Udupi: ನೇಣು ಬಿಗಿದು ಆತ್ಮಹತ್ಯೆ
Team Udayavani, Mar 28, 2024, 8:13 PM IST
ಉಡುಪಿ: ವ್ಯಕ್ತಿಯೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ದೊಡ್ಡಣಗುಡ್ಡೆಯ ಬಳಿ ಇರುವ ಕರ್ನಾಟಕ ಹೌಸಿಂಗ್ ಬೋರ್ಡ್ ಮನೆಯಲ್ಲಿ ವಾಸವಾಗಿರುವ ರಾಜೇಶ್ ಅವರು ಮಾ. 26ರಂದು ಕುಟುಂಬದವರೊಂದಿಗೆ ರಾತ್ರಿ ಊಟ ಮಾಡಿ ಹಾಲ್ನಲ್ಲಿ ಕುಳಿತಿದ್ದರು. ರಾತ್ರಿ 1.30ರ ಸುಮಾರಿಗೆ ಮನೆಯ ಕಾಂಪೌಂಡ್ ಪಕ್ಕದಲ್ಲಿದ್ದ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿದ್ದವರನ್ನು ಕೂಡಲೇ ಬಾಳಿಗಾ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು.
ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲು ಮಾಡಿದ್ದು, ಚಿಕಿತ್ಸೆಯಲ್ಲಿರುವಾಗ ಮಾ. 28ರಂದು ಮೃತಪಟ್ಟಿದ್ದಾರೆ ಎಂದು ಮೃತರ ಪುತ್ರ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ