ಮಲ್ಪೆ: ಚಲಿಸುತ್ತಿದ್ದ ಸ್ಕೂಟರ್ನಲ್ಲೇ ಹೃದಯಾಘಾತವಾಗಿ ವ್ಯಕ್ತಿ ಸಾವು
Team Udayavani, May 19, 2022, 8:01 PM IST
ಮಲ್ಪೆ: ಮೀನುಗಾರಿಕೆ ಮುಗಿಸಿಕೊಂಡು ಸ್ಕೂಟರ್ನಲ್ಲಿ ಹಿಂಬದಿ ಸವಾರನಾಗಿ ಮನೆಗೆ ತೆರಳುತ್ತಿದ್ದ ವೇಳೆ ಹೃದಯಾಘಾತವಾಗಿ ಮೀನುಗಾರನೋರ್ವ ಮೃತಪಟ್ಟ ಘಟನೆ ಮಲ್ಪೆ ಕಂಬಳತೋಟ ಎಂಬಲ್ಲಿ ಮೇ 18ರಂದು ಸಂಭವಿಸಿದೆ.
ಮಲ್ಪೆ ಕಂಬಳತೋಟ ನಿವಾಸಿ ಪ್ರತಾಪ್ (32) ಮೃತಪಟ್ಟ ಮೀನುಗಾರ.
ಬೆಳಗ್ಗೆ ಮೀನುಗಾರಿಕೆ ಮುಗಿಸಿಕೊಂಡು ಅಕ್ಕನ ಮಗ ಕಿರಣ್ ಅವರ ಸ್ಕೂಟರ್ನಲ್ಲಿ ಹಿಂಬದಿ ಸವಾರನಾಗಿ ಮನೆಗೆ ಹೋಗುತ್ತಿದ್ದರು. ಈ ವೇಳೆ ಪ್ರತಾಪ್ ದಿಢೀರ್ ಅಸ್ವಸ್ಥಗೊಂಡು ಕಿರಣ್ ಮೈಮೇಲೆ ಬಿದ್ದಿದ್ದರು. ತತ್ಕ್ಷಣವೇ ಕಲ್ಯಾಣಪುರ ಗೊರಟ್ಟಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಹೆಚ್ಚಿನ ಚಿಕಿತ್ಸೆಗೆ ಉಡುಪಿ ಹೈಟೆಕ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ಪರೀಕ್ಷಿಸಿದ ವೈದ್ಯರು ಪ್ರತಾಪ್ ಅದಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ