ ಎಲ್ಲ ಇಲಾಖೆಗಳ ಅಧಿಕಾರಿಗಳು, ಮೀನುಗಾರರು ಗೋವಾ, ಮಹಾರಾಷ್ಟ್ರದ ಗಡಿ, ದೂರದ ಗುಜರಾತ್‌ ವರೆಗೂ ನಿರಂತರ ಹುಡುಕಾಡುತ್ತಿದ್ದರೂ ಸಣ್ಣ ಸುಳಿವೂ ಸಿಕ್ಕಿಲ್ಲ.

ನೌಕಾಪಡೆ, ವಾಯುಪಡೆಗೆ ಸೂಕ್ತ ನಿರ್ದೇಶ ನೀಡಿ ಮೀನುಗಾರರ ಪತ್ತೆಗೆ ತತ್‌ಕ್ಷಣ ಸಹಕರಿಸುವಂತೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯ ಭಾಸ್ಕರ್‌ ಆವರು ಕೇಂದ್ರ ಸರಕಾರದ ರಕ್ಷಣಾ ಕಾರ್ಯದರ್ಶಿ ಸಂಜಯ ಮಿಶ್ರ ಅವರಿಗೆ ಪತ್ರ ಮುಖೇನ ಮನವಿ ಮಾಡಿದ್ದಾರೆ.

20 ಬೋಟ್‌ ಪರಿಸರದಲ್ಲಿದ್ದರೂ…
ಸುವರ್ಣ ತ್ರಿಭುಜ ಟ್ರಾಲ್‌ಬೋಟ್‌ನ ಮಾಲಕ ಚಂದ್ರಶೇಖರ್‌ ಕೋಟ್ಯಾನ್‌ ಸಹಿತ 7 ಮಂದಿ ನಾಪತ್ತೆಯಾದ ಬೋಟ್‌ನಲ್ಲಿದ್ದರು. ಈ ಬೋಟ್‌ ಇತರ 20 ಬೋಟುಗಳೊಂದಿಗೆ ಮೀನುಗಾರಿಕೆಗೆ ತೆರಳಿದ್ದು, 500-600 ಮೀ. ಅಂತರದಲ್ಲಿ ಇತರ ಬೋಟ್‌ಗಳಿದ್ದವು.

ನಾಪತ್ತೆಯಾದವರು 
ಚಂದ್ರಶೇಖರ ಕೋಟ್ಯಾನ್‌, ದಾಮೋದರ ಪಾವಂಜಿಗುಡ್ಡೆಯವರು. ಕುಮಟಾದ ಲಕ್ಷ್ಮಣ ಮತ್ತು ಸತೀಶ್‌, ಭಟ್ಕಳದ ಹರೀಶ್‌ ಮತ್ತು ರಮೇಶ್‌ ಹಾಗೂ ಹೊನ್ನಾವರ ಮಂಕಿಯ ರವಿ ಮನೆಗಳಲ್ಲೂ ಸೂತಕದ ಛಾಯೆ. ಅದೇ ಬೋಟಿನಲ್ಲಿ ದುಡಿಯುತ್ತಿದ್ದ ಭಟ್ಕಳದ ಜೋಗಯ್ಯ ರಜೆಯಲ್ಲಿದ್ದು, ತೆರಳಿರಲಿಲ್ಲ. 

ಪತ್ತೆಗೆ ಮೂರು ದಿನಗಳ ಗಡು
ಉಡುಪಿ:
ನಾಪತ್ತೆಯಾಗಿರುವ 7 ಮಂದಿ ಮೀನುಗಾರರು ಮತ್ತು ದೋಣಿಯನ್ನು ಮೂರು ದಿನದೊಳಗೆ ಪತ್ತೆಹಚ್ಚದಿದ್ದರೆ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಮಲ್ಪೆ ಮೀನುಗಾರರ ಸಂಘ ಎಚ್ಚರಿಕೆ ನೀಡಿದೆ.
ಸಂಘದ ಅಧ್ಯಕ್ಷ ಸತೀಶ್‌ ಕುಂದರ್‌ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ಮೀನುಗಾರರು, ಕೋಸ್ಟ್‌ಗಾರ್ಡ್‌, ನೌಕಾದಳದವರು ಶೋಧ ನಡೆಸಿದ್ದಾರೆ. ಆದರೂ ಪತ್ತೆಯಾಗಿಲ್ಲ. ಸ್ಥಳೀಯ ಶಾಸಕರು ಕೇಂದ್ರ ಸಚಿವ ಸದಾನಂದ ಗೌಡ ಅವರ ಮೂಲಕ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಗಮನ ಸೆಳೆದಿದ್ದಾರೆ. ಮುಖ್ಯಮಂತ್ರಿ ಕೂಡ ಪ್ರಧಾನಿ ಜತೆ ಮಾತುಕತೆ ನಡೆಸಬೇಕು. ಕೇಂದ್ರ ಮತ್ತು ರಾಜ್ಯ ಸರಕಾರಗಳು ಎಲ್ಲ ಇಲಾಖೆಗಳ ಮೂಲಕ ಎಲ್ಲ ವಿಧಾನಗಳಲ್ಲಿಯೂ ಕಾರ್ಯಾಚರಣೆ ನಡೆಸಿ ಮೀನುಗಾರರನ್ನು ಶೀಘ್ರವಾಗಿ ಪತ್ತೆ ಹಚ್ಚಬೇಕು. ಮುಂದಿನ ಹೋರಾಟದ ಕುರಿತು ಚರ್ಚಿಸಲು ಜ. 2ರಂದು ಮಲ್ಪೆಯಲ್ಲಿ ಸಭೆ ನಡೆಯಲಿದೆ. ಅಂದು ಕರಾವಳಿಯಾದ್ಯಂತ ಮೀನುಗಾರಿಕೆಯನ್ನು ಸಂರ್ಪೂಣ ಸ್ಥಗಿತಗೊಳಿಸಿ ಹೋರಾಟದ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

ಗಂಭೀರವಾಗಿ ಪರಿಗಣಿಸಿಲ್ಲವೇಕೆ?
ಬೇರೆ ದುರ್ಘ‌ಟನೆಗಳ ಸಂದರ್ಭ ಸರಕಾರ ವಿಶೇಷ ಗಮನ ಹರಿಸುತ್ತದೆ. ಆದರೆ ಮೀನುಗಾರರು ನಾಪತ್ತೆಯಾಗಿ 16 ದಿನಗಳು ಕಳೆದರೂ ಗಂಭೀರವಾಗಿ ಪರಿಗಣಿಸಿಲ್ಲ. ಅವರ ಕುಟುಂಬಿಕರು ಕಂಗಾಲಾಗಿದ್ದು ಅವರಿಗೆ ಉತ್ತರಿಸುವ ಸ್ಥಿತಿಯಲ್ಲಿ ನಾವಿಲ್ಲ. ನಾಪತ್ತೆಯಾದವರ ಕುರಿತು ಸರಿಯಾದ ಮಾಹಿತಿ ದೊರೆಯದೆ ನಾವು ಕೂಡ ಮೀನುಗಾರಿಕೆಗೆ ತೆರಳುತ್ತಿಲ್ಲ ಎಂದು ಇತರ ಮೀನುಗಾರರು ಹೇಳುತ್ತಿದ್ದಾರೆ ಎಂದು ಮೀನುಗಾರ ಮುಖಂಡರು ಹೇಳಿದರು.

ಮಿಸ್ಡ್ ಕಾಲ್‌ ಸಂದೇಶ
ಡಿ. 15ರ ರಾತ್ರಿ 1 ಗಂಟೆಗೆ ಮೀನುಗಾರರು ಸಂಪರ್ಕ ಕಡಿದುಕೊಂಡಿದ್ದಾರೆ. ಆದರೆ ಡಿ. 16ರ ಮಧ್ಯರಾತ್ರಿ 1 ಗಂಟೆಗೆ ವೇಳೆಗೆ ಆ ಪೈಕಿ ಓರ್ವ ಮೀನುಗಾರರ ಮೊಬೈಲ್‌ಗೆ ಮಿಸ್ಡ್ಕಾಲ್‌ನ ಸಂದೇಶ ರವಾನೆಯಾಗಿರುವುದು ಮಹಾರಾಷ್ಟ್ರ ಸಿಂಧು ದುರ್ಗಾವ್ಯಾಪ್ತಿಯಲ್ಲಿರುವ ಮೊಬೈಲ್‌ ಟವರ್‌ ಒಂದರಲ್ಲಿ ದಾಖಲಾಗಿದೆ ಎಂಬ ಮಾಹಿತಿಗಳು ಲಭ್ಯವಾಗಿವೆ. ಹಾಗಾಗಿ ಈ ಘಟನೆಯ ಬಗ್ಗೆ ಭಾರೀ ಸಂದೇಹಗಳು ವ್ಯಕ್ತವಾಗಿವೆ. ಭಯೋತ್ಪಾದಕರು, ಕಡಲುಗಳ್ಳರು ಅಥವಾ ಡ್ರಗ್ಸ್‌ ಮಾಫಿಯಾದವರು ಬೋಟ್‌ ಅಪಹರಿಸಿರಬಹುದೇ ಎಂಬ ಶಂಕೆಗಳೂ ಇವೆ ಎಂದು ಸತೀಶ್‌ ಕುಂದರ್‌ ಹೇಳಿದರು.
ಪ್ರಧಾನ ಕಾರ್ಯದರ್ಶಿ ಗೋಪಾಲ್‌ ಆರ್‌.ಕೆ., ಉಪಾಧ್ಯಕ್ಷ ನಾಗರಾಜ್‌ ಸುವರ್ಣ, ತಾಂಡೇಲರ ಸಂಘದ ಅಧ್ಯಕ್ಷ ರವಿರಾಜ್‌ ಸುವರ್ಣ, ಯಾಂತ್ರಿಕ ಟ್ರಾಲ್‌ಬೋಟ್‌ ಸೊಸೈಟಿಯ ಮಾಜಿ ಅಧ್ಯಕ್ಷರಾದ ಗುಂಡು ಬಿ. ಅಮೀನ್‌, ರಾಮಚಂದ್ರ ಕುಂದರ್‌, ಇತರ ಪದಾಧಿಕಾರಿಗಳು, ನಾಪತ್ತೆಯಾದ ಮೀನುಗಾರರ ಸಂಬಂಧಿಕರು ಪತ್ರಿಕಾಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.