ಮಣಿಪಾಲ: ಅಣ್ಣನನ್ನೇ ಕತ್ತಿಯಿಂದ ಕಡಿದು ಕೊಲೆ ಮಾಡಿದ ತಮ್ಮ!
Team Udayavani, Mar 18, 2022, 2:26 PM IST
ಉಡುಪಿ: ಮನೆಯ ವಾಸ್ತವ್ಯದ ವಿಚಾರದಲ್ಲಿ ಸಹೋದರರ ನಡುವೆ ಗಲಾಟೆ ನಡೆದು ತಮ್ಮನೇ ಅಣ್ಣನನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಘಟನೆ ಉಡುಪಿ ತಾಲೂಕಿನ 80 ಬಡಗುಬೆಟ್ಟು ಗ್ರಾಮದ ಕಬ್ಯಾಡಿ ಕಂಬಳಕಟ್ಟ ಎಂಬಲ್ಲಿ ನಡೆದಿದೆ.
ಕಬ್ಯಾಡಿ ಕಂಬಳಕಟ್ಟ ನಿವಾಸಿ 43 ವರ್ಷದ ಬಾಲಕೃಷ್ಣ ನಾಯ್ಕ್ ಕೊಲೆಯಾದವರು. ಮಾ.16ರಂದು ಸಂಜೆ 6.30ಕ್ಕೆ ಬಾಲಕೃಷ್ಣ ಹಾಗೂ ಅವರ ಸಹೋದರ ದಯಾನಂದ ಎಂಬವರ ನಡುವೆ ಮನೆಯ ವಾಸ್ತವ್ಯದ ವಿಚಾರದಲ್ಲಿ ಗಲಾಟೆಯಾಗಿದೆ. ಇದೇ ದ್ವೇಷದಿಂದ ದಯಾನಂದ ಮನೆಯಲ್ಲಿದ್ದ ಕತ್ತಿಯಿಂದ ಬಾಲಕೃಷ್ಣ ಅವರ ತಲೆಗೆ ಹಲ್ಲೆ ಮಾಡಿದ್ದಾನೆ. ಇದರಿಂದ ಬಾಲಕೃಷ್ಣ ಅವರ ತಲೆಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತ ಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ:‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ‘ವೈ’ ಕೆಟಗರಿ ಭದ್ರತೆ
ಘಟನಾ ಸ್ಥಳಕ್ಕೆ ಮಣಿಪಾಲ ಠಾಣಾ ನಿರೀಕ್ಷಕ ಮಂಜುನಾಥ್, ಠಾಣಾಧಿಕಾರಿಗಳಾದ ರಾಜಶೇಖರ್ ಹೊಂದಾಳೆ, ಸುಧಾಕರ ತೋನ್ಸೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಶವವನ್ನು ವೈದ್ಯಕೀಯ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಲು ಉಚಿತ ಆಂಬುಲೆನ್ಸ್ ಸೇವೆ ಒದಗಿಸಿ ಇಲಾಖೆಗೆ ಸಹಕರಿಸಿದರು.
ಈ ಬಗ್ಗೆ ನಿತ್ಯಾನಂದ ನಾಯ್ಕ ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ