ಪಡುಬಿದ್ರಿ: ಆಸ್ಪತ್ರೆಗೆಂದು ಹೋದ ವ್ಯಕ್ತಿ ನಾಪತ್ತೆ, ಪತ್ತೆಗೆ ಮನವಿ
Team Udayavani, Jan 1, 2023, 11:47 PM IST
ಪಡುಬಿದ್ರಿ : ಬಡಾ ಎರ್ಮಾಳು ಗ್ರಾಮದ ಪೆಟ್ರೋಲ್ ಬಂಕ್ನಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡಿಕೊಂಡಿದ್ದ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕು ಬಜೆಗುಂಡಿ ಗ್ರಾಮ ನಿವಾಸಿ ದಿನೇಶ ಎಸ್. (56) ಆಸ್ಪತ್ರೆಗೆಂದು ಹೋದವರು ವಾಪಸು ಬಾರದೆ ನಾಪತ್ತೆಯಾಗಿದ್ದಾರೆ.
5 ಅಡಿ 7 ಇಂಚು ಎತ್ತರ, ಸಾಮಾನ್ಯ ಶರೀರ, ಎಣ್ಣೆಕಪ್ಪು ಮೈ ಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಅವರ ಬಗ್ಗೆ ಮಾಹಿತಿ ದೊರೆತಲ್ಲಿ ಪಡುಬಿದ್ರಿ ಪೊಲೀಸ್ ಠಾಣೆ ಉಪನಿರೀಕ್ಷಕರು ದೂ.ಸಂಖ್ಯೆ (0820-2555452, ಮೊ.ನಂ: 9480805450) ಅಥವಾ ಪೊಲೀಸ್ ಕಂಟ್ರೋಲ್ ರೂಂ (0820-2525444) ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪಡುಬಿದ್ರಿ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.