ಮಹಿಳೆಯ ಕೊಲೆ ಅಪರಾಧಿಗೆ ಜೀವನ ಪರ್ಯಂತ ಜೈಲು ಶಿಕ್ಷೆ


Team Udayavani, Mar 27, 2018, 9:00 AM IST

Afzal-26-3.jpg

ಕುಂದಾಪುರ: ನಗರದ ವಸತಿ ಗೃಹದಲ್ಲಿ 3 ವರ್ಷಗಳ ಹಿಂದೆ ಗಂಗೊಳ್ಳಿ ಮೂಲದ ಮಹಿಳೆಯನ್ನು ಕೊಂದು, ಚಿನ್ನಾಭರಣ ದೋಚಿದ ಪ್ರಕರಣದ ಅಪರಾಧಿ, ಮುಂಬಯಿ ಮೂಲದ ಅಫ್ಜಲ್‌ ಅಲಿಯಾಸ್‌ ಅಫ್ಜಲ್‌ ಖಾನ್‌ (42)ಗೆ ಉಸಿರು ಇರುವವರೆಗೆ (ಜೀವನ ಪರ್ಯಂತ ) ಜೀವಾವಧಿ ಶಿಕ್ಷೆ ವಿಧಿಸಿ ಸೋಮವಾರ ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಪ್ರಕರಣದ ವಿಚಾರಣೆ ಮಾ. 20ಕ್ಕೆ ಮುಗಿದಿದ್ದು, ಅಫ್ಜಲ್‌ ಖಾನ್‌ ದೋಷಿಯೆಂದು ಸಾಬೀತಾಗಿತ್ತು. ಕಾರವಾರ ಜೈಲಿನಲ್ಲಿದ್ದ ಅಪರಾಧಿಯನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಪ್ರಕಾಶ್‌ ಖಂಡೇರಿ ಅವರು ತೀರ್ಪು ಪ್ರಕಟಿಸಿದ್ದಾರೆ.

ಶಿಕ್ಷೆಗಳ ವಿವರ
ಸೆಕ್ಷನ್‌ 302ರಡಿ ಮಹಿಳೆ ಕೊಲೆ ಆರೋಪಕ್ಕೆ ಸಾಯುವವರೆಗೂ ಜೀವಾವಧಿ ಶಿಕ್ಷೆ ಹಾಗೂ 50 ಸಾ.ರೂ. ದಂಡ, ಸೆಕ್ಷನ್‌ 404ರಡಿ ಮೃತದೇಹದ ಮೇಲಿದ್ದ ಚಿನ್ನಾಭರಣ ಸುಲಿಗೆಗೆ 5 ವರ್ಷ ಸಜೆ, 20 ಸಾ.ರೂ. ದಂಡ, ಮೋಸ ಮಾಡುವ ಉದ್ದೇಶದಿಂದ ಡೆತ್‌ನೋಟ್‌ ಸೃಷ್ಟಿಗೆ ಸೆಕ್ಷನ್‌ 468ರಡಿ 5 ವರ್ಷ ಕಠಿನ ಸಜೆ, 20 ಸಾ. ರೂ. ದಂಡ, ಸೆಕ್ಷನ್‌ 417ರಡಿ ಮೋಸದಿಂದ ಲಾಡ್ಜ್ಗೆ ಕರೆಸಿದ್ದಕ್ಕೆ 1 ವರ್ಷ ಕಠಿನ ಸಜೆ ಹಾಗೂ 5 ಸಾ.ರೂ. ದಂಡ, ಸೆಕ್ಷನ್‌ 465ರಡಿ ನಕಲಿ ಡೆತ್‌ನೋಟ್‌ಗೆ 1 ವರ್ಷ ಕಠಿನ ಸಜೆ, 5 ಸಾ.ರೂ. ದಂಡ ವಿಧಿಸಲಾಗಿದೆ. ಮೃತರ ಕುಟುಂಬದವರು  ಕಾನೂನು ಸೇವಾ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿ ಪರಿಹಾರ ಪಡೆದುಕೊಳ್ಳಬಹುದು ಎಂದು ನ್ಯಾಯಾಧೀಶರು ತೀರ್ಪಿನಲ್ಲಿ ಉಲ್ಲೇಖೀಸಿದ್ದಾರೆ. 

25 ಸಾಂದರ್ಭಿಕ ಸಾಕ್ಷಿ 
ಪ್ರಕರಣ ನಡೆದ ಕೆಲವು ದಿನಗಳ ಬಳಿಕ ಆತನನ್ನು ಆಗಿನ ವೃತ್ತ ನಿರೀಕ್ಷಕ ಪಿ.ಎಂ. ದಿವಾಕರ್‌ ನೇತೃತ್ವದ ಕುಂದಾಪುರ ಪೊಲೀಸರ ತಂಡ ಮುಂಬಯಿಯಲ್ಲಿ ಬಂಧಿಸಿತ್ತು. ತನಿಖೆ ನಡೆಸಿದ ದಿವಾಕರ್‌  ಕುಂದಾಪುರದ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿದ್ದರು. ಪ್ರಕರಣದಲ್ಲಿ 45 ಸಾಂದರ್ಭಿಕ ಸಾಕ್ಷಿಗಳಿದ್ದು, ಅದರಲ್ಲಿ 25 ಸಾಕ್ಷಿಗಳನ್ನು ವಿಚಾರಣೆ ನಡೆಸಲಾಗಿತ್ತು. ಈತ ಚಿನ್ನಾಭರಣ ಅಡವಿಟ್ಟ ಮುಂಬಯಿಯ ಬ್ಯಾಂಕ್‌ ಅಧಿಕಾರಿಗಳನ್ನು ಕರೆಸಿ ಸಾಕ್ಷಿಯಾಗಿ ಪರಿಗಣಿಸಲಾಗಿತ್ತು. ಜಿಲ್ಲಾ ಸರಕಾರಿ ಅಭಿಯೋಜಕರಾಗಿ ಪ್ರಕಾಶ್ಚಂದ್ರ ಶೆಟ್ಟಿ ವಾದಿಸಿದ್ದರು. 

ಪ್ರಕರಣದ ವಿವರ
ಕುಂದಾಪುರದ ಶಾಸ್ತ್ರಿ ಸರ್ಕಲ್‌ ಬಳಿಯಿರುವ ವಸತಿಗೃಹದಲ್ಲಿ 2015ರ ಎ. 15ರಂದು ಅಜಯ್‌ ಕುಮಾರ್‌ ಎಂದು ಹೇಳಿಕೊಂಡು ರೂಂ ಬುಕ್‌ ಮಾಡಿದ್ದ. ಗಂಗೊಳ್ಳಿಯ ಲೀಲಾವತಿ ದೇವಾಡಿಗ (55) ಅವರನ್ನು ಗಂಗೊಳ್ಳಿಯ ದೇವಸ್ಥಾನಕ್ಕೆ ದೇಣಿಗೆ ಕೊಡುವುದಾಗಿ ಕರೆಸಿ, ಬಳಿಕ ಜ್ಯೂಸ್‌ ಹಾಗೂ ನೀರಿನಲ್ಲಿ ಅಮಲು ಪದಾರ್ಥ ಬೆರೆಸಿ ಪ್ರಜ್ಞೆ ತಪ್ಪುವಂತೆ ಮಾಡಿ ವಿದ್ಯುತ್‌ ವಯರ್‌ನಿಂದ ಕತ್ತು ಬಿಗಿದು ಕೊಲೆಗೈದಿದ್ದ. ಗಾಯವಾದ ಕುತ್ತಿಗೆಗೆ ಬಟ್ಟೆ ಕಟ್ಟಿ ವಸತಿಗೃಹದಿಂದ ಮೃತದೇಹವನ್ನು ಹೊರಗೆ ಸಾಗಿಸಲು ಪ್ರಯತ್ನಿಸಿದ್ದ. ಅದರಲ್ಲಿ ವಿಫಲನಾದ ಬಳಿಕ ಆಕೆ ಹೆಸರಲ್ಲಿ ಈತನೇ ಬೇರೊಬ್ಬರಿಂದ ಡೆತ್‌ ನೋಟ್‌ ಬರೆಸಿ, ಕೊಲೆಗೆ ಬಳಸಿದ್ದ ವಯರ್‌ ಅನ್ನು ಕಿಟಕಿಯಿಂದ ಹೊರಗೆಸೆದು, ಮೃತದೇಹದ ಮೇಲಿದ್ದ ಚಿನ್ನಾಭರಣ, ಮೊಬೈಲ್‌ ಜತೆಗೆ ಮುಂಬಯಿಗೆ ಪರಾರಿಯಾಗಿದ್ದ. 

ಟಾಪ್ ನ್ಯೂಸ್

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.