ಮಲ್ಪೆ : ಕಡಲಿಗಿಂತ ಅಪಾಯಕಾರಿ ಈ ಬಂದರು, 5 ವರ್ಷಗಳಲ್ಲಿ 100ಕ್ಕೂ ಅಧಿಕ ಜೀವಬಲಿ


Team Udayavani, Oct 13, 2022, 9:28 AM IST

ಮಲ್ಪೆ : ಕಡಲಿಗಿಂತ ಅಪಾಯಕಾರಿ ಈ ಬಂದರು, 5 ವರ್ಷಗಳಲ್ಲಿ 100ಕ್ಕೂ ಅಧಿಕ ಜೀವಬಲಿ

ಮಲ್ಪೆ : ದೇಶದ ಅತೀ ದೊಡ್ಡ ಬಂದರುಗಳಲ್ಲಿ ಎರಡನೇ ಸ್ಥಾನದಲ್ಲಿರುವ ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಅಷ್ಟೇ ದೊಡ್ಡ ಪ್ರಮಾಣದಲ್ಲಿ ಹೂಳು ಕೂಡ ತುಂಬಿಕೊಂಡಿರುವುದರಿಂದ ಬೋಟಿನ ಲಂಗರು ಮತ್ತು ಸಂಚಾರಕ್ಕೆ ತೊಂದರೆಯಾಗು ತ್ತಿರುವುದಲ್ಲದೆ ಮೀನುಗಾರರ ಜೀವಗಳನ್ನು ಆಪೋಶನ ತೆಗೆದುಕೊಳ್ಳುವ ಮೂಲಕ ಮರಣ ಮೃದಂಗ ಬಾರಿಸುತ್ತಿದೆ.

7-8 ವರ್ಷ ಗಳಿಂದ ಸಮ ರ್ಪಕವಾಗಿ ಹೂಳೆ ತ್ತದೇ ಇರು ವುದ ರಿಂದ ದಿನದಿಂದ ದಿನಕ್ಕೆ ಸಮಸ್ಯೆ ಗಂಭೀರವಾಗುತ್ತಿದೆ.

ಮರಣ ಗುಂಡಿ
ಮೀನುಗಾರರರಿಗೆ ಸಮುದ್ರ ಕ್ಕಿಂತ ಬಂದರು ಹೆಚ್ಚು ಅಪಾಯ ಕಾರಿ ಎಂದೆನಿಸಿದೆ. ನಿಲ್ಲಿಸಿರುವ ಬೋಟಿ ನಿಂದ ಬೋಟಿಗೆ ದಾಟುವಾಗ ಆಯ ತಪ್ಪಿ ನೀರಿಗೆ ಬಿದ್ದರೆ ಬದುಕಿ ಉಳಿಯುವ ಧೈರ್ಯ ಇಲ್ಲ. ಆಳೆತ್ತರಕ್ಕೆ ಕೆಸರು ತುಂಬಿಕೊಂಡಿರುವುದರಿಂದ ಬಿದ್ದಾತ ದೇಹ ಮೇಲೆ ಬರಲಾರದ ಸ್ಥಿತಿ ಇದೆ. ನಿರಂತರವಾಗಿ ಜೀವ ಹಾನಿಯಾಗುತ್ತಿದ್ದರೂ ಆಡಳಿತ ಮಾತ್ರ ತೆಪ್ಪಗೆ ಕುಳಿತಿದೆ ಎಂದು ಮೀನುಗಾರರು ಆರೋಪಿಸಿದ್ದಾರೆ.

ಎಷ್ಟು ಹೂಳು ತೆರವಾಗಬೇಕು?
1, 2 ಮತ್ತು 3ನೇ ಹಂತದ ಜೆಟ್ಟಿಯಲ್ಲಿ ಹೂಳು ತುಂಬಿಕೊಂಡಿದೆ. ನೀರು ಇಳಿತದ ಸಂದರ್ಭದಲ್ಲಿ ಬೋಟನ್ನು ಒಳಗೆ ತರಲು ಸಾಧ್ಯ ವಾಗುತ್ತಿಲ್ಲ. ಬಾಪುತೋಟ ಪ್ರದೇಶ ದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹೂಳು ತುಂಬಿಕೊಂಡಿದ್ದು, 1 ಮತ್ತು 2ನೇ ಜೆಟ್ಟಿಯಲ್ಲಿ ಮೀನು ಖಾಲಿ ಮಾಡಿ 3ನೇ ಜೆಟ್ಟಿಗೆ ಬೋಟುಗಳು ತೆರಳಲು ಸಾಧ್ಯವಾಗುತ್ತಿಲ್ಲ. ಪ್ರಸ್ತುತ ಮಲ್ಪೆ ಬಂದರಿನಲ್ಲಿ ದೊಡ್ಡ ಗಾತ್ರದ ಬೋಟ್‌ಗಳೇ ಇದ್ದು, ಅವುಗಳ 3 ಮೀಟರ್‌ ಭಾಗ ನೀರಿ ನಲ್ಲಿ ಮುಳು ಗಿ ರು ತ್ತ¤ದೆ. ಮತ್ತೂ ಎರಡೂವರೆ ಮೀ.ನಷ್ಟು ಆಳದ ವರೆಗೆ ಹೂಳೆತ್ತಿದರೆ ಮಾತ್ರ ಸಂಚಾರ ಸುಗಮವಾದೀತು ಎನ್ನುತ್ತಾರೆ ಮೀನುಗಾರರು.

ಅಧಿಕಾರಿಗಳೇ ಜೀವ ಉಳಿಸಿ
ಇಲ್ಲಿ 5 ವರ್ಷಗಳಲ್ಲಿ 100ಕ್ಕೂ ಅಧಿಕ ಮಂದಿ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ತುಂಬಿರುವ ಹೂಳಿನ ಅಡಿಗೆ ಹೋದವರು ಮೇಲೆ ಬರುವ ಸಾಧ್ಯತೆ ಕಡಿಮೆ. ಎರಡು ತಿಂಗಳ ಅವಧಿಯಲ್ಲೇ 8 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಜೆಟ್ಟಿಯಲ್ಲಿ ಕೆಟ್ಟುನಿಂತ ಹಲವಾರು ಬೋಟುಗಳಿವೆ. ಅವುಗಳಿಗೆ ಪರ್ಯಾಯ ವ್ಯವಸ್ಥೆ ಮಾಡುವ ಜತೆಗೆ ಶೀಘ್ರ ಹೂಳೆತ್ತಿದರೆ ಮೀನುಗಾರರ ಪ್ರಾಣ ಉಳಿಸಬಹುದು ಎನ್ನುತ್ತಾರೆ ಮುಳುಗು ತಜ್ಞ ಈಶ್ವರ ಮಲ್ಪೆ. .

ಇಲ್ಲಿ ಸಾಕಷ್ಟು ಅವಘಡಗಳು ಆಗುತ್ತಲೇ ಇವೆ. ಹಲವು ಬಾರಿ ಮನವಿ ಸಲ್ಲಿ ಸ ಲಾ ಗಿ ತ್ತು. ಇದೀಗ ಅನುದಾನ ಬಿಡುಗಡೆಯಾಗಿದೆ. ಅತೀ ಶೀಘ್ರದಲ್ಲಿ ಮೀನುಗಾರರ ಸಮಸ್ಯೆಯನ್ನು ಬಗೆಹರಿಸಬೇಕು.
– ದಯಾನಂದ ಕೆ. ಸುವರ್ಣ, ಅಧ್ಯಕ್ಷರು, ಮಲ್ಪೆ ಮೀನುಗಾರರ ಸಂಘ

ಹೂಳೆತ್ತಲು ಸರಕಾರದ ಅನುಮೋದನೆ ಸಿಕ್ಕಿದೆ. 3 ಕೋ.ರೂ. ಅನುದಾನ ದೊರಕಿದೆ. ಚನೆಲ್‌ ಮತ್ತು 3 ಹಂತದ ಜೆಟ್ಟಿಗಳಲ್ಲಿ ಹೂಳೆತ್ತುವಿಕೆ ನಡೆಯಲಿದೆ. 2 ತಿಂಗಳೊಳಗೆ ಎಲ್ಲ ಪ್ರಕ್ರಿಯೆ ನಡೆದು ಕಾಮಗಾರಿ ಆರಂಭವಾಗಲಿದೆ.
– ಉದಯ ಕುಮಾರ್‌, ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್‌, ಬಂದರು ಇಲಾಖೆ

ಇದನ್ನೂ ಓದಿ : ಒಂದು ದಿನದ ಮಟ್ಟಿಗೆ ಕ್ರೀಡಾ ಅಧಿಕಾರಿಗಳಾದ ಉಭಯ ಜಿಲ್ಲೆಯ ವಿದ್ಯಾರ್ಥಿಗಳು

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.