ಇನ್ನು ಮಲ್ಪೆ ಬಂದರು ತಂಬಾಕು ಮುಕ್ತ 


Team Udayavani, Dec 16, 2017, 4:05 PM IST

16-34.jpg

ಮಲ್ಪೆ: ಮಲ್ಪೆ ಮೀನುಗಾರಿಕಾ ಬಂದರಿನೊಳಗೆ ಇನ್ನು ಮುಂದೆ ಯಾರೂ ಗುಟ್ಕಾ, ಪಾನ್‌ ಜಗಿಯುವಂತಿಲ್ಲ, ಉಗಿಯುವಂತಿಲ್ಲ, ಸಿಗರೇಟು ಸೇದುವಂತಿಲ್ಲ. ಕಾರಣ ಇನ್ನು ಮುಂದೆ  ಮಲ್ಪೆ ಬಂದರು ತಂಬಾಕು ಮುಕ್ತ ಬಂದರು ಆಗಿ ಬದಲಾಗಲಿದೆ.

ಇದು ಸರಕಾರ ಮಾಡಿದ ಕಾನೂನಲ್ಲ. ಬದಲಾಗಿ ಮೀನುಗಾರರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂಬ ಕಾರಣಕ್ಕೆ ಮತ್ತು ಬಂದರನ್ನು ಸ್ವತ್ಛವಾಗಿಡುವ ನಿಟ್ಟಿನಲ್ಲಿ ಮಲ್ಪೆ ಮೀನುಗಾರ ಸಂಘ ಈ ನಿರ್ಧಾರವನ್ನು ಕೈಗೊಂಡಿದೆ.
ಗುಟ್ಕಾ ಚಟಕ್ಕೆ ವಯಸ್ಸಿನ ಭೇದ ಇಲ್ಲ. ಬಂದರಿನಲ್ಲಿ ಹಲವರು ಚಟಕ್ಕೆ ಬಿದ್ದು ಗುಟ್ಕಾ ತಿಂದು ಕಂಡಲ್ಲಿ ರೂಢಿಯಾಗಿದೆ. ಬೋಟಿನಿಂದ ಮೀನು ವಿಲೇವಾರಿ ಮಾಡುವ ವೇಳೆ ಮೀನುಗಳ ಮೇಲೆ ಉಗಿಯುವುದು, ಅದರ ಪ್ಯಾಕೆಟ್‌ ಅನ್ನು ಕಂಡಲ್ಲಿ ಬಿಸಾಕಿ ಪರಿಸರ ಮಾಲಿನ್ಯವಾಗುತ್ತಿದೆ.  

ಈ ಸಂಬಂಧ ಬಂದರು ಆವರಣವನ್ನು ತಂಬಾಕು ಮುಕ್ತ ವಲಯವನ್ನಾಗಿ ಘೋಷಿಸಲಾಗುತ್ತಿದೆ. ಪೂರಕವಾಗಿ ತಂಬಾಕು ಸೇವನೆ ಮತ್ತು ಉತ್ಪನ್ನಗಳ ಮಾರಾಟವನ್ನು ನಿಷೇಧಿಸಲಾಗಿದೆ. ಬಂದರು ಆವರಣದ ಹೊರಗಿನ ಅಂಗಡಿಗಳಲ್ಲೂ ತಂಬಾಕು ಮಾರಾಟ ಮಾಡದಂತೆ ಸೂಚನೆ ನೀಡಲಾಗಿದೆ.  

ನಿರ್ಬಂಧದ ಹೆದರಿಕೆ 
ಭಾರತದಿಂದ ವರ್ಷಕ್ಕೆ 36 ಸಾವಿರ ಕೋಟಿ ರೂ.ಗಳಷ್ಟು ಮೌಲ್ಯದ ಮೀನು, ಮೀನಿನ ಉತ್ಪನ್ನಗಳು ವಿದೇಶಕ್ಕೆ ರಫ್ತಾಗುತ್ತವೆ. ಅದರಲ್ಲೂ ಹೆಚ್ಚಾಗಿ ಐರೋಪ್ಯ ಒಕ್ಕೂಟಕ್ಕೆ ಮೀನು ರಫ್ತಾಗುತ್ತದೆ. ಅಲ್ಲಿನ ತಂಡ ಬಂದರು ಸ್ವತ್ಛತೆ, ಗುಣಮಟ್ಟ ಪರಿಶೀಲನೆ ನಡೆಸುತ್ತದೆ. ಈ ವೇಳೆ ಅಶುಚಿತ್ವ ಕಂಡರೆ ಮೀನು ರಫ್ತಿಗೆ ನಿರ್ಬಂಧ ಹೇರುವ ಸಾಧ್ಯತೆಯೂ ಇದೆ ಎನ್ನುವ ಹೆದರಿಕೆಯೂ ಇದೆ.  

ಈಗಾಗಲೇ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ಮತ್ತು ಮಾರಾಟವನ್ನು ನಿಷೇಧಿಸಿದ್ದೇವೆ. ಮುಂದೆ ಇದನ್ನು ಕಟ್ಟುನಿಟ್ಟಾಗಿ ಜಾರಿಗೆ ತರುತ್ತೇವೆ. ತಂಬಾಕಿನ ಕೆಟ್ಟ ಪರಿಣಾಮದ ಬಗ್ಗೆ ಜನರಿಗೆ ಅರಿವು ಮೂಡಿಸಲು ಜನಜಾಗೃತಿ ಅಭಿಯಾನ ಕೈಗೊಂಡಿದ್ದೇವೆ.  
ಸತೀಶ್‌ ಕುಂದರ್‌, ಅಧ್ಯಕ್ಷರು ಮಲ್ಪೆ ಮೀನುಗಾರ ಸಂಘ

ಮೀನುಗಾರಿಕಾ ಬಂದರಿನಲ್ಲಿ ತಂಬಾಕು, ಗುಟ್ಕಾ ನಿಷೇಧ ಮಾಡಿರುವುದು ಉತ್ತಮ ಕ್ರಮ. ನಮ್ಮ ವ್ಯಾಪಾರಕ್ಕೆ ಹೊಡೆತ ಉಂಟಾದರೂ ಮೀನುಗಾರ ಸಂಘ ಮತ್ತು ಇಲಾಖೆಯ ಈ ಆದೇಶಕ್ಕೆ ತಲೆಬಾಗಿ ಅಧಿಕೃತ ಅಂಗಡಿಗಳಲ್ಲಿ ಮಾರಾಟ ನಿಷೇಧಿಸಲಾಗಿದೆ. ಆದರೂ ಕಾಳಸಂತೆಯಲ್ಲಿ ತಂಬಾಕು ಮಾರಾಟವಾಗುತ್ತಿವೆ. ಈ ಬಗ್ಗೆ ಸಂಘ ಕ್ರಮ ತೆಗೆದುಕೊಳ್ಳಬೇಕು.  
ಅಶೋಕ್‌ ಎಸ್‌. ಸುವರ್ಣ, ಅಧ್ಯಕ್ಷರು, ಗಾಡಿ ಅಂಗಡಿ ವ್ಯಾಪಾರಸ್ಥರ ಸಂಘ

ನಟರಾಜ್‌ ಮಲ್ಪೆ

ಟಾಪ್ ನ್ಯೂಸ್

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.