ಮಂಗಳೂರು – ಆತ್ರಾಡಿ ರಾಜ್ಯ ಹೆದ್ದಾರಿಗೆ ಮುನ್ನುಡಿ

ರಸ್ತೆ ಬದಿ ಜಾಗದ ಮಾಲಕರಿಗೆ ನೋಟಿಸ್‌

Team Udayavani, Nov 6, 2019, 4:55 AM IST

dd-33

ಬೆಳ್ಮಣ್‌: ಬಹಳ ವರ್ಷಗಳಿಂದ ಚರ್ಚೆಯಲ್ಲಿರುವ ಮಂಗಳೂರು- ಆತ್ರಾಡಿ ರಾಜ್ಯ ಹೆದ್ದಾರಿ ನಿರ್ಮಾಣ ಕಾಮಗಾರಿ ಸದ್ಯದಲ್ಲೇ ಆರಂಭವಾಗುವ ಸಾಧ್ಯತೆಗಳು ದಟ್ಟವಾಗಿದ್ದು, ಮಂಗಳವಾರ ಮುಂಡ್ಕೂರಿನ ರಸ್ತೆ ಬದಿ ಜಮೀನು ಮತ್ತು ಕಟ್ಟಡಗಳ ಮಾಲಕರಿಗೆ ಜಮೀನು ತೆರವುಗೊಳಿಸುವಂತೆ ಕಾರ್ಕಳ ಲೋಕೋಪಯೋಗಿ ಇಲಾಖೆಯಿಂದ ನೋಟಿಸ್‌ ಜಾರಿಯಾಗಿದೆ.

ಕಾರ್ಕಳ ತಾಲೂಕಿನ ಮಂಗಳೂರು-ಆತ್ರಾಡಿ ರಾಜ್ಯ ಹೆದ್ದಾರಿ 67ರ ಕಿ.ಮೀ. 36.48ರಿಂದ ಕಿ.ಮೀ. 46.28 ಮತ್ತು ಕಿ.ಮೀ. 49.99ರ ವರೆಗೆ (ಸಂಕಲಕರಿಯ -ಮುಂಡ್ಕೂರು-ಬೆಳ್ಮಣ್‌ ರಸ್ತೆ ಮತ್ತು ಬೆಳ್ಮಣ್‌-ಗುಂಡುಕಲ್ಲು ರಸ್ತೆ)ಯ ಉಪ ವಿಭಾಗದ ವ್ಯಾಪ್ತಿಯಲ್ಲಿ ಬರುವ ರಸ್ತೆಯನ್ನು ಅಭಿವೃದ್ಧಿ ಪಡಿಸುವ ಕುರಿತು ರಸ್ತೆಯ ಇಕ್ಕೆಲಗಳಲ್ಲಿರುವ ಜಾಗದ ಸರ್ವೆ ಕಾರ್ಯ ನಡೆಸಲು ಉದ್ದೇಶಿಸಲಾಗಿದ್ದು, ಸಹಕರಿಸಬೇಕು ಎಂದು ನೋಟಿಸ್‌ನಲ್ಲಿ ಉಲ್ಲೇಖೀಸಲಾಗಿದೆ.

ಕಾರ್ಕಳದ ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಉಪವಿಭಾಗದ ಸಹಾಯಕ ಕಾ.ನಿ. ಎಂಜಿನಿಯರ್‌ ಈ ನೋಟಿಸನ್ನು ಕಳುಹಿಸಿದ್ದು, 250 ಮಂದಿಗೆ ರವಾನೆಯಾಗಿದೆ. ಸೂಕ್ತ ಪರಿಹಾರ ಕೊಟ್ಟಲ್ಲಿ ಜಾಗ ಬಿಟ್ಟು ಕೊಡಲು ಜನತೆ ತಯಾರಾಗಿದ್ದಾರೆ.

ವಿಸ್ತರಣೆ ಮಾತ್ರ
ಇಲಾಖೆಯ ಎಂಜಿನಿಯರ್‌ ಮಿಥುನ್‌ “ಉದಯವಾಣಿ’ಯೊಂದಿಗೆ ಮಾತನಾಡಿ, ಸಂಕಲಕರಿಯ ಸೇತುವೆಯಿಂದ ಬೆಳ್ಮಣ್‌ ಚರ್ಚ್‌ವರೆಗೆ ರಸ್ತೆ ವಿಸ್ತರಣೆ ನಡೆಯಬೇಕಾಗಿದ್ದು ಸರ್ವೇಗಾಗಿ ನೋಟಿಸ್‌ ಜಾರಿ ಮಾಡಲಾಗಿದೆ. ವರದಿಯನ್ನು ಲೋಕೋಪಯೋಗಿ ಇಲಾಖೆಗೆ ಕಳುಹಿಸಲಾಗುವುದು. ವಿಸ್ತರಣೆ ಸಂದರ್ಭ ಜಮೀನು, ಕಟ್ಟಡ ಕಳೆದುಕೊಳ್ಳುವವರು ಜಿಲ್ಲಾಡಳಿತದ ಮೂಲಕ ಪರಿಹಾರ ಪಡೆಯುವರು. ಇದು ರಾಜ್ಯ ಹೆದ್ದಾರಿ ನಿರ್ಮಾಣದ ಆರಂಭವಲ್ಲ ಎಂದಿದ್ದಾರೆ.

ಮಂಗಳೂರು – ಆತ್ರಾಡಿ ರಾಜ್ಯ ಹೆದ್ದಾರಿ ನಿರ್ಮಾಣದ ದೃಷ್ಟಿಯಿಂದ ಬೆಳ್ಮಣ್‌ – ಸಂಕಲಕರಿಯ ರಸ್ತೆ ವಿಸ್ತರಣೆಯ ಜತೆ ಅಭಿವೃದ್ಧಿಗೆ 55 ಕೋಟಿ ರೂ. ಮೊತ್ತದ ಅನುದಾನಕ್ಕಾಗಿ ಸರಕಾರಕ್ಕೆ ಪತ್ರ ಬರೆಯಲಾಗಿದೆ. ಸಾರಿಗೆ-ಸಂಪರ್ಕದ ಒಳಿತಿನ ದೃಷ್ಟಿಯಿಂದ ಮುಂದಿನ ಕ್ರಮ ಕೈಗೊಳ್ಳಲಾಗುವುದು.
– ವಿ. ಸುನಿಲ್‌ ಕುಮಾರ್‌, ಕಾರ್ಕಳ ಶಾಸಕ

ಮುಂಡ್ಕೂರು ಭಾಗದಲ್ಲಿ ರಸ್ತೆ ಇಕ್ಕಟ್ಟಾಗಿರುವುದು ನಿಜ; ಸೂಕ್ತ ಪರಿಹಾರ ನೀಡಿದಲ್ಲಿ ಜಾಗ ಬಿಟ್ಟು ಕೊಡಲು ಸಿದ್ಧ.
– ದೇವಪ್ಪ ಸಪಳಿಗ, ಮುಂಡ್ಕೂರು ನಿವಾಸಿ

ಈಗ ಕೇವಲ ಸರ್ವೇಗಾಗಿ ನೋಟಿಸ್‌ ನೀಡಲಾಗಿದೆ. ಸರ್ವೇ ವರದಿಯನ್ನು ಕಾರ್ಕಳ ಶಾಸಕರ ಶಿಫಾರಸಿನ ಮೂಲಕ ಇಲಾಖೆಗೆ ಕಳುಹಿಸಲಾಗುವುದು.
– ಮಿಥುನ್‌, ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌, ಕಾರ್ಕಳ

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 29  ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 29  ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.