ಮಲ್ಪೆ ಬಂದರು: ಡ್ರೆಜ್ಜಿಂಗ್ ಕಾಮಗಾರಿ ನಡೆಸದಿದ್ದರೆ ಪ್ರತಿಭಟನೆ
Team Udayavani, Sep 11, 2017, 8:35 AM IST
ಮಲ್ಪೆ: ಬಂದರಿನ 2ನೇ ಹಂತದ ಮೀನುಗಾರಿಕಾ ಜೆಟ್ಟಿ ಬೇಸಿನ್ನಲ್ಲಿ ಅನೇಕ ವರ್ಷಗಳಿಂದ ಹೂಳು ತುಂಬಿಕೊಂಡಿದ್ದರೂ ಇದುವರೆಗೂ ಡ್ರೆಜ್ಜಿಂಗ್ ಕಾಮಗಾರಿ ನಡೆಸಿಲ್ಲ. ಇದರಿಂದ ಮೀನುಗಾರಿಕಾ ಬೋಟ್ಗಳಿಗೆ ಬಂದರು ಒಳ ಪ್ರವೇಶಕ್ಕೆ ತೊಂದರೆಯಗುತ್ತಿರುವುದಲ್ಲದೆ, ನೂರಾರು ಮೀನುಗಾರರ ಸಾವಿಗೂ ಇದು ಕಾರಣವಾಗುತ್ತಿದೆ. ತತ್ಕ್ಷಣ ಡ್ರೆಜ್ಜಿಂಗ್ ಕಾಮಗಾರಿಯನ್ನು ನಡೆಸುವಂತೆ ಮೀನುಗಾರ ಮುಖಂಡರುಗಳು ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಸಿ.ಕೆ. ಮೂರ್ತಿ ಅವರಲ್ಲಿ ಆಗ್ರಹಿಸಿದ್ದಾರೆ.
ಮಲ್ಪೆ ಬಂದರಿಗೆ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಬಂದರಿನ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಅತೀ ಶೀಘ್ರ ಪರಿಹಾರ ಕಲ್ಪಿಸುವಂತೆ ಅವರು ಮನವಿ ಮಾಡಿದರು.
ಬಂದರಿನ ಬೇಸಿನ್ನಲ್ಲಿ 5-6 ಮೀಟರ್ನಷ್ಟು ಕೆಸರು ತುಂಬಿ ಕೊಂಡಿದ್ದು ಬೋಟಿನಿಂದ ಕಾಲುಜಾರಿ ನೀರಿಗೆ ಬಿದ್ದ ಸಂದರ್ಭದಲ್ಲಿ ಕೆಸರಲ್ಲಿ ಸಿಲುಕಿ ಮೇಲೆ ಬರಲಾಗದೆ ಅನೇಕ ಮೀನುಗಾರರು ಈಗಾಗಲೇ ಸಾವನ್ನಪ್ಪಿದ್ದಾರೆ.
ಮಾತ್ರವಲ್ಲದೆ ಬೋಟುಗಳು ಕೆಸರಿನಲ್ಲಿ ಹೂತು ಹಾನಿಗೊಳಗಾಗು ತ್ತಿವೆ. ಸೆ. 15ರಿಂದ ಹೂಳು ತೆಗೆಯುವ ಬಗ್ಗೆ ಭರವಸೆಯನ್ನು ಮೀನುಗಾರಿಕಾ ಇಲಾಖೆ ನೀಡಿದೆಯಾದರೂ ಇಂತಹ ಭರವಸೆಗಳನ್ನು ಈ ಹಿಂದೆಯೂ ಹಲ ವಾರು ಬಾರಿ ನೀಡಿದ್ದಾರೆ. ನಮಗೆ ಈ ವಿಷಯದಲ್ಲಿ ವಿಶ್ವಾಸ ಇಲ್ಲವೆಂದು ಆರೋಪಿಸಿದ ಆವರು ಸೆ. 15ರ ಒಳಗೆ ಡ್ರೆಜ್ಜಿಂಗ್ ಕಾಮಗಾರಿಯನ್ನು ಆರಂಭಿಸದಿದ್ದಲ್ಲಿ ಪ್ರತಿಭಟನೆ ನಡೆಸು ವುದೇ ಅನಿವಾರ್ಯವಾಗುತ್ತದೆ ಎಂದು ಅಧಿಕಾರಿಯವರಲ್ಲಿ ಎಚ್ಚರಿಸಿದ್ದಾರೆ.
ಡೀಪ್ಸೀ ಟ್ರಾಲ್ಬೋಟ್ ಮೀನು ಗಾರ ಸಂಘದ ಅಧ್ಯಕ್ಷ ಕಿಶೋರ್ ಡಿ. ಸುವರ್ಣ, ಪ್ರಮುಖರಾದ ಗೋಪಾಲ ಆರ್.ಕೆ., ಗೋಪಾಲ ಕುಂದರ್, ಕಿಶೋರ್ ಪಡುಕರೆ, ವಾಸುದೇವ ಸಾಲ್ಯಾನ್, ದಯಾನಂದ ಕೆ. ಸುವರ್ಣ, ನಾರಾಯಣ ಕರ್ಕೇರ, ದಯಾನಂದ ಕುಂದರ್, ರಾಜೇಂದ್ರ ಸುವರ್ಣ, ಕೃಷ್ಣ ಜಿ. ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ