ಮಲ್ಪೆ: ನಾಲ್ಕನೇ ಹಂತದ ಮೀನುಗಾರಿಕಾ ಬಂದರು ಯೋಜನೆ


Team Udayavani, Jan 25, 2019, 12:50 AM IST

malpe.jpg

ಉಡುಪಿ: ಮಲ್ಪೆಯ ಮೀನುಗಾರಿಕಾ ಬಂದರಿನಲ್ಲಿ ಯಾಂತ್ರೀಕೃತ ಬೋಟುಗಳ ಸಂಖ್ಯೆ ಹೆಚ್ಚುತ್ತಿದ್ದು, ನಾಲ್ಕನೇ ಹಂತದ ಯೋಜನೆಗೆ ಹಳೇ ಮೀನುಗಾರಿಕಾ ಬಂದರು ಸಮೀಪ ಜಾಗ ಗುರುತಿಸಲಾಗಿದೆ. ಈ ಬಗ್ಗೆ ಮೀನುಗಾರಿಕಾ ಇಲಾಖೆಯು ಬಂದರು ಇಲಾಖೆಗೆ ಪ್ರಸ್ತಾವನೆಯನ್ನೂ ಸಲ್ಲಿಸಿದೆ. ಬಂದರು ಇಲಾಖೆಯ ಅನುಮೋದನೆ ಮಾತ್ರ ಬಾಕಿಯಿದೆ. ರಾಜ್ಯ ಮತ್ತು ಕೇಂದ್ರ ಸರಕಾರಗಳ ಜಂಟಿ ಸಹಭಾಗಿತ್ವದಲ್ಲಿ ಸುಮಾರು 10 ಕೋ.ರೂ. ವೆಚ್ಚದ ಯೋಜನೆ ಇದಾಗಿದೆ. 

ಈ ಹಿಂದೆ ಪಡುಕೆರೆಯಲ್ಲಿ 4ನೇ ಹಂತದ ಯೋಜನೆ ರೂಪಿಸಲು ತೀರ್ಮಾನಿಸಲಾಗಿತ್ತು. ಆದರೆ ಸಣ್ಣ ಪ್ರಮಾಣದ (ನಾಡದೋಣಿ) ಮೀನುಗಾರಿಕೆ ನಡೆಸುವವರಿಗೆ ಇದರಿಂದ ತೊಂದರೆಯಾಗುತ್ತದೆ ಎನ್ನುವ ಕಾರಣಕ್ಕೆ ಆ ಪ್ರಸ್ತಾವವನ್ನು ಕೈಬಿಡಲಾಗಿದೆ. ಜಟ್ಟಿ ನಿರ್ಮಾಣವಾಗಿ ದೊಡ್ಡ ಗಾತ್ರದ ಯಾಂತ್ರೀಕೃತ ಬೋಟುಗಳು ನಿಲುಗಡೆಯಾದರೆ ಮೀನುಗಾರಿಕೆಗೆ ಅನನುಕೂಲವಾಗುತ್ತದೆ ಎಂದು ಸ್ಥಳೀಯರು ವಿರೋಧಿಸಿದ್ದರು.

ಮಲ್ಪೆಯಲ್ಲಿರುವ 1, 2 ಮತ್ತು 3ನೇ ಹಂತದಲ್ಲಿ ಬೋಟುಗಳು ನಿಲುಗಡೆಯಾಗುತ್ತಿದ್ದು, ಯಾಂತ್ರೀಕೃತ ಬೋಟುಗಳ ಸಂಖ್ಯೆಯ ಹೆಚ್ಚಳದಿಂದಾಗಿ 4ನೇ ಹಂತದ ಯೋಜನೆ ಅಗತ್ಯವಾಗಿದೆ.

ಪ್ರಸ್ತುತ ಬಂದರಿನಲ್ಲಿ 2100 ಯಾಂತ್ರೀ ಕೃತ ಬೊಟುಗಳಿದ್ದು, ಆಳಸಮುದ್ರದಲ್ಲಿ ಕಾರ್ಯಾಚರಿಸುವ 1,100 ಬೋಟು ಗಳಿವೆ. 150 ಪರ್ಸಿನ್‌ ಸಹಿತ ಇತರ 800 ಯಾಂತ್ರೀಕೃತ ಬೋಟುಗಳು ಇಲ್ಲಿವೆ.

ಪ್ರಥಮ ಹಾಗೂ ಎರಡನೇ ಹಂತದಲ್ಲಿ 800 ಬೋಟುಗಳು ನಿಲುಗಡೆ ಸಾಮರ್ಥ್ಯ ಹೊಂದಿದ್ದು, 3ನೇ ಹಂತದಲ್ಲಿ 600 ಬೋಟುಗಳು ನಿಲುಗಡೆಯಾಗಬಹುದು. ನಾಲ್ಕನೆಯ ಹಂತದ ಯೋಜನೆಯಲ್ಲಿ 400 ಬೋಟುಗಳು ನಿಲುಗಡೆಗೊಳ್ಳಬಹುದು. ಇದರಿಂದ ಈಗಾಗಲೇ ಸ್ಥಳಾಭಾವದಿಂದ ಉಂಟಾಗುತ್ತಿದ್ದ ಅನೇಕ ರೀತಿಯ ಸಮಸ್ಯೆಗಳು ನಿವಾರಣೆಯಾಗುತ್ತದೆ. 

ಕೆಲವೊಂದು ಬಾರಿ ಹವಾಮಾನ ವೈಪರೀತ್ಯ ಉಂಟಾದಾಗ ಇತರ ಭಾಗದ ಬೋಟುಗಳು ಕೂಡ ಇಲ್ಲಿಗೆ ಬಂದು ಲಂಗರು ಹಾಕುವ ಪ್ರಮೇಯವೂ ಇದೆ. ಇದರಿಂದ ಇಲ್ಲಿ ಬೋಟುಗಳ ದಟ್ಟನೆಯೂ ಉಂಟಾಗುತ್ತದೆ. ನಾಲ್ಕನೆಯ ಹಂತದ ಯೋಜನೆ ಪ್ರಾರಂಭಗೊಂಡರೆ ಸುಮಾರು 400ರಷ್ಟು ಬೋಟುಗಳನ್ನು ನಿಲುಗಡೆ ಮಾಡಬಹುದು.
– ಪಾರ್ಶ್ವನಾಥ, ಮೀನುಗಾರಿಕೆ ಇಲಾಖೆ ಉಪನಿರ್ದೇಶಕರು, ಉಡುಪಿ ಜಿಲ್ಲೆ 

ನಾಲ್ಕನೇ ಹಂತದ ಯೋಜನೆಯಲ್ಲಿ ಸುಮಾರು 400ರಿಂದ 500ರಷ್ಟು ಬೋಟುಗಳು ನಿಲುಗಡೆಗೆ ಅವಕಾಶ ಲಭಿಸಲಿದ್ದು, ಮೀನುಗಾರರಿಗೆ ಅನುಕೂಲವಾಗಲಿದೆ.
-ಸತೀಶ್‌ ಕುಂದರ್‌,  ಮಲ್ಪೆ ಮೀನುಗಾರಿಕಾ ಸಂಘದ ಅಧ್ಯಕ್ಷ. 

ಟಾಪ್ ನ್ಯೂಸ್

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಾಚಾರಿ ಸಾವು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಾಚಾರಿ ಸಾವು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.