ಮಂಚಿಕೆರೆ ಭೂಮಿ ಬಿರುಕು: ಭೂ ವಿಜ್ಞಾನಿಗಳಿಂದ ಪರಿಶೀಲನೆ
ಸಾಮಾನ್ಯ ಪ್ರಕ್ರಿಯೆ; ಭಯ ಬೇಡ: ವಿಜ್ಞಾನಿಗಳು
Team Udayavani, Jun 20, 2019, 5:44 AM IST
ಉಡುಪಿ: ಮಣಿಪಾಲ-ಅಲೆವೂರು ರಸ್ತೆಯ ಮಂಚಿಕೆರೆ ನಾಗಬ್ರಹ್ಮಸ್ಥಾನ ಮುಂಭಾಗದ ಕಾಲನಿ ಸಮೀಪ ಭೂಮಿಯಲ್ಲಿ ಬಿರುಕು ಕಂಡುಬಂದಿರುವ ಪ್ರದೇಶಕ್ಕೆ ಬುಧವಾರ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಅಂತರ್ಜಲ ಪ್ರಾಧಿಕಾರದ ಭೂ ವಿಜ್ಞಾನಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.
ವಿಜ್ಞಾನಿಗಳು ಸುಮಾರು ಒಂದೂವರೆ ಗಂಟೆಯ ಕಾಲ ಮಂಚಿಕೆರೆಯ ಭೂ ವೈಜ್ಞಾನಿಕ ರಚನೆ ಬಗ್ಗೆ ಪರಿಶೀಲನೆ ನಡೆಸಿದರು.
ಭೂಮಿ ಉಷ್ಣತೆ ಹೆಚ್ಚಿದೆ!
ಇಲ್ಲಿ ಒಂದೆಡೆ ತಗ್ಗು ಮತ್ತೂಂದು ಕಡೆ ಎತ್ತರ ಪ್ರದೇಶ ಇದ್ದು, ಮೇಲ್ಭಾಗದಲ್ಲಿ ಮುರ ಕಲ್ಲು ಮತ್ತು ಒಳಗಿನ ಪದರದಲ್ಲಿ ಜೇಡಿ ಮಣ್ಣು ಇದೆ. ಅಂತರ್ಜಲ ಕಡಿಮೆಯಾಗಿರುವ ಪರಿಣಾಮ ಭೂಮಿ ಒಳಗೆ ಉಷ್ಣತೆ ಹೆಚ್ಚಾಗಿದೆ. ಮಳೆನೀರು ಇಂಗಿದಾಗ ಮುರಕಲ್ಲಿನ ಅಡಿ ಭಾಗದಲ್ಲಿರುವ ಮೃದುವಾದ ಜೇಡಿ ಮಣ್ಣು ನಿಧಾನವಾಗಿ ಕೊಚ್ಚಿ ಹೋಗುತ್ತಿದೆ. ಆದ್ದರಿಂದ ಬಿರುಕು ಕಾಣಿಸಿಕೊಂಡಿದೆ. ಇದಕ್ಕಾಗಿಭಯಪಡಬೇಕಾಗಿಲ್ಲ. ಪಶ್ಚಿಮ ಘಟ್ಟಪ್ರದೇಶಗಳಲ್ಲಿ ಇದು ಸಾಮಾನ್ಯವಾಗಿರುತ್ತದೆ. ಮೇಲ್ನೋಟಕ್ಕೆ ಈ ಬಿರುಕು ಭೂಕಂಪನದಿಂದ ಆದಂತಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ವಿಜ್ಞಾನಿ ರಾನ್ಜಿ ನಾಯಕ್ ತಿಳಿಸಿದ್ದಾರೆ.
ಸಂಶೋಧನೆ ಅಗತ್ಯ
ನಾಲ್ಕು ದಿಕ್ಕುಗಳಲ್ಲಿರುವ ಗುಹೆಗಳಿಂದಾಗಿ ಈ ಬಿರುಕು ಸಂಭವಿಸಿರಬಹುದು ಎಂಬುದನ್ನು ನಾವು ತತ್ಕ್ಷಣ ಹೇಳಲಾಗದು. ಈ ಬಗ್ಗೆ ದೊಡ್ಡ ಮಟ್ಟದಲ್ಲಿ ಸಂಶೋಧನೆ ಮಾಡಿದ ಬಳಿಕವಷ್ಟೇ ಹೇಳಬಹುದು. ಮೇಲ್ನೋಟಕ್ಕೆ ಇದು ಸಾಮಾನ್ಯ ಪ್ರಕ್ರಿಯೆ ಎಂದರು.
ಜಿಲ್ಲಾಧಿಕಾರಿಗೆ ವರದಿ
ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ವಿಜ್ಞಾನಿ ರಾನ್ಜಿ ನಾಯಕ್ ನೇತೃತ್ವದಲ್ಲಿ ಭೂ ವಿಜ್ಞಾನಿಗಳಾದ ಮಹೇಶ್, ಡಾ| ಮಹದೇಶ್ವರ, ಗೌತಮ್ ಶಾಸ್ತ್ರಿ, ಸಂಧ್ಯಾ, ಅಂತರ್ಜಲ ಪ್ರಾಧಿಕಾರದ ಪ್ರಭಾರ ಹಿರಿಯ ಭೂ ವಿಜ್ಞಾನಿ ಡಾ| ದಿನಕರ ಶೆಟ್ಟಿ, ಕಂದಾಯ ನಿರೀಕ್ಷಕ ಉಪೇಂದ್ರ ಅವರು ಮಂಚಿಕೆರೆಯ ಭೌಗೋಳಿಕ ಶಿಲಾ ರಚನೆಯ ಬಗ್ಗೆ ಅಧ್ಯಯನ ನಡೆಸಿ ವರದಿಯನ್ನು ಸಿದ್ಧಪಡಿಸಲಿದ್ದು, ಬಳಿಕ ಜಿಲ್ಲಾಧಿಕಾರಿಗೆ ಸಲ್ಲಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ