ಉಡುಪಿ ಮಾಸ್ಟರ್ ಪ್ಲಾನ್: ಡಿಸಿ ಸೂಚನೆ
Team Udayavani, May 10, 2019, 6:15 AM IST
ಉಡುಪಿ: ಉಡುಪಿ ನಗರ ಸೇರಿದಂತೆ ಸುತ್ತ ಮುತ್ತಲ 19 ಗ್ರಾಮಗಳನ್ನು ಸೇರಿಸಿ ಮಾಸ್ಟರ್ ಪ್ಲಾನ್ ತಯಾರಿಸುವ ಸಂಬಂಧ ಸಮಾಜದ ವಿವಿಧ ಕ್ಷೇತ್ರಗಳ ಪರಿಣಿತರೊಂದಿಗೆ ಚರ್ಚಿಸಿ ಯೋಜನೆ ತಯಾರಿಸಲು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚಿಸಿದ್ದಾರೆ.
ಅವರು ಗುರುವಾರ ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಗರದ ಸರ್ವತೋಮುಖ ಬೆಳವಣಿಗೆಗೆ ದೂರ ದೃಷ್ಟಿಯುಳ್ಳ ಮಾಸ್ಟರ್ ಪ್ಲಾನ್ ತಯಾರಿಸಬೇಕಿದೆ. ಮೂಲ ಸೌಕರ್ಯ, ಸಾರಿಗೆ, ಸಂಚಾರ ವ್ಯವಸ್ಥೆ
ಸೇರಿದಂತೆ ಎಲ್ಲ ಆಯಾಮಗಳಲ್ಲೂ ಜನಸ್ನೇಹಿ ಅಭಿವೃದ್ಧಿಗೆ ಈ ಮಾಸ್ಟರ್ ಪ್ಲಾನ್ ಮುನ್ನುಡಿಯಾಗ ಲಿದೆ ಎಂದು ಅವರು ಹೇಳಿದರು.
ಮಾಸ್ಟರ್ ಪ್ಲಾನ್ ಮೊದಲ ಹಂತವಾಗಿ ದತ್ತಾಂಶ ಮತ್ತು ಸಾಂಖೀÂಕ ಮಾಹಿತಿ, ಸಾಮಾಜಿಕ ಅಂಕಿ ಅಂಶಗಳ ವಿವರಗಳನ್ನು ಸಂಗ್ರಹಿಸಲಾಗುವುದು. ಈ ಅಂಕಿಅಂಶಗಳನ್ನು ಆಧರಿಸಿ ಮಾಸ್ಟರ್ ಪ್ಲಾನ್ ವ್ಯವಸ್ಥಿತ ರೂಪ ನೀಡಲಾಗುವುದು ಎಂದರು.
ನಗರದ ವ್ಯವಸ್ಥಿತ ಬೆಳವಣಿಗೆ ದೃಷ್ಟಿಯಿಂದ ಎಂಜಿನಿಯರ್ಗಳು, ಆರ್ಕಿಟೆಕ್ಟ್ಗಳು, ವೈದ್ಯಕೀಯ ಕ್ಷೇತ್ರದ ಗಣ್ಯರು ಸೇರಿದಂತೆ ವಿವಿಧ ಕ್ಷೇತ್ರಗಳ ಪರಿಣಿತರನ್ನು ಸಂಪರ್ಕಿಸಿ ಮಾಹಿತಿ ಪಡೆಯಲು ಅವರು ತಿಳಿಸಿದರು.
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮುಹಮ್ಮದ್ ನಝೀರ್ ಮಾತನಾಡಿ ಕುಡಿಯುವ ನೀರು, ಸ್ವತ್ಛತೆ, ರಸ್ತೆ, ವಸತಿ, ವಿದ್ಯುತ್ ಸೌಲಭ್ಯಗಳ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ಆದ್ಯತೆ ನೀಡಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್